4ನೇ ಬಾರಿ ಮಂತ್ರಿಯಾದ ಡಿಕೆಶಿ


Team Udayavani, Jun 7, 2018, 3:54 PM IST

ram-1.jpg

ರಾಮನಗರ: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಪ್ರಭಾವಿ ಕಾಂಗ್ರೆಸ್‌ ಮುಖಂಡ ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್‌ ಬುಧವಾರ ಕ್ಯಾಬಿನೆಟ್‌ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಾತನೂರು ವಿಧಾನಸಭಾ ಕ್ಷೇತ್ರದಿಂದ 4 ಮತ್ತು ಕನಕಪುರ ಕ್ಷೇತ್ರದಿಂದ ಮೂರನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. ಇದೀಗ 4ನೇ ಬಾರಿಗೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂತ್ರಿಮಂಡಲದಲ್ಲಿ ಇಂಧನ ಸಚಿವರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್‌, ಎಸ್‌. ಬಂಗಾರಪ್ಪ , ಎಸ್‌.ಎಂ.ಕೃಷ್ಣ ಅವರ ಸಂಪುಟದಲ್ಲಿಯೂ ಸಚಿವರಾಗಿ ಬಂಧಿಖಾನೆ, ಸಹಕಾರ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು. ಡಿ.ಕೆ.ಶಿ ಅವರಿಗೆ ಈ ಬಾರಿಯೂ ಇಂಧನ ಖಾತೆ ಸಿಗಲಿದೆ ಎಂಬ ವಿಶ್ವಾಸ ಕಾಂಗ್ರೆಸ್‌ ಕಾರ್ಯಕರ್ತರಲ್ಲಿದೆ.

 ಡಿ.ಕೆ.ಶಿವಕುಮಾರ್‌ ಕಿರು ಪರಿಚಯ : ಕನಕಪುರ ತಾಲೂಕು ದೊಡ್ಡಾಲಹಳ್ಳಿಯ ಕೆಂಪೇಗೌಡ ಮತ್ತು ಗೌರಮ್ಮ ದಂಪತಿಗಳ ಮೊದಲ ಪುತ್ರ ಡಿ.ಕೆ. ಶಿವಕುಮಾರ್‌. ಜನಿಸಿದ್ದು ಮೇ. 15, 1961ರಲ್ಲಿ. ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ರಾಜ್ಯ ಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದಿದ್ದಾರೆ. ಪತ್ನಿ ಉಷಾ, ಮಕ್ಕಳಾದ ಐಶ್ವರ್ಯ, ಆಭರಣ ಮತ್ತು ಆಕಾಶ್‌ರೊಂದಿಗೆ ಕನಕಪುರದಲ್ಲೇ ವಾಸ.

ರಾಜಕೀಯಕ್ಕೆ ಪ್ರವೇಶ: ವ್ಯವಸಾಯ ಸಹಕಾರ ಸಂಘದ ಮೂಲಕ ರಾಜಕೀಯ ಪ್ರವೇಶಿಸಿದ ಡಿ.ಕೆ.ಶಿ 1985ರಲ್ಲಿ ಮೊದಲ ಬಾರಿಗೆ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 1987ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಯಾದರು.

1989ರಲ್ಲಿ ಮತ್ತು ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
ಸಚಿವರಾಗಿ ಬಂಧಿಖಾನೆ ಖಾತೆಯನ್ನು ನಿರ್ವಹಿಸಿದ್ದರು. 1994ರಲ್ಲಿ ಪಕ್ಷೇತರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999ರಲ್ಲಿ ಎಚ್‌ .ಡಿ.ಕುಮಾರಸ್ವಾಮಿ ಅವರ ವಿರುದ್ಧವೂ ಗೆಲವು ಸಾಧಿಸಿದ್ದರು. 2004ರಲ್ಲಿ ಜೆಡಿಎಸ್‌ ಅಭ್ಯರ್ಥಿ ಡಿ.ಎಂ. ವಿಶ್ವನಾಥ್‌ ವಿರುದ್ದ ಗೆದಿದ್ದರು.

ವಿಧಾನಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯಾಗಿದ್ದರಿಂದ ಸಾತನೂರು ಕ್ಷೇತ್ರ ಅಳಿಸಿ ಹೋಯಿತು. ತದನಂತರ ಅವರು ಕನಕಪುರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. 2008ರಲ್ಲಿ ಮತ್ತೆ ಜೆಡಿಎಸ್‌ ಅಭ್ಯರ್ಥಿ ಡಿ.ಎಂ.ವಿಶ್ವನಾಥ್‌ ವಿರುದ್ಧ, 2013ರಲ್ಲಿ ಪಿ.ಜಿ.ಆರ್‌ ಸಿಂಧ್ಯಾ ವಿರುದ್ಧ ಸ್ಪರ್ಧಿಸಿ ಗೆದ್ದರು. ಇದೀಗ ಮೇ 12, 2018ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಾರಾಯಣ ಗೌಡರ ವಿರುದ್ಧ 79909 ಮತಗಳ ಅಂತರದಿಂದ ಗೆದ್ದಿದ್ದಾರೆ.

 ಕಾಂಗ್ರೆಸ್‌ ಪಕ್ಷದಲ್ಲಿ ಸೇವೆ : 2001ರಲ್ಲಿ ಎಐಸಿಸಿಯ ಸದಸ್ಯರಾಗಿದ್ದ ಡಿ.ಕೆ.ಶಿವಕುಮಾರ್‌ 1985 ರಿಂದ 2001ರವರೆಗೆ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದರು. 2013ರ ಚುನಾವಣೆಯಲ್ಲಿ ಚುನಾವಣಾ ಪ್ರಚಾರ ಸಮಿತಿಯ ಸಹ ಅಧ್ಯಕ್ಷರಾಗಿದ್ದರು. 2018ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಕನಕಪುರದಲ್ಲಿ ಅಭಿವೃದ್ಧಿ ಪರ್ವ ನಿರಂತರ
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಡಿ.ಕೆ. ಶಿವಕುಮಾರ್‌, ಇಂಧನ ಕ್ಷೇತ್ರದಲ್ಲಿ ಬದಲಾವಣೆಗೆ ಕಾರಣರಾಗಿದ್ದಾರೆ ಎಂಬುದು ಸಾಮಾನ್ಯ ನಾಗರಿಕರ ಅಭಿಪ್ರಾಯ. ತಲಾ ಇಬ್ಬರು ರೈತರಿಗೆ ಎಚ್‌.ವಿ.ಡಿ.ಎಸ್‌. ಯೋಜನೆಯಡಿಯಲ್ಲಿ ಉಚಿತ ಟ್ರಾನ್ಸ್‌ ಫಾರ್ಮರ್‌ ನೀಡಿರುವುದು ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ.

ಸೂರ್ಯ ರೈತ ಯೋಜನೆ, ಸೋಲಾರ್‌ ಮೂಲಕ ವಿದ್ಯುತ್‌ ಉತ್ಪಾದನೆಗಳ ಬಗ್ಗೆ ಜನಮೆಚ್ಚುಗೆ ಇದೆ. ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿ ಇರುವ ಕನಕಪುರದಲ್ಲಿ ಡಿ.ಕೆ.ಶಿ ತಾಲೂಕು ಕಚೇರಿಗೆ ನೂತನ ಕಟ್ಟಡ, ಅಂಬೇಡ್ಕರ್‌ ಭವನ, ನೂತನ ಬಸ್‌ ನಿಲ್ದಾಣ, ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ವೃದ್ಧಿಗೆ ಕಾರಣರಾಗಿದ್ಧಾರೆ.

ಮಿನಿವಿಧಾನಸೌಧ, .ಕೆ.ಎಂ.ಎಫ್ ಮೆಗಾಡೇರಿ, ಅಂಬೇಡ್ಕರ್‌ ಭವನ ಸೇರಿದಂತೆ ನೂತನ ಸರ್ಕಾರಿ ಕಟ್ಟಡಗಳು, ರಸ್ತೆ, ಇಲಾಖೆಗಳ ಕಟ್ಟಡ, ಶಾಲಾ-ಕಾಲೇಜುಗಳ ಕಟ್ಟಡ, ಅಭಿವೃದ್ಧಿಯಲ್ಲಿ ಊಹಿಸಲಾಗದ ಸಾಧನೆ ಮಾಡಿರುವ
ಶಿವಕುಮಾರ್‌, ಇದೀಗ 4ನೇ ಬಾರಿ ಸಚಿವರಾಗಿರುವುದು ಜಿಲ್ಲೆಯ ಜನರಲ್ಲಿ ಹರ್ಷ ಮೂಡಿಸಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.