ನಿರ್ವಹಣೆಯಿಲ್ಲದೆ ಸೊರಗಿದ ರಂಗಮಂದಿರ


Team Udayavani, Nov 12, 2019, 5:01 PM IST

rn-tdy-1

ಮಾಗಡಿ: ಕೆಂಪೇಗೌಡರ ತವರೂರು ಹಾಗೂ ಕಲಾರಂಗ ಸಜ್ಜಿಕೆ ಸಾಂಸ್ಕೃತಿಕ ತೊಟ್ಟಿಲು ಎಂದೆಲ್ಲ ಕರೆಯಿಸಿಕೊಳ್ಳುವ ಮಾಗಡಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಪ್ರತಿಭೆಗಳ ಬೆಳವಣಿಗೆಗೆ ಕಾರಣವಾಗಿದೆ. ಆದರೆ ಪಟ್ಟಣದ ಹೃದಯಭಾಗದಲ್ಲಿರುವ ಕೆಂಪೇಗೌಡ ಬಯಲು ರಂಗ ಮಂದಿರದ ಸೂಕ್ತ ನಿರ್ವಹಣೆಯಿಲ್ಲದೆ, ಮೂಲ ಸೌಕರ್ಯಗಳ ಕೊರತೆ, ಶಿಥಿಲಗೊಂಡಿರುವ ಕಟ್ಟಡ, ಶುಚಿತ್ವವಿಲ್ಲದೆ ಪಾಳುಬಿದ್ದಿದೆ. ಆದರೂ ಸಂಬಂಧಿಸಿದವರು ರಂಗಮಂದಿರ ಅಭಿವೃದ್ಧಿಗೊಳಿಸಲು ಕ್ರಮಕೈಗೊಂಡಿಲ್ಲ ಎಂದು ರಂಗಕಲಾವಿದರು, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೆ ಸರಿಯುವ ಆಯೋಜಕರು: ಕೆಂಪೇಗೌಡ ಬಯಲು ರಂಗ ಮಂದಿರದಲ್ಲಿ ಪ್ರತಿವರ್ಷ ಅನೇಕ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲಾವೇದಿಕೆ, ರಾಜಕೀಯ ಸಮಾರಂಭಗಳು ನಡೆಯುತ್ತವೆ. ಆದರೆ ಕಟ್ಟಡದಲ್ಲಿ ಮೂಲ ಸೌಕರ್ಯ ಗಳಿಲ್ಲದೆ ನರಳುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದೊಂದಾಗಿ ದೂರಾಗುತ್ತಿವೆ. ಜತೆಗೆ ಕಾರ್ಯಕ್ರಮ ಆಯೋಜಕರು, ಇಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಆಸಕ್ತಿ ವಹಿಸುತ್ತಿಲ್ಲ. ಮೂಲ ಸೌಲಭ್ಯಗಳಿಲ್ಲ, ಸೂಕ್ತ ನಿರ್ವಹಣೆಯಿಲ್ಲ. ಸುತ್ತಲೂ ಗಲೀಜು ತುಂಬಿಕೊಂಡಿದೆ. ಚಾವಣಿಗಳ ಮೇಲೆ ಗಿಡಗಂಟಿಗಳು ಬೆಳೆದು ನಿಂತಿವೆ. ಇಲ್ಲಿ ಹೇಗೆ ಕಾರ್ಯಕ್ರಮ ನಡೆಸಲು ಸಾಧ್ಯ ಎಂದು ಆರೋಪಿಸಿ, ಆಯೋಜನೆಯಿಂದ ಹಿಂದೆ ಸರಿಯುತ್ತಾರೆ.

ಪುರಸಭೆ ಗಮನಹರಿಸಲಿ: ಪಟ್ಟಣದಲ್ಲಿ ಇರುವುದೊಂದೇ ಕೆಂಪೇಗೌಡ ಬಯಲು ರಂಗಮಂದಿರ. ಈ ರಂಗಮಂದಿರದ ರಕ್ಷಣೆ ಪುರಸಭೆ ಹೊಣೆ. ರಂಗಕಲಾವಿದರು, ರಂಗಕಲೆ ಉಳಿಯಬೇಕಾದರೆ ಪುರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ, ಸೂಕ್ತ ಕ್ರಮಕೈಗೊಳ್ಳಬೇಕು. ಜನಪ್ರತಿನಿಧಿಗಳು ಎಚ್ಚೆತ್ತು ಶಿಥಿಲ ರಂಗಮಂದಿರವನ್ನು ಕೆಡವಿ, ನೂತನವಾಗಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಬೇಕಿದೆ. ಈ ಮೂಲಕ ರಂಗಕಲೆ ಪ್ರೋತ್ಸಾಹಿಸಿ, ಜೀವಂತವಾಗಿ ಉಳಿಸಿ, ಬೆಳೆಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಲಾವಿದರು, ರಂಗಕರ್ಮಿಗಳು ಒತ್ತಾಯಿಸಿದ್ದಾರೆ.

ಮನವಿ ಮಾಡಿದರೂ ಪ್ರಯೋಜನವಾಗಿಲ್ಲ: ಕೆಂಪೇಗೌಡ ಬಯಲು ರಂಗ ಮಂದಿರದ ಸೂಕ್ತನಿರ್ವಹಣೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನ ವಾಗಿಲ್ಲ. ಮಳೆ ಬಂದರೆ ಕಟ್ಟಡದ ಚಾವಣಿ ಸೋರುತ್ತಿದ್ದು, ಕಟ್ಟಡ ಬಹುತೇಕ ಶಿಥಿವಾಗುವತ್ತ ಸಾಗಿದೆ. ಜತೆಗೆ ಸುತ್ತಲೂ ಕಸ, ತ್ಯಾಜ್ಯಗಳಿಂದ ತುಂಬಿದ್ದು, ನೈರ್ಮಲ್ಯದ ಕೊರತೆಯಿದೆ. ಜತೆಗೆ ಸುತ್ತಲು ವಾಹನ ಗಳನ್ನು ನಿಲ್ಲಿಸುತ್ತಾರೆ. ಈ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನ ವಾಗಿಲ್ಲ ಎಂದು ರಂಗಕರ್ಮಿಗಳು ಆರೋಪಿಸಿದ್ದಾರೆ.

ಪಟ್ಟಣದಲ್ಲಿರುವ ರಂಗಮಂದಿರದ ಕಟ್ಟಡ ಬಹುತೇಕ ಶಿಥಿಲವಾಗಿದೆ. ಈ ಕುರಿತು ಶಾಸಕರ ಗಮನಕ್ಕೆ ತರಲಾಗುವುದು. ನೂತನ ರಂಗಮಂದಿರ ನಿರ್ಮಾಣಕ್ಕೆ ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಚ್‌.ಎನ್‌.ನಟರಾಜ್‌,  ಪುರಸಭೆ ಮುಖ್ಯಾಧಿಕಾರಿ

 

-ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.