10 ದಿನಗಳಲ್ಲಿ 10 ಅಪಘಾತ, 10 ಸಾವು


Team Udayavani, May 3, 2023, 5:11 PM IST

10 ದಿನಗಳಲ್ಲಿ 10 ಅಪಘಾತ, 10 ಸಾವು

ರಾಮನಗರ: ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅಂತರ ತಗ್ಗಿಸುವ ಉದ್ದೇಶ ದಿಂದ ನಿರ್ಮಾಣಗೊಂಡಿರುವ ಬೆಂ-ಮೈ ಎಕ್ಸ್‌ ಪ್ರಸ್‌ ಹೈವೆ ಇದೀಗ ಅಪಘಾತಗಳ ಹಾಟ್‌ಸ್ಪಾಟ್‌ ಆಗಿದೆಯಾ ಇಂತಹುದೊಂದು ಪ್ರಶ್ನೆ, ಇತ್ತೀಚಿಗೆ ನಡೆಯುತ್ತಿರುವ ಅಪಘಾತಗಳಿಂದಾಗಿ ಮೂಡಿದೆ.

ಹೌದು.., ಕಳೆದ 10 ದಿನಗಳಲ್ಲಿ ಬೆಂ-ಮೈ ಹೆದ್ದಾರಿಯಲ್ಲಿ 10ಕ್ಕೂ ಹೆಚ್ಚು ಮಂದಿ ರಸ್ತೆ ಅಪಘಾತದಿಂದ ಸಾವಿಗೀಡಾಗಿದ್ದಾರೆ. ಅದರಲ್ಲೂ ರಾಮನಗರ-ಚನ್ನಪಟ್ಟಣ ನಡುವಿನ ಬೈಪಾಸ್‌ನಲ್ಲಿ ಅಪಘಾತಗಳು ವ್ಯಾಪಕ ವಾ ಗಿದ್ದು, ಬೈಪಾಸ್‌ ರಸ್ತೆಯಲ್ಲಿ ಪ್ರಯಾಣಿಸಲು ವಾಹನ ಸವಾರರು ಅಂಜುವಂತಾಗಿದೆ. ಬೈಪಾಸ್‌ ರಸ್ತೆಯಲ್ಲಿ ನಿರಂತರವಾಗಿ ಅಪಘಾತವಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ಗಮನಹರಿಸಬೇಕಿದೆ.

ಬೈಪಾಸ್‌ನಲ್ಲೇ ಅತಿ ಹೆಚ್ಚು ಅಪಘಾತ: ಬೆಂ-ಮೈ ಎಕ್ಸ್‌ಪ್ರೆಸ್‌ ಹೈವೇ ಪ್ರಾರಂಭವಾದ ಬಳಿಕ ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ತೀವ್ರವಾಗಿದೆ. ಇದುವರೆಗೆ ಹೈವೇ ನಲ್ಲಿ ನೂರಾರು ಅಪಘಾತಗಳು ಸಂಭವಿಸಿವೆ. ಆದರೆ, ಅತಿ ಹೆಚ್ಚು ಅಪಘಾತಗಳು ಸಂಭವಿಸಿರುವುದು ರಾಮನಗರ-ಚನ್ನಪಟ್ಟಣ ನಡುವಿನ ಬೈಪಾಸ್‌ ರಸ್ತೆಯಲ್ಲೇ ಎಂಬುದು ಗಮನಾರ್ಹ. ಈಗಾಗಿ ಈ ಬೈಪಾಸ್‌ ಅಪಘಾತಗಳ ಹಾಟ್‌ಸ್ಪಾಟ್‌ ಆಗಿ ಪರಿವರ್ತನೆಗೊಂಡಿದೆ.

ರಾಮನಗರ ಮತ್ತು ಚನ್ನಪಟ್ಟಣ ಎರಡೂ ಪಟ್ಟಣಗಳ ಹೊರವಲಯದಲ್ಲಿ ಹಾಯ್ದು ಹೋಗುವ ಈ ಬೈಪಾಸ್‌ ರಸ್ತೆ ರಾಮನಗರ ತಾಲೂ ಕಿನ ಬಸವನಪುರ ಗೇಟ್‌ನಿಂದ ಪ್ರಾರಂಭವಾಗಿ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿ ಅಂತ್ಯಗೊಳ್ಳುತ್ತದೆ. ಈ ಬೈಪಾಸ್‌ 22.50 ಕಿ.ಮೀ. ನಷ್ಟು ಉದ್ದವಿದ್ದು, ಇಷ್ಟು ದೂರು ಯಾವುದೇ ಊರು ಇಲ್ಲದೆ ನಿರಾತಂಕ ವಾಗಿ ವಾಹನಗಳು ಪ್ರಯಾಣಿಸ ಬಹುದಾದ ಕಾರಣ ಇಲ್ಲಿ ಚಲಿಸುವ ವಾಹನಗಳ ವೇಗವು ಸಹಜವಾಗಿಯೇ ಹೆಚ್ಚಿರುತ್ತದೆ ಈ ಹಿನ್ನೆಲೆಯಲ್ಲಿ ಬೈಪಾಸ್‌ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ.

ಹೆಚ್ಚಿದ ಸಾವಿನ ಪ್ರಮಾಣ: ಬೈಪಾಸ್‌ ರಸ್ತೆಯಲ್ಲಿ ಸಂಭವಿಸುವ ಅಪಘಾ ತಗಳ ತೀವ್ರತೆ ಹೆಚ್ಚಾಗಿದೆ. ಈ ರಸ್ತೆಯಲ್ಲಿ ನೂರು ಕಿ.ಮೀ. ಗಿಂತ ಹೆಚ್ಚು ವೇಗದಲ್ಲಿ ವಾಹನಗಳು ಸಂಚರಿಸುವುದರಿಂದ ಅಪಘಾತ ಸಂಭವಿಸಿದಾಗ ಸಾವಿನ ಪ್ರಮಾಣ ಸಹ ಹೆಚ್ಚಾಗಿದೆ. ಏ.22 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 5 ಮಂದಿ ಸಾವಿಗೀಡಾಗಿದ್ದು, ಮೇ 1ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ 3 ಮಂದಿ ಸಾವಿಗೀಡಾಗಿದ್ದ ಪ್ರಕರಣಗಳು ಇದಕ್ಕೆ ತಾಜಾ ಉದಾಹರಣೆಗಳು. ಈ ಬೈಪಾಸ್‌ ರಸ್ತೆಯಲ್ಲಿ ಸಂಭವಿಸಿದ ಎರಡು ರಸ್ತೆ ಅವಘಡಗಳಲ್ಲಿ ವಾಹನಗಳು ಡಿವೈಡರ್‌ ಹಾರಿ ಮತ್ತೂಂದು ಬದಿಯ ರಸ್ತೆಯಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿಹೊಡೆದು ಅಪಘಾತಕ್ಕೆ ಕಾರಣವಾಗಿವೆ. ರಾಮನಗರ-ಚನ್ನಪಟ್ಟಣ ನಡುವಿನ ಬೈಪಾಸ್‌ ರಸ್ತೆಯಲ್ಲಿ -ಪ್ರಯಾಣಿಕರ ಸುರಕ್ಷತೆ ಬಗ್ಗೆ ಹೆದ್ದಾರಿ ಪ್ರಾಧಿಕಾರ ಅಗತ್ಯ ಕ್ರಮ ವಹಿಸಲಿ ಅಪಘಾತ ತಪ್ಪಿಸಿ ಪ್ರಯಾಣಿಕರ ಜೀವ ಉಳಿಸಬೇಕಿದೆ.

ಅಪಘಾತ ನಿಯಂತ್ರಣಕ್ಕೆ ಮಾಡಬೇಕಾದ್ದೇನು..?:

  1. ಬೈಪಾಸ್‌ನಲ್ಲಿ ಸಂಚರಿಸುವ ವಾಹನಗಳು ಅಡ್ಡಾದಿಡ್ಡಿ ಲೈನ್‌ ಕ್ರಾಸ್‌ ಮಾಡದಂತೆ ಕ್ರಮ ವಹಿಸಬೇಕು.
  2. ಅಪಘಾತದ ಸಮಯದಲ್ಲಿ ತುರ್ತಾಗಿ ಪ್ರಾಥಮಿಕ ಚಿಕಿತ್ಸೆ ದೊರೆಯುವಂತೆ ತುರ್ತು ಚಿಕಿತ್ಸಾ ಘಟಕವನ್ನು ಸ್ಥಾಪಿಸಬೇಕು
  3. ಪ್ರಯಾಣಿಕರಿಗೆ ತಿರುವುಗಳು ಹಾಗೂ ರಸ್ತೆ ಬಗ್ಗೆ ಮಾಹಿತಿ ನೀಡಲು ಫಲಕಗಳನ್ನು ಹಾಕಬೇಕು
  4. ಹೆದ್ದಾರಿಗೆ ಸರ್ವೀಸ್‌ ರಸ್ತೆಯಿಂದ ಯಾರೂ ಪ್ರವೇಶಿಸದಂತೆ ಅಳವಡಿಸಿರುವ ತಂತಿ ಬೇಲಿ ಕಿತ್ತುಹೋಗಿದ್ದು ಇದನ್ನು ದುರಸ್ಥಿ ಗೊಳಿಸಿ ಪ್ರಾಣಿಗಳು ಹಾಗೂ ಜನರು ಹೆದ್ದಾರಿ ಪ್ರವೇಶಿಸದಂತೆ ನಿರ್ಬಂಧಿಸಬೇಕು.
  5. ಹೆದ್ದಾರಿಯಲ್ಲಿ ಅನಗತ್ಯವಾಗಿ ನಿಲುಗಡೆ ಮಾಡುವ ವಾಹನಗಳಿಗೆ ಕಡಿವಾಣ ಹಾಕಬೇಕು. ಇದರಿಂದ ಅಪಘಾತಕ್ಕೆ ಕಾರಣವಾಗಿದೆ.
  6. ಬೈಪಾಸ್‌ ರಸ್ತೆಯಲ್ಲಿ ಅಪಘಾತವಾದ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಕ್ತ ಆಂಬ್ಯುಲೆನ್ಸ್‌ ವ್ಯವಸ್ಥೆ ಕಲ್ಪಿಸಬೇಕು.
  7. ಪ್ರಯಾಣಿಕರ ಸುರಕ್ಷತೆ ಉದ್ದೇಶದಿಂದ ಹೈವೆ ಪೆಟ್ರೋಲಿಂಗ್‌ ವ್ಯವಸ್ಥೆಯನ್ನು ಸಮರ್ಪಕವಾಗಿ ಆರಂಭಿಸಬೇಕು.

ಹೆದ್ದಾರಿ ಸೇವೆ ಆರಂಭ ಬಳಿಕ 80ಕ್ಕೂ ಹೆಚ್ಚು ಆಕ್ಸಿಡೆಂಟ್‌, 40ಕ್ಕೂ ಅಧಿಕ ಸಾವು: ಕಳೆದ 10 ದಿನಗಳ ಅವಧಿಯಲ್ಲಿ ಈ ಪಾಸ್‌ನಲ್ಲಿ 6ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಹೆದ್ದಾರಿ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರ ಪ್ರಾರಂಭವಾದಾಗಿನಿಂದ ಇದುವರೆಗೆ ಈ ರಸ್ತೆಯಲ್ಲಿ ಸರಿಸುಮಾರು 80ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರಣಿ ಅಪಘಾತಗಳು ಈ ರಸ್ತೆಯಲ್ಲಿ ನಿರಂತರವಾಗಿ ಸಂಭವಿಸುತ್ತಿದ್ದು, ಅಪಘಾತಗಳ ನಿಯಂತ್ರಣದ ಬಗ್ಗೆ ಗಮನಹರಿಸಬೇಕಿದೆ.

10ದಿನಗಳಲ್ಲಿ ನಡೆದ ಅವಘಡಗಳು:

ಏ.22: ಚನ್ನಪಟ್ಟಣ ತಾಲೂಕಿನ ಲಂಬಾಣಿತಾಂಡ್ಯ ಬಳಿ ಸಂಭವಿಸಿದ ಅಪಘಾತದಲ್ಲಿ 5 ಮಂದಿ ಸಾವು

ಏ.26: ರಾಮನಗರದ ಜಯಪುರ ಗೇಟ್‌ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ 1 ಸಾವು 9 ಮಂದಿಗೆ ಗಾಯ

ಏ.27: ರಾಮನಗರದ ಬಸವನಪುರ ಗೇಟ್‌ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ 4 ಮಂದಿಗೆ ತೀವ್ರ ಗಾಯ

ಮೇ 1: ರಾಮನಗರ ಜಯಪುರ ಗೇಟ್‌ ಬಳಿ ಕಾರಿಗೆ ಬೈಕ್‌ ಢಿಕ್ಕಿ 3 ಮಂದಿ ಸಾವು ಮೇ 1: ರಾಮನಗರದ ಬಸವನಪುರ ಸಮೀಪ ಬೈಕ್‌ಗೆ ಕಾರು ಢಿಕ್ಕಿ 1 ಸಾವು

– ಸು.ನಾ. ನಂದಕುಮಾರ್‌

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.