ರಿಮ್ಸ್ ನಲ್ಲಿ ಅಗ್ನಿ ಅವಘಡ ತಡೆಗೆ ಸ್ಪಿಂಕ್ಲರ್‌ !

2.35 ಕೋಟಿ ವೆಚ್ಚದಲ್ಲಿ ಕಾಮಗಾರಿ ನಿರ್ವಹಣೆ ಅರೆಬರೆ ಕಾಮಗಾರಿ ಈಗ ಪೂರ್ಣಗೊಳ್ಳುತ್ತಿದೆ

Team Udayavani, Oct 25, 2019, 2:51 PM IST

25-October–15

„ಸಿದ್ಧಯ್ಯಸ್ವಾಮಿ ಕುಕನೂರು

ರಾಯಚೂರು: ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿ ಅವಘಡ ತಡೆಗೆ ಕಡ್ಡಾಯವಾಗಿ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳನ್ನು ರಿಮ್ಸ್‌ನಲ್ಲಿ ಈಗ ಕೈಗೊಳ್ಳಲಾಗುತ್ತಿದೆ. ಅರೆಬರೆಯಾಗಿದ್ದ ಕಾಮಗಾರಿಯನ್ನು 2.35 ಕೋಟಿ ರೂ. ವೆಚ್ಚದಲ್ಲಿ ಈಗ ಮುಗಿಸಲಾಗುತ್ತಿದೆ.

ಈ ಮುಂಚೆ ಕೇವಲ ಸೈರನ್‌ ಮತ್ತು ನೀರಿನ ಪೈಪ್‌ಗ್ಳನ್ನು ಅಳವಡಿಕೆ ಮಾಡಿ ಕೈ ಬಿಡಲಾಗಿತ್ತು. ಈಗ ಸ್ಪಿಂಕ್ಲರ್‌ಗಳನ್ನು ಅಳವಡಿಸಿ ಕಾಮಗಾರಿಗೆ ಕೊನೆ ಹಾಡಲಾಗುತ್ತಿದೆ. ಯಾವುದೇ ಬಹುಮಹಡಿ ಕಟ್ಟಡ ಕಟ್ಟಬೇಕಾದರೆ ಅಗ್ನಿಶಾಮಕ ದಳದ ಪರವಾನಗಿ ಬೇಕು. ಕಟ್ಟಡ ಮುಗಿದ ಮೇಲೆ ಕೂಡ ಎಲ್ಲ ಸುಸಜ್ಜಿತವಾಗಿದ್ದರೆ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ, ರಿಮ್ಸ್‌ನಲ್ಲಿ ಆರು ಅಂತಸ್ತಿನ ಕಟ್ಟಡವಿದ್ದು, ಅಗ್ನಿ ಅವಘಡ ತಡೆಗೆ ಈ ಹಿಂದೆ ಪೈಪ್‌ ಗಳನ್ನು ಅಳವಡಿಕೆ ಮಾಡಲಾಗಿತ್ತು. ಅಗ್ನಿ ಅವಘಡ ಸಂಭವಿಸಿದರೆ ಸೈರನ್‌ ಮಾಡುವ ಯಂತ್ರಗಳನ್ನು ಅಳವಡಿಸಲಾಗಿತ್ತು. ಆದರೆ, ಅಗ್ನಿ ನಂದಿಸಲು ಬೇಕಾದ ನೀರು ಸಿಂಪರಣೆಗೆ ವ್ಯವಸ್ಥೆಯೇ ಇರಲಿಲ್ಲ. ಅಗ್ನಿ ಅನಾಹುತ ಜರುಗಿದರೆ ಬೆಂಕಿ ನಂದಿಸುವಷ್ಟರಲ್ಲಿ ಸಿಬ್ಬಂದಿ ಹೈರಾಣಾಗಬೇಕಾಗಿತ್ತು. ಇದರಿಂದ ಅಗ್ನಿ ಶಾಮಕ ದಳ ಅಧಿಕಾರಿಗಳು ಕೆಲವೊಂದು ನ್ಯೂನತೆಗಳಿದ್ದು ನಿರಾಕ್ಷೇಪಣಾ ಪತ್ರ ನೀಡಲು ನಿರಾಕರಿಸಿದ್ದರು. ಅವುಗಳನ್ನು ಸರಿಪಡಿಸಿಕೊಂಡು ಅನುಷ್ಠಾನ ವರದಿ ನೀಡಲು ಸೂಚಿಸಿದ್ದರು.

2017ರಲ್ಲಿ ಪ್ರಸ್ತಾವನೆ: 2017ರ ಮಾರ್ಚ್‌ನಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜುಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರ 2018ರಲ್ಲಿ ಮಂಜೂರಾತಿ ನೀಡಿದ್ದು, ಲೋಕೋಪಯೋಗಿ ಇಲಾಖೆಯಿಂದಲೇ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿದೆ. ಐಸಿ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಎನ್ನುವ ಸಂಸ್ಥೆಗೆ 2.35 ಕೋಟಿ ರೂ.ಗೆ ಟೆಂಡರ್‌ ವಹಿಸಲಾಗಿದೆ. ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಮುಗಿಯಲಿದೆ.

ಏನಿದು ವ್ಯವಸ್ಥೆ?: ಜನವಸತಿ ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿ ಅನಾಹುತ ಸಂಭವಿಸಿದಾಗ ತುರ್ತು ಕ್ರಮ ಕೈಗೊಳ್ಳಲು ಇಂಥ ನೀರಿನ ಸಿಂಪರಣೆ ಸಂಪರ್ಕ ಕಲ್ಪಿಸಲಾಗುತ್ತದೆ. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಸೈರನ್‌ ಬಾರಿಸಿಕೊಳ್ಳಲಿದ್ದು, ಕೂಡಲೇ ಸ್ಪಿಂಕ್ಲರ್‌ ಗಳಿಂದ ನೀರಿನ ಸಿಂಪರಣೆಯಾಗುತ್ತದೆ. ರೋಗಿಗಳಿರುವ ಕಾರಣ ಅವರನ್ನು ಕಾಪಾಡುವುದು, ಮತ್ತೂಂದು ಸ್ಥಳಕ್ಕೆ ಕರೆದೊಯ್ಯುವುದು ಕಷ್ಟದ ಕೆಲಸವಾದ್ದರಿಂದ ಈ ಯೋಜನೆ ಅನುಕೂಲವಾಗಲಿದೆ.

ನಿರ್ವಹಣೆ ಬಗ್ಗೆ ಟೀಕೆ: ಈ ಕಾಮಗಾರಿ ನಿರ್ವಹಣೆ ವೇಳೆ ರೋಗಿಗಳಿದ್ದರೂ ವೆಲ್ಡಿಂಗ್‌ ಮಾಡಲಾಗುತ್ತಿದೆ ಎನ್ನುವ ದೂರು ಕೇಳಿ ಬಂದಿದ್ದವು. 500 ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಗೆ ನಿತ್ಯ
700ಕ್ಕೂ ಅ ಧಿಕ ರೋಗಿಗಳು ಬರುತ್ತಿದ್ದಾರೆ. ಬೆಡ್‌ಗಳ ಕೊರತೆ ಇದೆ. ರೋಗಿಗಳನ್ನು ಬೇರೆ ಕಡೆ ಸ್ಥಳಾಂತರಕ್ಕೂ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಾಗಿ ರೋಗಿಗಳಿಗೆ ಧಕ್ಕೆ ಆಗದ ರೀತಿಯಲ್ಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿತ್ತು ಎನ್ನುತ್ತಾರೆ ಅಧಿಕಾರಿಗಳು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.