50 ಸಾವಿರ ಲಂಚ: ಬಂಧನ
Team Udayavani, Apr 29, 2021, 3:39 PM IST
ಕನಕಪುರ: ಲಂಚ ಪಡೆಯುತ್ತಿದ್ದಾಗ ತಾಲೂಕು ಸರ್ವೆಯರ್ ಮತ್ತುಸಹಾಯಕ ಇಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಸಿಕ್ಕಿ ಬಿದಿದ್ದಾರೆ.ಜಮೀನು ಪೋಡಿ ಮಾಡಿಕೊಡುವ ವಿಚಾರಕ್ಕೆ ತಾಲೂಕು ಸರ್ವೆಯರ್ಬೀರೇಶ್ ಇವರ ಸಹಾಯಕ ಅಕ್ಷಯ್ ಮೂಲಕ 50 ಸಾವಿರ ರೂ. ಲಂಚಪಡೆಯುವಾಗ ಇಬ್ಬರರನ್ನು ಬಂಧಿಸಲಾಗಿದೆ.
ಕೊರೊನಾ ವೇಳೆಯಲ್ಲೂ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ತಂಡ ಭ್ರಷ್ಟರನ್ನು ಬೇಟೆಯಾಡಿರುವುದು ಸಾರ್ವಜನಿಕರಿಂದ ಪ್ರಸಂಸೆಗೆ ಕಾರಣವಾಗಿದೆ.ತಾಲೂಕಿನ ಹಾರೋಹಳ್ಳಿ ಹೋಬಳಿಯ ಕೊಳ್ಳಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಉಳುಗೊಂಡನಹಳ್ಳಿ ಗ್ರಾಮದ ಕುಮಾರ್ ನೀಡಿದ ದೂರಿನ ಮೇರೆಗೆ ಎಸಿಬಿಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ದೂರು ದಾರ ಉಳಗೊಂಡನಹಳ್ಳಿ ಕುಮಾರ್ ತಮ್ಮ ಎರಡು ಎಕರೆ ಜಮೀನನ್ನು ಪೋಡಿ ಮಾಡಿಕೊಡುವಂತೆ ಕಳೆದ ಎರಡು ವರ್ಷದ ಹಿಂದೆ ಅರ್ಜಿ ಸಲ್ಲಿಸಿ ತಾಲೂಕು ಕಚೇರಿಗೆ ಅಲೆದರೂ ಪೋಡಿ ಮಾಡಿಕೊಟ್ಟಿರಲಿಲ್ಲ. ಬಳಿಕ ತಾಲೂಕು ಸರ್ವೆಯರ್ ಬಿರೇಶ್ ಜಮೀನುಪೋಡಿಗೆ 1.50ಲಕ್ಷ ರೂ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 50 ಸಾವಿರ ಕೊಡುವಂತೆ ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಕುಮಾರ್ ಜಿಲ್ಲಾ ಎಸಿಬಿಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಬುಧವಾರ 2 ಗಂಟೆಸಮಯದಲ್ಲಿ ನಗರದ ರತ್ನ ಉಪಹಾರ್ ಹೋಟೆಲ್ ಮುಂಭಾಗದಲ್ಲಿಅರ್ಜಿದಾರ ಕುಮಾರ್ ಅವರಿಂದ ತಾಲೂಕು ಸರ್ವೇಯರ್ ಬಿರೇಶ್ ಇವರಸಹಾಯಕ ಅಕ್ಷಯ್ 50 ಸಾವಿರ ಲಂಚದ ಹಣ ಪಡೆಯುತ್ತಿದ್ದಾಗ ಎಸಿಬಿಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಬಳಿಕ ಕಚೇರಿಯನ್ನು ಜಾಲಾಡಿಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಭ್ರಷ್ಟಾಚಾರನಿಗ್ರಹದಳದ ಚಂದ್ರಶೇಖರ್, ಸತ್ಯನಾರಾಯಣ್ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ