ಸಮಗ್ರ ಕೃಷಿ ಪದ್ಧತಿಯಿಂದ ರೈತರ ಜೀವನ ಸುಧಾರಣೆ


Team Udayavani, Nov 14, 2019, 6:17 PM IST

14-November-28

ರಾಮನಗರ: ರೈತರು ಕೃಷಿ ಜೊತೆಗೆ ಹೈನುಗಾರಿಕೆ, ಜೇನು ಸಾಕಾಣಿಕೆ, ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವಂತೆ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಸಲಹೆ ನೀಡಿದರು. ನಗರದ ಜಿಲ್ಲಾ ಪಂಚಾಯ್ತಿ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದ್ದ ಜೇನು ಮೇಳ ಉದ್ಘಾಟಿಸಿ ಮಾತನಾಡಿದರು.

ಕೃಷಿಯಲ್ಲಿ ವಿಶ್ವಾಸವಿಟ್ಟು ನಿಷ್ಠೆಯಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳುಬೇಕು. ಇವರಿಗೆ ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ಕೊಡಬೇಕು. ವಿಶೇಷವಾಗಿ ಹೊಸ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಕೊಡುವಂತೆ ಅಧಿಕಾರಿಗಳಿಗೆ ತಾಖೀತು ಮಾಡಿದರು.

ಗಿಡಗಳಲ್ಲಿ ಜೇನು ಹುಳುಗಳು ಪರಾಗಸ್ಪರ್ಶ ಕ್ರಿಯೆಗೆ ಸಹಕರಿಸುವುದರಿಂದ ತಮ್ಮ ಬೆಳೆಯ ಇಳುವರಿಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ ಎಂದರು.

ಜೇನು ಮೇಳಕ್ಕೆ ತಾಪಂ ಅಧ್ಯಕ್ಷರ ಶ್ಲಾಘನೆ: ರಾಮನಗರ ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜು ಮಾತನಾಡಿ, ಜಿಲ್ಲೆ ಹೈನುಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಹೆಸರು ವಾಸಿಯಾಗಿದ್ದು, ಜೇನು ಸಾಕಾಣಿಕೆ ಬಗ್ಗೆ ಜಿಲ್ಲೆಯ ರೈತರಿಗೆ ಅರಿವು ಮೂಡಿ ಸುತ್ತಿರುವುದು ಶ್ಲಾಘನೀಯ ಎಂದರು.

ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ಕೊಟ್ಟು ಕಾರ್ಯಕ್ರಮ ಆಯೋಜಿಸಿ ಅವರನ್ನು ಉತ್ತೇಜಿಸಬೇಕು ಎಂದರು. ಜೇನು ಸಾಕಾಣಿಕೆಯ ಬಗ್ಗೆ ವಿಶೇಷವಾಗಿ ರೈತ ಮಹಿಳೆಯರಿಗೆ ತರಬೇತಿಯ ಅವಶ್ಯಕತೆ ಇದೆ. ಮಹಿಳಾ ಸಂಘಗಳ ಮೂಲಕ ಈ ಕಾರ್ಯಕ್ರಮ ಹಮ್ಮಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಹಾರೋಹಳ್ಳಿ ಹಾಗೂ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕಾ ಮಾಲೀಕರೊಂದಿಕೆ ಚರ್ಚಿಸಿ ಸಿ.ಎಸ್‌.ಆರ್‌ ಫ‌ಂಡ್‌ನ‌ಡಿ ರೈತರಿಗೆ ಉಚಿತವಾಗಿ ಜೇನು ಸಾಕಾಣಿಕೆ ಪೆಟ್ಟಿಗೆಗಳನ್ನು ನೀಡಿ ಪೋತ್ಸಾಸುವಂತೆ ಸಲಹೆ ನೀಡಿದರು.

ಕೀಟಗಳು ನಾಶವಾದರೆ, ಮನುಕುಲವೂ ನಾಶ: ಬೆಂಗಳೂರು ಜೇನು ಕೃಷಿಯ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಜಿ. ಕೆ.ವಿ.ಕೆ ಕೃಷಿ ವಿಶ್ವದ್ಯಾಲಯದ ಉಪ ಕುಲಪತಿ ಡಾ.ಎಸ್‌.ರಾಜೇಂದ್ರ ಪ್ರಸಾದ್‌ ಅವರು, ಬೆಂಗಳೂರು ಜಿ.ಕೆ.ವಿ.ಕೆ ಕೃಷಿವಿಶ್ವದ್ಯಾನಿಲಯದಲ್ಲಿ ಜೇನು ಸಾಕಾಣಿಕೆಗೆ ಪ್ರತ್ಯೇಕ ವಿಭಾಗವಿದೆ. ಪಾರಾಗಸ್ಪರ್ಶ ಪ್ರಕ್ರಿಯಲ್ಲಿ ಪಾಲ್ಗೊಳ್ಳುವ ಜೇನು ಸಾಕಾಣಿಕೆಯಿಂದ ರೈತರು ತಮ್ಮ ಬೆಳೆಯಲ್ಲಿ ಶೇ. 30 ರಷ್ಟು ಇಳುವರಿ ಹೆಚ್ಚಿಸಿಕೊಳ್ಳಬಹುದು. ಪಾರಾಗ ಸ್ಪರ್ಶದಲ್ಲಿ ಪಾಲ್ಗೊಳ್ಳುವ ಕೀಟಗಳು ನಾಶವಾದರೆ, ಆಹಾರ ಉತ್ಪಾದನೆಯು ನಾಶವಾಗಿ ಮನುಕುಲವೂ ನಾಶವಾಗುತ್ತದೆ ಎಂದರು.

ರೈತರು ಜೇನು ಸಾಕಾಣಿಕೆ ಪೆಟ್ಟಿಗೆಯನ್ನು ಕೃಷಿ ಸಲಕರಣೆ ಎಂದು ಭಾವಿಸಿ ಕೃಷಿ ಮಾಡುವ ಜಮೀನಿನಲ್ಲಿ ಇಡುವುದು ಉತ್ತಮ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಜೇನು ಸಾಕಾಣಿಕೆಯ ಮಾಹಿತಿ ಪಡೆದ 3000-4000 ರೈತರು ಜೇನು ಸಾಕಾಣಿಕೆ ತರಬೇತಿ ನೀಡುವಂತೆ ಹೆಸರು ನೊಂದಾಯಿಸಿಕೊಂಡಿದ್ದಾರೆ. ಇದು ಜೇನು ಸಾಕಾಣಿಕೆಯ ಬೇಡಿಕೆ ಹಾಗೂ ಮಹತ್ವವನ್ನು ತಿಳಿಸುತ್ತದೆ ಎಂದರು.

ಜೇನು ತುಪ್ಪದಲ್ಲಿ ಔಷಧಿ ಗುಣ: ಜೇನು ಔಷಧಿ ಗುಣಗಳನ್ನು ಹೊಂದಿದ್ದು, ಒಬ್ಬ ಮನುಷ್ಯನಿಗೆ ಒಂದು ವರ್ಷದಲ್ಲಿ 70 ಗ್ರಾಂ ನಷ್ಟು ಜೇನು ತುಪ್ಪದ ಅವಶ್ಯಕತೆ ಇದೆ. ಜೇನನ್ನು ಔಷಧಿಯಾಗಿ ಮಾತ್ರವಲ್ಲದೆ, ಸೌಂದರ್ಯ ವರ್ಧಕವಾಗಿ ಹಾಗೂ ಮೇಣವನ್ನು ಮೇಣದ ಬತ್ತಿ ತಯಾರಿಕೆಯಲ್ಲೂ ಬಳಸುತ್ತಾರೆ. ನಮ್ಮ ರಾಜ್ಯದ ಜೇನು ತುಪ್ಪಕ್ಕೆ ಉತ್ತಮ ಬೇಡಿಕೆ ಇದೆ. ಕೃಷಿ ವಿಜ್ಞಾನ ಕೇಂದ್ರ ದಿಂದ ಜೇನು ಸಾಕಾಣಿಕೆ ತರಬೇತಿ ಪಡೆದವರು ಉದ್ದಿಮೆ ಮಾಡಿ ಬಹಳಷ್ಟು ಜನರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದರು.

ಬೆಂಗಳೂರು ಕೃಷಿ ವಿಶ್ವ ದ್ಯಾನಿಲಯದ ಜೇನು ಕೃಷಿ ವಿಭಾಗದ ಮುಖ್ಯಸ್ಥ ಡಾ. ಕೆ.ಎಸ್‌.ಜಗದೀಶ್‌, ಬೆಂಗಳೂರು ಲಾಲ್‌ ಬಾಗ್‌ ಜೇನು ಕೃಷಿ ವಿಭಾಗದ ಸಹಾಯಕ ತೋಟಗಾರಿಕೆ ನಿರ್ದೇಶಕ ಡಾ. ಹೇಮಾ ಅವರು ಜೇನು ಕೃಷಿ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ಎಚ್‌.ಬಸಪ್ಪ, ತೋಟ ಗಾರಿಕೆ ಜಂಟಿ ನಿರ್ದೇಶಕ ಡಾ.ಜಗದೀಶ್‌, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇ ಶಕ ಜೆ.ಗುಣವಂತ್‌, ರೈತ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.