ಜನರಿಗೋಸ್ಕರವೇ ಪದವಿ ಮುಡಿಪು

ಉದಯವಾಣಿ ಸಂದರ್ಶನ ರಾಸಿದ್ದಯ್ಯ ಸ್ವಾಮಿ ಕುಕನೂರ

Team Udayavani, May 25, 2019, 11:54 AM IST

25-May-15

ರಾಯಚೂರು: ದೇಶದಲ್ಲಿ ಎದ್ದ ಮೋದಿ ಅಲೆಯಲ್ಲಿ ಗೆದ್ದ ಸ್ಥಾನಗಳಲ್ಲಿ ರಾಯಚೂರು ಕೂಡ ಒಂದು. ಹಾಲಿ ಸಂಸದ ಬಿ.ವಿ. ನಾಯಕ ಅವರನ್ನು 1,17,716 ಮತಗಳ ಅಂತರದಿಂದ ಹೀನಾಯವಾಗಿ ಸೋಲಿಸುವ ವಿಕ್ರಮ ಮೆರೆದ ರಾಜಾ ಅಮರೇಶ್ವರ ನಾಯಕ ಜಿಲ್ಲೆಯ ಬಗ್ಗೆ ತಮ್ಮದೇ ಚಿಂತನೆ ಹೊಂದಿದ್ದಾರೆ. ಅವರ ಉದ್ದೇಶ, ಅಧಿಕಾರಾವಧಿಯಲ್ಲಿ ಹಾಕಿಕೊಂಡಿರುವ ಯೋಜನೆ ಸೇರಿ ಇನ್ನಿತರ ವಿಚಾರಗಳನ್ನು ‘ಉದಯವಾಣಿ’ ಜತೆ ಹಂಚಿಕೊಂಡಿದ್ದಾರೆ.

ಪ್ರಚಂಡ ಬಹುಮತದಿಂದ ಗೆದ್ದು ವಿಜಯ ಸಾಧಿಸಿದ್ದೀರಿ. ಈ ಗೆಲುವನ್ನು ಹೇಗೆ ವಿಶ್ಲೇಷಿಸುತ್ತೀರಿ?
ಅಮರೇಶ್ವರ ನಾಯಕ: ಇದು ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವು. ಜನರ ಆಶೀರ್ವಾದಕ್ಕೆ ನಾನು ಚಿರಋಣಿ. ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ.

•ಯಾವ ಪ್ರಮುಖ ಮಾನದಂಡಗಳು ನಿಮ್ಮ ಗೆಲುವಿಗೆ ನೆರವಾಯಿತು?ಅಮರೇಶ್ವರ ನಾಯಕ: ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ನಾನು ಹೊಸಬನಲ್ಲ. ಈ ಹಿಂದೆ ಎರಡು ಬಾರಿ ಶಾಸಕನಾಗಿ, ಸಚಿವನಾಗಿ ಜನರಿಗೆ ಪರಿಚಿತನಾಗಿದ್ದೆ. ನನಗೂ ಸಾಕಷ್ಟು ರಾಜಕೀಯ ಅನುಭವವಿದೆ. ಜನರ ಜತೆಗಿದ್ದ ಹಳೇ ಬಾಂಧವ್ಯ ನನ್ನ ಕೈ ಹಿಡಿಯಿತು. ಅದರ ಜತೆಗೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಗೆಲುವಿಗೆ ಸಾಕಷ್ಟು ಶ್ರಮಿಸಿತು. ನಾನು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು, ವರಿಷ್ಠರು ನಡೆಸಿದ ಪ್ರಚಾರ ಗೆಲುವಿಗೆ ಅನುಕೂಲವಾಯಿತು.

•ಮುಂದಿನ ಧ್ಯೇಯೋದ್ದೇಶಗಳೇನು?
ಅಮರೇಶ್ವರ ನಾಯಕ: ನನಗೆ ಈ ಸ್ಥಾನ ನೀಡಿದ್ದು ಕ್ಷೇತ್ರದ ಮತದಾರರು. ಅವರಿಗೆ ನನ್ನಿಂದ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದನ್ನು ಮಾಡಬೇಕು ಎಂಬುದು ನನ್ನ ಗುರಿ. ಕ್ಷೇತ್ರದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಅವುಗಳಿಗೊಂದು ಅಂತ್ಯ ಹಾಡಬೇಕಿದೆ.

ಸಂಸದರಾಗಿ ಆಯ್ಕೆಯಾದ ಮೇಲೆ ನಿಮ್ಮ ಮೊದಲ ಆದ್ಯತೆ ಯಾವವು?
ಅಮರೇಶ್ವರ ನಾಯಕ: ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಸಾಕಷ್ಟು ವಿಚಾರಗಳಲ್ಲಿ ಹಿಂದುಳಿದಿವೆ. ಕುಡಿಯುವ ನೀರಿಗೆ ಮೊದಲಾದ್ಯತೆ ನೀಡುತ್ತೇನೆ. ನನೆಗುದಿಗೆ ಬಿದ್ದ ಅನೇಕ ಯೋಜನೆಗಳಿಗೆ ಕಾಯಕಲ್ಪ ನೀಡಬೇಕಿದೆ. ಹಿಂದೆ ನಾನು ಸಚಿವನಾಗಿದ್ದಾಗ ರಾಂಪುರ ಏತ ನೀರಾವರಿಗೆ ಚಾಲನೆ ನೀಡಿದ್ದೆ. ಬಲದಂಡೆ ಯೋಜನೆಗೂ ಚಾಲನೆ ನೀಡಲಾಗಿತ್ತು. ಜನರು ಇಂದಿಗೂ ಆ ಯೋಜನೆಗಳನ್ನು ಸ್ಮರಿಸುತ್ತಾರೆ. ಅದರ ಜತೆಗೆ ಹೊಸ ನೀರಾವರಿ ಯೋಜನೆಗಳು, ನನೆಗುದಿಗೆ ಬಿದ್ದ ರೈಲ್ವೆ ಯೋಜನೆಗಳನ್ನು ಮುಗಿಸಲು ಒತ್ತು ನೀಡಲಾಗುವುದು. ಶೈಕ್ಷಣಿಕವಾಗಿ ಹಿಂದುಳಿದ ಕ್ಷೇತ್ರದಲ್ಲಿ ಅದಕ್ಕೆ ಪೂರಕ ಸಂಸ್ಥೆಗಳ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು.

ಈಗಾಗಲೇ ಸಾಕಷ್ಟು ಯೋಜನೆ ಗಳಿದ್ದರೂ ನೀರು ಸಿಗುತ್ತಿಲ್ಲ. ಅವುಗಳ ವಿಚಾರ?
ಅಮರೇಶ್ವರ ನಾಯಕ: ಖಂಡಿತ ಆ ವಿಚಾರವೂ ತಲೆಯಲ್ಲಿದೆ. ನನ್ನ ತವರೂರಾದ ಗುರುಗುಂಟಾದಲ್ಲಿ 22 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನಿರುಪಯುಕ್ತವಾಗಿದೆ. ಕೆಲ

ಗುತ್ತಿಗೆದಾರರು ಇಂಥ ಯೋಜನೆಗಳಲ್ಲಿ ಕೋಟಿ ಕೋಟಿಗಟ್ಟಲೇ ಲೂಟಿ ಮಾಡಿಕೊಂಡಿದ್ದಾರೆ. ಅಂಥ ಯೋಜನೆಗಳ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಪ್ರಯತ್ನ ಮಾಡುತ್ತೇನೆ. ಅಲ್ಲದೇ, ನನೆಗುದಿಗೆ ಬಿದ್ದ ಯೋಜನೆಗಳ ಜಾರಿಗೆ ಒತ್ತು ನೀಡುತ್ತೇನೆ.

ನಿಮ್ಮ ಯೋಜನೆಗಳ ಸಾಕಾರಕ್ಕೆ ರಾಜ್ಯ ಸರ್ಕಾರದ ಸಾಥ್‌ ಸಿಗುವ ವಿಶ್ವಾಸವಿದೆಯೇ?
ಅಮರೇಶ್ವರ ನಾಯಕ: ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರ್ಕಾರ ಬರುವ ವಿಶ್ವಾಸವಿದೆ. ಜನರು 104 ಸ್ಥಾನ ಗೆಲ್ಲಿಸಿದ್ದು, ಸರ್ಕಾರ ನಡೆಸಲಿ ಎಂದೇ. ಈಗಲೂ 25 ಸ್ಥಾನ ನಮಗೆ ಬಂದಿವೆ ಎಂದರೆ ಜನರಿಗೆ ಬಿಜೆಪಿ ಆಡಳಿತದ ಮೇಲೆ ವಿಶ್ವಾಸವಿದೆ.

ಆದರೆ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆಯಲ್ಲವೇ?
ಅಮರೇಶ್ವರ ನಾಯಕ: ಜನರು ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎನ್ನಲಿಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ. ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಲೋಕಸಭೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಹಿಂದೆ ರಾಮಕೃಷ್ಣ ಹೆಗಡೆ ಇಂಥ ಸ್ಥಿತಿ ಎದುರಾದಾಗ ರಾಜೀನಾಮೆ ನೀಡಿದ್ದರು. ರಾಜ್ಯ ಸರ್ಕಾರಕ್ಕೆ ಜನಾದೇಶವಿಲ್ಲ. ಅದನ್ನು ಅರ್ಥ ಮಾಡಿಕೊಂಡು ಅವರೇ ಹಿಂದೆ ಸರಿಯವುದು ಸೂಕ್ತ.

ಕೊನೆಯದಾಗಿ. ಹಿಂದಿನ ಸಂಸದರು ಜನರ ಕೈಗೆ ಸಿಗಲಿಲ್ಲ ಎಂಬ ಅಪವಾದವಿದೆ. ಈ ಬಗ್ಗೆ ನಿಮ್ಮ ನಿಲುವೇನು?
ಅಮರೇಶ್ವರ ನಾಯಕ: ಜನರಿಂದ ಸಿಕ್ಕ ಪದವಿ ಜನರಿಗೋಸ್ಕರವೇ ಮುಡಿಪು ಎಂಬುದು ನನ್ನ ಸಿದ್ಧಾಂತ. ನನಗೆ ಅಧಿಕಾರ ಕೊಟ್ಟವರು ಜನರು. ಅವರ ಸೇವೆಯನ್ನು ಎಷ್ಟು ಸಾಧ್ಯವೋ ಅಷ್ಟಾಗಿ ಮಾಡುವೆ. ನಾನು ಜನರ ಮಧ್ಯೆಯೇ ಇರುವವ. ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡಿ ಜನರ ವಿಶ್ವಾಸ ಗಳಿಸುವೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.