ಜಲಪಾತದಂತೆ ಮೈದುಂಬಿ ಹರಿದ ಕುದೂರಿನ ಕೆರೆ


Team Udayavani, Nov 19, 2021, 6:20 PM IST

lake water falls as a waterfalls

ಕುದೂರು: ಕಳೆದ ಕೆಲ ದಿನಗಳಿಂದ ಕುದೂರು ಸುತ್ತಮುತ್ತ ಭರ್ಜರಿ ಮಳೆಗೆ ಕುದೂರು ಹೋಬಳಿಯ ಕೆರೆಗಳು ಭರ್ತಿಯಾಗಿದ್ದು ಕೋಡಿ ಹರಿದಿದೆ. ಜಲಪಾತಗಳಂತೆ ಹರಿಯುತ್ತಿರುವ ನೀರು ಹರಿಯುವುದನ್ನು ನೋಡಲು ಕುದೂರು ಸುತ್ತಮುತ್ತಲಿನ ಜನರು ಸಾಗರೋಪಾದಿಯಲ್ಲಿ ಕೋಡಿ ಬಿದ್ದ ಕೆರೆ ಬಳಿಗೆ ಕುಟುಂಬದ ಸದಸ್ಯರ ಜೊತೆ ಹಾಗೂ ಸ್ನೇಹಿತರೊಡನೆ ತೆರಳುತ್ತಿದ್ದು, ಕೆಲವು ಕೆರೆಗಳೀಗ ಮಳೆಗಾಲದ ಪ್ರವಾಸಿ ತಾಣಗಳಾಗಿ ಮಾರ್ಪಟ್ಟಿವೆ.

ಮಲ್ಲಪ್ಪನಹಳ್ಳಿ ಕೆರೆ ಬಳಿ ಜಮಾವಣೆ: ಕುದೂರು ಹೋಬಳಿಯ ಶ್ರೀಗಿರಿಪುರ ಗ್ರಾಪಂ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಕೆರೆ ಕೋಡಿ ಹರಿದಿದ್ದು ಇದನ್ನು ವೀಕ್ಷಿಸಲು ಕುದೂರು ಹಾಗೂ ಸುತ್ತಮುತ್ತಲಿನ ಜನರು ಪ್ರವಾಸಿ ತಾಣವನ್ನು ವೀಕ್ಷಿಸಲು ಬರುವ ಪ್ರವಾಸಿಗರಂತೆ ನಿತ್ಯ ಜನರು ತಮ್ಮ ಕುಟುಂಬದೊಂದಿಗೆ ಹಾಗೂ ಸ್ನೇಹಿತರೊಡೆನೇ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು, ವಿಡಿಯೋ ಮಾಡುವುದು ಹಾಗೂ ನೀರಿನಲ್ಲಿ ಒಂದೆರಡು ತಾಸು ಕಾಲ ಕಳೆದು ತಮ್ಮ ಮೊಬೈಲ್‌ಗ‌ಳಲ್ಲಿ ಪೋಟೋ ಸೆರೆ ಹಿಡಿದು ತಮ್ಮ ಜಾಲತಾಣಗಳ ಖಾತೆಗಳಲ್ಲಿ ಶೇರ್‌ ಮಾಡುವ ಮೂಲಕ ತಮ್ಮ ಸಂತಸದ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಬಹುತೇಕ ಕೆರೆಗಳು ಭರ್ತಿ: ಕಳೆದ 15 ದಿನಗಳಿಂದ ಬೀಳುತ್ತಿರುವ ಮಳೆಗೆ ಕೆಂಚನಪುರ ಕೆರೆ ಕೋಡಿಯಾಗಿ ನೀರು ತೊರೆಗಳ ಮೂಲಕ ತಗ್ಗು ಪ್ರದೇಶಗಳಲ್ಲಿರುವ ರೈತರ ಜಮೀನು ಹಾಗೂ ತೋಟಗಳಿಗೆ ನುಗ್ಗುತ್ತಿದೆ. ಉಳಿದಂತೆ ವೀರಸಾಗರ ಕೆರೆ, ಶ್ರೀಗಿರಿಪುರ ಕೆರೆ, ಮಲ್ಲಪ್ಪನ ಹಳ್ಳಿಕೆರೆಗಳು ಕೋಡಿ ಹರಿದಿದ್ದು ಜನರ ಕಣ್ಮನ ಸೆಳೆಯುತ್ತಿದೆ.

ತಡೆಗೋಡೆ ಕುಸಿತ ಭೀತಿ: ವರ್ಷಪೂರ್ತಿ ಭತ್ತದ ಕೆರೆಯೆಂದೇ ಹೆಸರು ವಾಸಿಯಾಗಿರುವ ಕೆಂಚನ ಪುರ ಕೆರೆ ತುಂಬಿ ಕೋಡಿಯ ಮೂಲಕ ನಿರು ನಿತ್ಯ ರಭಸವಾಗಿ ಹರಿಯುತ್ತಿದ್ದು ಕೆರೆಕೋಡಿಯ ಬಳಿ ಕಟ್ಟಿರುವ ತಡೆಗೋಡೆ ಕುಸಿಯುತ್ತಿದ್ದು ಆ ಭಾಗದ ಜನರಲ್ಲಿ ಅತಂಕ ಶುರುವಾಗಿದೆ. ಇದನ್ನು ತಿಳಿದ ತಾಲೂಕು ಆಡಳಿತ ಮರಳಿನ ಮೂಟೆಗಳನ್ನು ಕೋಡಿಗೆ ಬಿಡುವ ಮೂಲಕ ತಾತ್ಕಾಲಿಕವಾಗಿ ಮುಂದೆ ಆಗಬಹುದಾದ ಅಪಾಯವನ್ನು ತಡೆಯುವ ಕಾರ್ಯ ಮಾಡಿದೆ.

 “ಮಲ್ಲಪ್ಪನಹಳ್ಳಿ ಹಾಗೂ ಶ್ರೀಗಿರಿಪುರ ಕೆರೆ ಕೋಡಿಯಾಗಿದ್ದು ಜಲಪಾತದಂತೆ ಹರಿಯುವ ನೀರನ್ನು ವೀಕ್ಷಿಸಲು ಕುಟುಂಬದ ಸದಸ್ಯರೊಡನೆ ಹಾಗೂ ಸ್ನೇಹಿತರೊಡನೆ ಜೊತೆಗೂಡಿ ಎರಡು ಮೂರು ತಾಸು ಜಲಕ್ರೀಡೆಯಲ್ಲಿ ತೊಡಗಿ ಪ್ರಕೃತಿ ಸೊಬಗನ್ನು ಕಣ್ತುಂಬಿಸಿಕೊಂಡಿದ್ದು ಖುಷಿಯಾಗಿದೆ.” – ಅಭಿಷೇಕ್‌, ಕುದೂರು

 “ಬೇಸಿಗೆಯಲ್ಲಿ ನೀರಿಲ್ಲದೆ ಬಣಗುಡುವ ಕೆರೆಗಳು ಮಳೆ ನೀರಿನಿಂದ ತುಂಬಿ ಕೋಡಿಗಳ ಮೂಲಕ ಹರಿವ ಸುಂದರ ಕ್ಷಣಗಳನ್ನು ವೀಕ್ಷಿಸುವುದು ಹಾಗೂ ಸುಂದರ ಕ್ಷಣಗಳನ್ನು ಕ್ಯಾಮರಗಳ ಮೂಲಕ ಸೆರೆ ಹಿಡಿಯುವುದು ಒಂದು ರೋಮಾಂಚನಕಾರಿ ವಿಷಯ.” – ರಮೇಶ್‌, ಹವ್ಯಾಸಿ ಛಾಯಗ್ರಾಹಕ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.