ಕೃಷಿ ವಿವಿಯಲ್ಲಿ ನಿರ್ಮಾಣವಾಗಲಿದೆ ಆಕರ್ಷಕ ಮುಖ್ಯದ್ವಾರ


Team Udayavani, Nov 6, 2019, 4:15 PM IST

6–November-18

ರಾಯಚೂರು: ಇಷ್ಟು ದಿನ ಕೇವಲ ನಾಮಫಲಕದಿಂದ ಕಂಡು ಬರುತ್ತಿದ್ದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಇನ್ನು ಮುಂದೆ ತನ್ನದೇಯಾದ ಭಿನ್ನ ಕಲಾಕೃತಿಯೊಂದಿಗೆ ಸೆಳೆಯಲಿದೆ. ವಿವಿ ಮುಖ್ಯ ದ್ವಾರಬಾಗಿಲಿನಲ್ಲಿ ವಿಶೇಷ ಕಲಾಕೃತಿಗಳನ್ನು ನಿರ್ಮಿಸಲು ಆಡಳಿತ ಮಂಡಳಿ ಮುಂದಾಗಿದೆ.

ಕೃಷಿ ವಿವಿ ರೈತಪರ ಚಟುವಟಿಕೆಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿದೆ. ಅನೇಕ ಸಂಶೋಧನೆಗಳು, ಹೊಸ ಹೊಸ ತಳಿಗಳ ಆವಿಷ್ಕಾರಗಳನ್ನು ಮಾಡುತ್ತಲೇ ಬಂದಿದೆ. ಅದರ ಜತೆಗೆ ಪ್ರತಿ ವರ್ಷ ಕೃಷಿಮೇಳ ನಡೆಸುವ ಮೂಲಕ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮವೂ ನಡೆಯುತ್ತಿದೆ. ಈಗ ನಾಮಫಲಕಗಳ ಹೊರತಾಗಿಸಿ ಕೃಷಿ ವಿವಿಯ ಸಾಂಕೇತಿಕ ಚಿತ್ರಣಗಳಾಗಲಿ, ಕಲಾಕೃತಿಗಳಾಗಲಿ ಇಲ್ಲ. ಇದನ್ನು ಮನಗಂಡ ಕುಲಪತಿ ಕೆ.ಎನ್‌.ಕಟ್ಟಿಮನಿ ಅಂದಾಜು 14 ಲಕ್ಷ ರೂ. ವೆಚ್ಚದಲ್ಲಿ ವಿಭಿನ್ನ ಕಲಾಕೃತಿ ರಚನೆಗೆ ಮುಂದಾಗಿದ್ದಾರೆ. ಈಗಾಗಲೇ ಟೆಂಡರ್‌ ಹಂತದವರೆಗೆ ಪ್ರಕ್ರಿಯೆ ಮುಂದುವರಿದಿದ್ದು, ಏನೇನು ರಚಿಸಬೇಕು ಎಂಬ ನೀಲನಕ್ಷೆಯನ್ನು ಕೂಡ ತಯಾರಿಸಲಾಗಿದೆ.

ಹೀಗಿರಲಿದೆ ಮುಖ್ಯ ದ್ವಾರ: ಈಗ ದೊಡ್ಡ ದೊಡ್ಡ ಗೋಡೆಗಳು, ಅದರ ಮೇಲೆ ಒಂದೆಡೆ ಕನ್ನಡದಲ್ಲಿ ಮತ್ತೂಂದೆಡೆ ಇಂಗ್ಲಿಷ್‌ನಲ್ಲಿ ನಾಮಫಲಕಗಳಿವೆ. ಆದರೆ, ಈಗ ರೂಪುಗೊಂಡ ನೀಲನಕ್ಷೆ ಪ್ರಕಾರ ಕಿಲಾರಿ ತಳಿಯ ಎರಡು ಎತ್ತುಗಳಿಂದ ಜಮೀನು ಬಿತ್ತನೆ ಮಾಡುತ್ತಿರುವ ರೈತ. ಆತನ ಹಿಂದೆ ಸಾಗುತ್ತಿರುವ ರೈತ ಮಹಿಳೆ ಮಾದರಿ ನಿರ್ಮಿಸಲಾಗುತ್ತಿದೆ. ತಕ್ಷಣಕ್ಕೆ ನೋಡಿದರೆ ನೈಜವಾಗಿ ಕೆಲಸ ನಡೆದಿದೆಯೋ ಎನ್ನುವ ಭಾವ ಬರಬೇಕು ಎಂಬುದು ಅವರ ಅಭಿಪ್ರಾಯ. ಅದರ ಜತೆಗೆ ಎರಡು ಗೇಟ್‌ಗಳ ಬಳಿ ಹಳೇ ಪದ್ಧತಿಯಲ್ಲಿ ಸುಗ್ಗಿ ಮಾಡುತ್ತಿರುವ ರೈತರ ಕಲಾಕೃತಿಗಳು, ಆಧುನಿಕ ಕೃಷಿ ಪರಿಕರಗಳನ್ನು ನಿರ್ಮಿಸಲಾಗುತ್ತಿದೆ.

ಒಂದು ಬದಿ ತುಂಗಭದ್ರಾ, ಮತ್ತೂಂದು ಬದಿ ಕೃಷ್ಣೆ ಹೆಸರು ಬರೆಯಿಸಿ ನದಿಗಳ ಚಿತ್ರಗಳನ್ನು ಬಿಡಿಸಲಾಗುತ್ತಿದೆ. ಕೊನೆಯದಾಗಿ ಎರಡು ಬದಿಯ ತುದಿಗಳಲ್ಲಿನ ಗೋಡೆಗಳಿಗೆ ಕೃಷಿ ವಿವಿ ಸಂಶೋಧಿಸಿದ ಎಲ್ಲ ತಳಿಗಳ ಚಿತ್ರಗಳನ್ನು ಬಿಡಿಸಿ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗುವುದು. ಆ ದೀಪಗಳು ಸೋಲಾರ್‌ ಶಕ್ತಿಯಿಂದ ಉರಿಯುವ ವ್ಯವಸ್ಥೆ ಮಾಡಲಿದ್ದು, ರಾತ್ರಿಯಾಗುತ್ತಿದ್ದಂತೆ ತನ್ನಿಂತಾನೆ ದೀಪಗಳು ಹೊತ್ತಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ. ರಾತ್ರಿ ಹೊತ್ತಿನಲ್ಲಿಯೂ ಈ ಕಲಾಕೃತಿ ನೋಡುಗರನ್ನು ಆಕರ್ಷಿಸಬೇಕು ಎಂಬುದು ಅವರ ಅನಿಸಿಕೆ.

14 ಲಕ್ಷ ರೂ. ವೆಚ್ಚ: ಒಂದೊಂದು ಕೆಲಸ ಬೇರೆ ಬೇರೆ
ಸಂಸ್ಥೆಗಳಿಗೆ ಗುತ್ತಿಗೆ ನೀಡುವ ಚಿಂತನೆಯಿದ್ದು, ಟೆಂಡರ್‌ ಪ್ರಕ್ರಿಯೆ ನಡೆದಿದೆ. ಕಲಾಕೃತಿಗಳ ರಚನೆಗೆ ಒಂದು ಸಂಸ್ಥೆ, ಚಿತ್ರಗಳನ್ನು ಬಿಡಿಸಲು ಮತ್ತೂಂದು ಸಂಸ್ಥೆಗೆ ನೀಡಲಾಗುತ್ತಿದೆ. ಟೆಂಡರ್‌ ಕರೆಯಲಾಗಿದೆ. ಗುಡಿಕೋಟೆ ಕಲಾವಿದರು, ಸ್ಥಳೀಯ ಕಲಾವಿದರು, ಆಂಧ್ರ ಮೂಲದ ಕಲಾವಿದರಿಗೆ ಮಾಹಿತಿ ನೀಡಲಾಗಿದೆ. ಕಡಿಮೆ ದರದಲ್ಲಿ ಉತ್ತಮ ಕಲಾಕೃತಿ ನೀಡುವವರಿಗೆ ಆದ್ಯತೆ ನೀಡಲಾಗುವುದು ಎನ್ನುತ್ತಾರೆ ಕುಲಪತಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.