ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ

•ವಾಹನ ಸುರಕ್ಷಾ ಜಾಗೃತಿ ಕಾರ್ಯಾಗಾರ •ಸಂಚಾರ ನಿಯಮ ಪಾಲಿಸದ್ದರಿಂದ ಅಪಘಾತ ಹೆಚ್ಚಳ

Team Udayavani, Jul 14, 2019, 2:33 PM IST

14-JULY-33

ರಾಯಚೂರು: ಜಿಲ್ಲಾ ಡಿಎಆರ್‌ ಮೈದಾನದಲ್ಲಿ ನಡೆದ ವಾಹನ ಸುರಕ್ಷಾ ಜಾಗೃತಿ ಕಾರ್ಯಾಗಾರದಲ್ಲಿ ಎಸ್‌ಪಿ ಡಾ| ಸಿ.ಬಿ.ವೇದಮೂರ್ತಿ ಮಾತನಾಡಿದರು.

ರಾಯಚೂರು: ಅಪಘಾತ ಪ್ರಕರಣಗಳು ಹೆಚ್ಚಾಗಲು ಸಂಚಾರ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ. ಹೀಗಾಗಿ ವಾಹನ ಸವಾರರು, ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಕಚೇರಿಯ ಡಿಎಆರ್‌ ಕವಾಯತು ಮೈದಾನದಲ್ಲಿ ಶನಿವಾರ ನಡೆದ ವಾಹನ ಸುರಕ್ಷಾ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದರೆ ಭಾರೀ ದಂಡ ಹಾಗೂ ಕಠಿಣ ಶಿಕ್ಷೆ ಜಾರಿಗೊಳಿಸಿದೆ. ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ದಂಡ ವಿಧಿಸುವ ಜತೆಗೆ ಪರವಾನಗಿ ಕೂಡ ರದ್ದು ಮಾಡಲಾಗುವುದು. ಹೀಗಾಗಿ ಸವಾರರು ಜಾಗರೂಕತೆಯಿಂದ ವಾಹನ ಓಡಿಸಬೇಕು ಎಂದರು.

ಸಂಚಾರ ನಿಯಮಗಳನ್ನು ಪಾಲಿಸದ ಕಾರಣಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಕೇವಲ ನಮ್ಮ ರಕ್ಷಣೆ ಮಾತ್ರವಲ್ಲದೇ ಎದುರಿಗಿರುವ ಪ್ರಯಾಣಿಕರ ಹಿತದೃಷ್ಟಿಯಿಂದಲೂ ಸಂಚಾರ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.

ಪ್ರಯಾಣಿಕರು ಪದೇಪದೆ ತಪ್ಪುಗಳನ್ನು ಮಾಡುತ್ತಿದ್ದು, ಅದಕ್ಕೆ ಕಡಿವಾಣ ಹಾಕಲೆಂದೇ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಇನ್ನು ಮುಂದೆ ನಿಯಮ ಉಲ್ಲಂಘಿಸಿದರೆ ಭಾರೀ ಪ್ರಮಾಣದ ದಂಡ ಕಟ್ಟಬೇಕಿದೆ. ಅದರೊಟ್ಟಿಗೆ ಇನ್ನಿತರ ಕ್ರಮಗಳನ್ನು ಎದುರಿಸಬೇಕಿದೆ. ವಾಹನ ಓಡಿಸುವಾಗ ಮೊಬೈಲ್ ಪೋನ್‌ ಬಳಸುವುದು, ಬೈಕ್‌ ಮೇಲೆ ಮೂವರು ಹೋಗುವುದು ಸರಿಯಲ್ಲ. ಅದೇ ರೀತಿ ವಿಮಾ ರಹಿತ ವಾಹನ ಚಾಲನೆ ಮಾಡಿದವರಿಗೆ 1000, ನೋಂದಣಿ ರಹಿತ ವಾಹನ ಚಾಲನೆ ಮಾಡಿದರೆ 5000 ದಂಡ ಹಾಕಲಾಗುತ್ತಿದೆ. ಯುವಕರು ವೀಲಿಂಗ್‌ ಮಾಡುವುದು, ಹುಡುಗಿಯರಿಗೆ ಚುಡಾಯಿಸುವುದು ಕೂಡ ಕಂಡುಬಂದಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ಸಭ್ಯತೆಯಿಂದ ನಡೆದುಕೊಳ್ಳುವಂತೆ ತಿಳಿಸಬೇಕು ಎಂದರು.

ಆಟೋ ಚಾಲಕರು ಬೇಕಾಬಿಟ್ಟಿ ಜನರನ್ನು ತುಂಬುವಂತಿಲ್ಲ. ಆರು ಜನರಿಗಿಂತ ಹೆಚ್ಚು ಪ್ರಯಾಣಿಕರಿದ್ದಲ್ಲಿ ವಾಹನ ಸೀಜ್‌ ಮಾಡಲಾಗುವುದು. ಸರಕು ಸಾಗಿಸುವ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಂತಿಲ್ಲ. ತಪ್ಪುಗಳು ಮರುಕಳಿಸಿದಲ್ಲಿ ಚಾಲನಾ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ವೈದ್ಯರಾದ ಡಾ| ಮಹಾಲಿಂಗಪ್ಪ, ಡಾ| ಸುರೇಶ, ವಿಶ್ವನಾಥ, ವಿವಿಧ‌ ವಲಯಗಳ ಸಿಪಿಐ ಹಾಗೂ ಪಿಎಸ್‌ಐ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.