ಯೋಗಾಭ್ಯಾಸದಿಂದ ಸದೃಢ ಆರೋಗ್ಯ
ನಾಳೆ ಯೋಗ ದಿನಾಚರಣೆ ••ಜಾಗೃತಿ ಜಾಥಾ
Team Udayavani, Jun 20, 2019, 11:17 AM IST
ರಾಯಚೂರು: ಯೋಗ ದಿನಾಚರಣೆ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬುಧವಾರ ರ್ಯಾಲಿ ನಡೆಸಲಾಯಿತು. ತಹಶೀಲ್ದಾರ್ ಡಾ| ಹಂಪಣ್ಣ ಸೇರಿ ಅನೇಕರು ಪಾಲ್ಗೊಂಡಿದ್ದರು.
ರಾಯಚೂರು: ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ಅನೇಕ ದೈಹಿಕ ಸಮಸ್ಯೆಗಳಿಂದ ಮುಕ್ತರಾಗಬಹುದು ಎಂದು ತಹಶೀಲ್ದಾರ್ ಡಾ| ಹಂಪಣ್ಣ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಐದನೇ ಅಂತಾರಾಷ್ಟ್ರಿಯ ಯೋಗ ದಿನಾಚರಣೆ ನಿಮಿತ್ತ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯೋಗ ಕೇವಲ ಮಾನಸಿಕ ನೆಮ್ಮದಿಯನ್ನು ಮಾತ್ರ ನೀಡದೆ ದೈಹಿಕ ಸದೃಢತೆಗೂ ನೆರವಾಗಲಿದೆ. ಈಗಾಗಲೇ ಯೋಗದಲ್ಲಿನ ಮಹತ್ವವನ್ನು ಅನೇಕ ಮಹನೀಯರು ಸಾಬೀತು ಮಾಡಿದ್ದಾರೆ. ಅದು ವೈಜ್ಞಾನಿಕವಾಗಿಯೂ ರುಜುವಾತಾಗಿದೆ. ಇಡೀ ವಿಶ್ವವೇ ಯೋಗದಿಂದ ಆಗುವ ಉಪಯೋಗಗಳ ಬಗ್ಗೆ ಅರಿತು ಶರಣಾಗಿದೆ ಎಂದರು.
ಪ್ರತಿ ವರ್ಷ ಜೂನ್ 21ರಂದು ವಿಶ್ವ ಯೋಗ ದಿನ ಆಚರಿಸಲಾಗುತ್ತಿದೆ. ಈ ಬಾರಿ 5ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಯೋಗ ಮತ್ತು ಆಯುರ್ವೇದ ವೈದ್ಯಕೀಯ ವಿಜ್ಞಾನಗಳು ಭಾರತೀಯ ಪರಂಪರೆಯನ್ನು ಜಗತ್ತಿಗೆ ನೀಡಿದ ಅದ್ಭುತ ಕೊಡುಗೆಗಳಾಗಿವೆ. ವಿಶ್ವದ ಸುಮಾರು 185ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿಯಿಂದ ಶುರುವಾದ ಜಾಥಾವು ಗಾಂಧಿಚೌಕ್, ಮಹಾವೀರ ಚೌಕ್, ತೀನ್ ಕಂದಿಲ್ ವೃತ್ತದ ಮೂಲಕ ಜಿಲ್ಲಾ ಆಯುಷ್ ಕಚೇರಿವರೆಗೆ ನಡೆಸಲಾಯಿತು. ಜಾಥಾದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ| ಶಂಕರಗೌಡ ಎಸ್.ಪಾಟೀಲ, ಡಾ| ಚಂದ್ರಶೇಖರ ಸುವರ್ಣಗಿರಿ ಮಠ, ಡಾ| ಶಾಕೀರ, ಡಾ| ಹುಲ್ಲೂರು, ಭಾರತೀಯ ಸೇವಾದಳ ರೆಡ್ಕ್ರಾಸ್ ಸಂಸ್ಥೆ ಹಾಗೂ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು