ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ

ಮೊದಲ ಬಾರಿ ನಿಯಮ ಉಲ್ಲಂಘನೆಗೆ 500 ರೂ. ದಂಡ • ಮುಂದುವರಿಸಿದರೆ ಪರವಾನಗಿ ರದ್ದು

Team Udayavani, Aug 14, 2019, 4:16 PM IST

rn-tdy-1

ಚನ್ನಪಟ್ಟಣದಲ್ಲಿರುವ ಬೆಂಗಳೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ.

ಚನ್ನಪಟ್ಟಣ: ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರ ಠಾಣೆ ಪೊಲೀಸರು, ಆ.15ರಿಂದ ವಾಹನ ಸವಾರರು ಸಂಚಾರ ನಿಯಮಗಳ ಪಾಲನೆ ಮಾಡುವ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ನಿಯಮಗಳ ಉಲ್ಲಂಘನೆಯಿಂದಾಗಿ ಬೆಂಗಳೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ಸೇರಿದಂತೆ ರಾಜ್ಯ ಹೆದ್ದಾರಿಗಳಲ್ಲಿ ಸಾಕಷ್ಟು ಅಪಘಾತಗಳು ಪ್ರತಿದಿನ ಸಂಭವಿಸುತ್ತಿದ್ದು, ಸಾವು ನೋವು ಹೆಚ್ಚಾಗುತ್ತಿವೆ. ಬಹುತೇಕ ಅಪಘಾತಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಗೋಚರವಾಗುತ್ತಿದೆ. ಎಲ್ಲ ಬಗೆಯ ವಾಹನ ಸವಾರರಿಗೂ ಈಗಾಗಲೇ ತಿಳಿವಳಿಕೆ ನೀಡಿ, ಕಡ್ಡಾಯ ಅನುಷ್ಠಾನಕ್ಕೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ವಾಹನ ಸವಾರರಿಗೆ ಎಚ್ಚರಿಕೆ: ಹೆಲ್ಮೆಟ್, ಸೀಟ್ ಬೆಲ್r ಧರಿಸದೇ ಚಾಲನೆ, ಮಿತಿಮೀರಿದ ವೇಗ, ಅಡ್ಡಾದಿಡ್ಡಿ ಚಾಲನೆ, ಸಿಗ್ನಲ್ಜಂಪ್‌, ಎಲ್ಲೆಂದರಲ್ಲಿ ವಾಹನ ನಿಲುಗಡೆ, ದಾಖಲೆಗಳಿಲ್ಲದೇ ವಾಹನ ಚಾಲನೆ, ವಾಹನಗಳಿಗೆ ವಿಮೆ ಇಲ್ಲದೆ ಚಾಲನೆ ಹೀಗೆ ಎಲ್ಲ ಬಗೆಯ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸುವ ಜತೆಗೆ, ಇನ್ನೊಮ್ಮೆ ಉಲ್ಲಂಘನೆ ಮಾಡಿದರೆ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ನೀಡಲು ಪೊಲೀಸರು ಮುಂದಾಗಲಿದ್ದಾರೆ.

ಸಿಸಿ ಕ್ಯಾಮರಾಗಳ ಅಳವಡಿಕೆ: ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಹಿನ್ನಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯ ಪಟ್ಟಣ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪ್ರಮುಖ ಸಿಗ್ನಲ್ಗಳಲ್ಲಿ ಸಿಸಿ ಟಿವಿ ಕಣ್ಗಾವಲು ವಾಹನ ಸವಾರರ ನಿಯಮ ಉಲ್ಲಂಘನೆ ಸೆರೆ ಹಿಡಿಯಲು ಸಜ್ಜಾಗಿವೆ. ಕೆಂಗಲ್, ಶೇರೂ ಹೋಟೆಲ್, ಸಾತನೂರು ವೃತ್ತ, ಪೊಲೀಸ್‌ ಠಾಣೆ ವೃತ್ತ, 8ನೇ ಕ್ರಾಸ್‌ಗಳಲ್ಲಿ ಹೈ ರೆಸಲ್ಯೂಷನ್‌ ಕ್ಯಾಮರಾಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.

ಜತೆಗೆ ಇಂಟರ್‌ಸೆಪ್ಟರ್‌ಗಳು, ತಪಾಸಣೆ ತಂಡ ಸಹ ಸವಾರರ ಮೇಲೆ ಹದ್ದಿನ ಕಣ್ಣಿಡಲಿದೆ. ಸಂಚಾರ ಉಲ್ಲಂಘನೆ ಮಾಡಿ, ತಪ್ಪಿಸಿಕೊಂಡರೂ ಪ್ರಕರಣ ಆನ್‌ಲೈನ್‌ನಲ್ಲಿ ದಾಖಲಾಗಿ, ನೇರ ಮನೆಗೆ ನೋಟಿಸ್‌ ಬರಲಿದೆ. ವಾಹನದ ಆರ್‌.ಸಿ. ದಾಖಲಾತಿಯೊಂದಿಗೆ ಸೇರ್ಪಡೆಗೊಳ್ಳಲಿದೆ. ಮುಂದೆ ಮತ್ತೆ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದಾಗ ಹಳೆಯ ಪ್ರಕರಣ ಸೇರಿ ದಂಡ ಕಟ್ಟಬೇಕಿದೆ.

ಪಾರ್ಕಿಂಗ್‌ ಹಾವಳಿಗೂ ಕಡಿವಾಣ: ಪಟ್ಟಣದಲ್ಲಿ ಪ್ರಮುಖವಾಗಿ ಪಾರ್ಕಿಂಗ್‌ ಸಮಸ್ಯೆ ಯಥೇಚ್ಚವಾಗಿ ಕಾಡುತ್ತಿದೆ. ಎಂ.ಜಿ.ರಸ್ತೆ, ಜೆಸಿ ರಸ್ತೆ ಸೇರಿದಂತೆ ಬೆಂಗಳೂರು- ಮೈಸೂರು ಹೆದ್ದಾರಿ ಅಕ್ಕಪಕ್ಕದಲ್ಲಿ ಎಲ್ಲೆಂದರಲ್ಲಿ ಪಾರ್ಕಿಂಗ್‌ ಮಾಡಲಾಗುತ್ತಿದೆ. ಈಗಾಗಲೇ ಪ್ರಮುಖ ರಸ್ತೆಗಳಲ್ಲಿ ದಿನಗಳನ್ನು ನಿಗದಿಪಡಿಸಿ, ಏಕಮುಖ ಪಾರ್ಕಿಂಗ್‌ ಜಾರಿಯಲ್ಲಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಇದಕ್ಕೂ ಸಹ ಮುಂದಿನ ದಿನಗಳಲ್ಲಿ ಕಡಿವಾಣ ಬೀಳಲಿದೆ.

ಎಷ್ಟಿದೆ ದಂಡ?: ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ., ಎದುರು ರಸ್ತೆಯಲ್ಲಿ ಚಾಲನೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ. ನೋ ಪಾರ್ಕಿಂಗ್‌ ಸ್ಥಳದಲ್ಲಿ ನಿಲುಗಡೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ. ಇವೆಲ್ಲವೂ ಮುಂದುವರಿದರೆ ಚಾಲನಾ ಪರವಾನಗಿ ರದ್ದುಪಡಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗುತ್ತಿದೆ.

ಇನ್ನು ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರ ಸಾಗಣೆ, ಆಟೋಗಳಲ್ಲಿ ಶಾಲಾ ಮಕ್ಕಳನ್ನು ಕರೆದೊ ಯ್ಯುವುದು. ಆಟೋಗಳಲ್ಲಿ ಹೆಚ್ಚು ಪ್ರಯಾಣಿಕರನ್ನು ಹಾಕುವುದು, ಆಟೋ ಚಾಲಕರು ಸಮವಸ್ತ್ರ ಧರಿಸದಿ ರುವುದು. ಶಾಲಾ ವಾಹನಗಳ ಚಾಲಕರು ನಿಯಮ ಪಾಲಿಸದಿರುವುದು ಹೀಗೆ ಎಲ್ಲಾ ರೀತಿಯ ನಿಯಮ ಗಳನ್ನು ಪಾಲಿಸದಿದ್ದರೆ ದಂಡ ವಿಧಿಸುವ ಜತೆಗೆ ಪರವಾನಗಿ ರದ್ದುಪಡಿಸಲು ಆರ್‌ಟಿಒಗೆ ಶಿಫಾರಸ್ಸು ಮಾಡಲು ಪೊಲೀಸರು ಸಜ್ಜುಗೊಂಡಿದ್ದಾರೆ.

 

● ಎಂ.ಶಿವಮಾದು

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.