ಹೈಟೆಕ್ ಮಾರುಕಟ್ಟೆಗೆ ಕ್ರಮ: ಶಾಸಕ
ಎಪಿಎಂಸಿ ಅಧ್ಯಕ್ಷ-ನಿರ್ದೇಶಕರ ಸಭೆಯಲ್ಲಿ ಶಾಸಕರ ಭರವಸೆ
Team Udayavani, Apr 30, 2020, 5:36 PM IST
ಮಾಗಡಿ: ಕನಕಪುರದ ಮಾರುಕಟ್ಟೆ ಮಾದರಿಯಲ್ಲಿ ಮಾಗಡಿಯಲ್ಲೂ ಸುಂದರ ಹಾಗೂ ಸುಸಜ್ಜಿತ ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಎ.ಮಂಜುನಾಥ್ ತಿಳಿಸಿದರು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಸದಸ್ಯರ, ಎಪಿಎಂಸಿ ಅಧ್ಯಕ್ಷ ಹಾಗೂ ನಿರ್ದೇಶಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಹಿಂದಿನ ಹೈಟೆಕ್ ಮಾರುಕಟ್ಟೆ ಕಟ್ಟಡ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿದೆ. ಅದಕ್ಕಾಗಿ ಸುಮಾರು 2.75 ಕೋಟಿ ಮೀಸಲಿಟ್ಟಿದ್ದೇವೆ. ಹೈಟೆಕ್ ಸುಮಾರು 9 ಕೋಟಿ ರೂ. ಅಂದಾಜಿಸ ಲಾಗಿದೆ. ಅದಕ್ಕಾಗಿ ಸಂಸದ, ಎಂಎಲ್ಸಿ, ಶಾಸಕರ ಅನುದಾನ ಕ್ರೋಢಿಕರಿಸಲು ಚಿಂತಿಸ ಲಾಗಿದೆ ಎಂದರು.
ಲಾಕ್ಡೌನ್ ಮುಗಿದ ನಂತರ ಪುರಸಭೆ ಅಂಗಡಿ ಮಳಿಗೆ ಬಹಿರಂಗ ಹರಾಜು ಪ್ರಕ್ರಿಯೆ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಮಹೇಶ್ ತಿಳಿಸಿದರು. ಪುರಸಭೆ ಸದಸ್ಯ ರಂಗಹನುಮಯ್ಯ ಮಾತನಾಡಿದರು. ಜಿಲ್ಲಾ ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಪಿಎಸೈ ವೆಂಕಟೇಶ್, ಪುರಸಭೆ ಸದಸ್ಯ ಕೆ.ವಿ.ಬಾಲರಘು, ಎಂ.ಎನ್.ಮಂಜುನಾಥ್, ಕಾಂತರಾಜು, ರಿಯಾಜ್, ಅನಿಲ್ಕುಮಾರ್, ರಘು, ಶಿವಕುಮಾರ್, ಅಶ್ವಥ್, ನಾಗರತ್ನಮ್ಮ, ರಮೇಶ್, ರೇಖಾ, ಜಯಕುಮಾರ್, ಎಪಿಎಂಸಿ ನಿರ್ದೇಶಕ ಮಾರೇಗೌಡ, ಕೆ.ಟಿ.ಮಂಜುನಾಥ್, ರೂಪೇಶ್, ನಾಗರಾಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ