ಕನಕಪುರಕ್ಕೆ ಮೆಡಿಕಲ್‌ ಕಾಲೇಜು ರದ್ದು ಡಿಕೆಶಿ ಆಕ್ಷೇಪ

ಸಿಎಂಗೆ ಪತ್ರ, ತೀವ್ರ ಹೋರಾಟದ ಎಚ್ಛರಿಕೆ „ ಬಿಜೆಪಿ ಸರ್ಕಾರದಿಂದ ಧ್ವೇಷ ರಾಜಕರಣದ ಆರೋಪ

Team Udayavani, Dec 8, 2019, 6:46 PM IST

8-December-30

ರಾಮನಗರ: ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಹಿಂದಕ್ಕೆ ಪಡೆದಿರುವ ಬಿಜೆಪಿ ಸರ್ಕಾರದ ಕ್ರಮಕ್ಕೆ ಕನಕಪುರ ಶಾಸಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಲೇಜು ಮಂಜೂರು ಮಾಡದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ಪತ್ರ ಬರೆದಿದ್ದಾರೆ.

ಉಪಚುನಾವಣೆಗಳ ನಂತರ ತಮ್ಮ ಹೋರಾಟ ಆರಂಭಿಸುವುದಾಗಿ ಡಿ.ಕೆ.ಶಿ ಹೇಳಿಕೆ ನೀಡಿದ್ದರು. ಇದೀಗ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದರ ಮೂಲಕ ಈ ವಿಚಾರದಲ್ಲಿ ಧ್ವನಿ ಎತ್ತಿದ್ದಾರೆ. ಶನಿವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್‌, ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ರದ್ದು ಪಡಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧ್ವೇಷ ರಾಜಕರಣವೇ ಮುಖ್ಯಮಂತ್ರಿಗಳ ಉದ್ದೇಶವಾದರೆ, ತಾವು ತಮ್ಮದೇ ರೀತಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ. ಇದಕ್ಕೆ ಅವಕಾಶ ಕೂಡಬೇಡಿ ಅಂತಲೂ ಅವರು ಸೂಚ್ಯಕವಾಗಿ ಮುಖ್ಯಮಂತ್ರಿಗೆ ತಿವಿದಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್‌ ಕಾಲೇಜಿಗೆ ಆಕ್ಷೇಪವಿಲ್ಲ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್‌ ಕಾಲೇಜನ್ನು ಮಂಜೂರು ಮಾಡಿರುವ ಬಗ್ಗೆ ಡಿ.ಕೆ.ಶಿವಕುಮಾರ್‌ ತಮಗೆ ಆಕ್ಷೇಪವೇನಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಎಷ್ಟೇ ಸಂಖ್ಯೆಯ ಮೆಡಿಕಲ್‌ ಕಾಲೇಜುಗಳನ್ನು ಮಂಜೂರು ಮಾಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು, ಆದರೆ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ರದ್ದು ಮಾಡಿರುವುದರ ಬಗ್ಗೆ ತಮ್ಮ ಆಕ್ಷೇಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಎಸ್‌ವೈ ಒಪ್ಪಿಗೆ ಸೂಚಿಸಿದ್ದರು: ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿ ಸರ್ಕಾರ 2018-19ರ ಆಯವ್ಯಯದಲ್ಲಿ ಕನಕಪುರದಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುದಾಗಿ ಘೋಷಣೆ ಮಾಡಿತ್ತು. ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲೂಕು ಎಂದು ಗುರುತಿಸಿಕೊಂಡಿರುವ ಕನಕಪುರದಲ್ಲಿ ಆರೋಗ್ಯ ಸೇವೆ ಬಲಗೊಳಿಸುವ ಹಿನ್ನೆಲೆಯಲ್ಲಿ ಮೆಡಿಕಲ್‌ ಕಾಲೇಜು ಮಂಜೂರಾಗಿತ್ತು. ಅಲ್ಲದೆ ಬೆಂಗಳೂರಿಗೆ ಸಮೀಪ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದು, ಗ್ರಾಮೀಣ ಭಾಗದ ಯುವಕ, ಯುವತಿಯರಿಗೆ ವೈದ್ಯಕೀಯ ಶಿಕ್ಷಣ ನೀಡುವುದು ಹೀಗೆ ಅನೇಕ ವಿಚಾರಗಳನ್ನು ಪರಿಗಣಿಸಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜನ್ನು ಮಂಜೂರು ಮಡಲಾಗಿತ್ತು. ಆಯವ್ಯಯ ಸಭೆಯ ಚರ್ಚೆಗಳಲ್ಲಿ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಸಹ ಮೆಡಿಕಲ್‌ ಕಾಲೇಜಿಗೆ ಒಪ್ಪಿಗೆ ಸೂಚಿಸಿದ್ದರು ಎಂದು ಡಿ.ಕೆ.ಶಿವಕುಮಾರ್‌ ಪತ್ರದಲ್ಲಿ ತಿಳಿಸಿದ್ದಾರೆ.

ಭೂಮಿ ಗುರುತಿಸಲಾಗಿತ್ತು: ಕ್ಯಾಬಿನೆಟ್‌ನಲ್ಲಿ ಅನುಮತಿ ಸಿಕ್ಕನಂತರ 13.12.2018ರಂದು ಯೋಜನೆ, ಆರ್ಥಿಕ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗಳು ಒಪ್ಪಿಗೆ ಸೂಚಿಸಿದವು. ನಂತರ ಕನಕಪುರ ತಾಲೂಕಿನ ರಾಯಸಂದ ಗ್ರಾಮದಲ್ಲಿ 25 ಎಕರೆ ಭೂಮಿ ಗುರುತಿಸಲಾಗಿತ್ತು. ಭೂಮಿ ಹಸ್ತಾಂತರಕ್ಕೆ ಕೆಎಚ್‌ಬಿ ಇಲಾಖೆ ಕೂಡ ಅಗತ್ಯ ಕ್ರಮ ಕೈಗೊಂಡಿತ್ತು. ಆದರೆ ನೀವು (ಯಡಿಯೂರಪ್ಪ) ಮುಖ್ಯಮಂತ್ರಿಗಳಾದ ನಂತರ ಏಕ ವ್ಯಕ್ತಿ ಕ್ಯಾಬಿನೆಟ್‌ ಸದಸ್ಯನಾಗಿ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿದ್ದೀರಿ ಎಂದು ಲೇವಡಿ ಮಾಡಿದ್ಧಾರೆ.

ಬಸವಣ್ಣನ ಅನಯಾಯಿ ಬಗ್ಗೆ ನಂಬಿಕೆ ಇತ್ತು!: ಧ್ವೇಷ ರಾಜಕರಣ ಮಾಡೋಲ್ಲ ಅಂತ ಅಧಿಕಾರ ಸ್ವೀಕರಿಸಿದ ನೀವು ಹೇಳಿಕೆಗಳಿಗೆ ಬದ್ಧರಾಗಿರುವ ಬಗ್ಗೆ ವಿಶ್ವಾಸವಿತ್ತು. ಆದರೆ ರಾಜ್ಯದಲ್ಲಿ ಮಂಜೂರಾಗಿದ್ದ ಯಾವ ಮೆಡಿಕಲ್‌ ಕಾಲೇಜನ್ನು ರದ್ದು ಪಡಿಸದೆ, ಕನಕಪುರಕ್ಕೆ ಮಂಜೂರು ಆಗಿದ್ದ ಕಾಲೇಜನ್ನು ರದ್ದು ಮಾಡಿದ್ದು ತಿಳಿದಾಗ ತಮಗೆ ತೀವ್ರ ನಿರಾಶೆ ಮೂಡಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಭೂಮಿ ಪೂಜೆ ದಿನ ನಿಗದಿಗೆ ಮನವಿ ಮಾಗಡಿಯಲ್ಲಿ ಕೆಲವು ವಾರಗಳ ಹಿಂದೆ ಶ್ರೀ ಶಿವಕುಮಾರಸ್ವಾಮಿ ಅವರ ಪ್ರತಿಮೆ ಸ್ಥಾಪನೆಯ ಭೂಮಿ ಪೂಜೆಗೆ ಆಗಮಿಸಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕನಕಪುರದಲ್ಲಿ ಮೆಡಿಕಲ್‌ ಕಾಲೇಜು
ಸ್ಥಾಪಿಸುವುದಾಗಿ ನೀಡಿದ್ದ ಹೇಳಿಕೆಯನ್ನು ತಮ್ಮ ಪತ್ರದಲ್ಲಿ ಉಲ್ಲೇಖೀಸಿರುವ ಡಿ.ಕೆ.ಶಿವಕುಮಾರ್‌ ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸುವಂತೆ ಕೋರಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.