ಬೆಡ್‌ಗಳ ಕೊರತೆ ನೀಗಿಸಲು ಅಗತ್ಯ ಕ್ರಮ: ಡಿಸಿಎಂ


Team Udayavani, Apr 27, 2021, 1:00 PM IST

ಬೆಡ್‌ಗಳ ಕೊರತೆ ನೀಗಿಸಲು ಅಗತ್ಯ ಕ್ರಮ: ಡಿಸಿಎಂ

ಕನಕಪುರ: ಜಿಲ್ಲೆಯ ಕೋವಿಡ್‌ ಸೋಂಕಿತರಿಗೆ ಬೆಡ್‌  ಗಳ ಕೊರತೆ ನಿವಾರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ್‌ ತಿಳಿಸಿದರು.

ತಾಲೂಕಿನ ಹಾರೋಹಳ್ಳಿ ಹೋಬಳಿ ಚಂದ್ರಮ್ಮ ದಯಾನಂದ್‌ ಸಾಗರ್‌ ಆಸ್ಪತ್ರೆ ವೈದ್ಯಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊರತೆ ಬರಲ್ಲ: ಕೋವಿಡ್‌ ಸಂದರ್ಭವನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ದಯಾನಂದ್‌ ಆಸ್ಪತ್ರೆಯಲ್ಲಿ ಲಭ್ಯವಿರುವ ಅವಕಾಶ ಬಳಸಿಕೊಳ್ಳಲು ಭೇಟಿ ನೀಡಿದ್ದೇನೆ. ಆಡಳಿತ ಮಂಡಳಿಜತೆ ಮಾತು ಕತೆ ನಡೆಸಿದ್ದೇನೆ. ಈಗಾಗಲೇ ಆಸ್ಪತ್ರೆಯಲ್ಲಿ 100 ಆಕ್ಸಿಜನ್‌, 50 ಸಾಮಾನ್ಯ ಬೆಡ್‌ಮೀಸಲಿಟ್ಟಿದ್ದಾರೆ. 100 ಬೆಡ್‌ ಮೀಸಲಿರಿಸುವ ಭರವಸೆ ನೀಡಿದ್ದಾರೆ. ಹೆಚ್ಚುವರಿ ಬೆಡ್‌ಗಳಿಗೆ ಆಕ್ಸಿಜನ್‌ಕೊರತೆ ಇದ್ದು ಪೂರೈಸಲು ಸರ್ಕಾರ ಸಿದ್ಧವಾಗಿದೆ. ರಾಜ್ಯದಲ್ಲಿ ಆಕ್ಷಿಜನ್‌ ಕೊರತೆ ಇದೆಯಾದರೂನಮ್ಮಜಿಲ್ಲೆಯಲ್ಲಿ ಯಾವುದೇ ಕೊರತೆ ಬಾರದ ಹಾಗೆ ನಿಭಾಯಿಸುತ್ತಿದ್ದೇವೆಂದರು.

ಭಯ ಪಡಬೇಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭೀಣಿ, ಬಾಣಂತಿಯರ ಪಕ್ಕದ ವಾರ್ಡ್‌ ನಲ್ಲಿ ಸೋಂಕಿತರು ಇರುವ ಅಪಾಯದ ಬಗ್ಗೆ ಪ್ರತಿ ಕ್ರಿಯಿಸಿ, ಇಡೀ ರಾಜ್ಯದಲ್ಲಿ ರಾಮನಗರ ಒಂದೇ ಜಿಲ್ಲೆಯಲ್ಲಿ ಮಾತ್ರ ರೆಗ್ಯುಲರ್‌ ಆಸ್ಪತ್ರೆಗಳನ್ನು ಕೋವಿಡ್‌- 19ಗೆ ಬಳಕೆಮಾಡಲಾಗುತ್ತಿದೆ. ಸೋಂಕಿ ತರ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಕೋವಿಡ್‌ ಆಸ್ಪತ್ರೆಗಳಿಗೆಸ್ಥಳಾಂತರಿಸಲಾಗುತ್ತಿದೆ. ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ನಿಯಂತ್ರಣಕ್ಕೆ ಕ್ರಮ: ಜಿಲ್ಲಾ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಅವ್ಯವಸ್ಥೆ ಬಗ್ಗೆ ಪ್ರತಿಕ್ರಿಯಿಸಿದ ಅವರು,ಜಿಲ್ಲಾ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಹೆಚ್ಚಿನ ಸಮಸ್ಯೆ ಇಲ್ಲ. ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ. ಬೇರೆಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ನಮ್ಮ ಜಿಲ್ಲೆಯಲ್ಲಿಆಸ್ಪತ್ರೆ ಸೌಲಭ್ಯ, ವೈದ್ಯರು, ಸಿಬ್ಬಂದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಬಹಳಷ್ಟು ನಿಯಂತ್ರಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ವ್ಯವಸಾಯ ಉತ್ಪಾದನಾ ವಲಯ ಎಂದಿನಂತೆ ನಡೆಯಲಿವೆ. ಕಟ್ಟಡ ಕಾಮಗಾರಿಮುಂದುವರಿಯಲಿವೆ. ಹೆಚ್ಚು ಜನ ಸೇರುವ ಗಾರ್ಮೆಂಟ್ಸ್‌ ಉದ್ಯಮಕ್ಕೆ ನಿಷೇಧ ಮಾಡಲಾಗಿದೆ. ಕೋವಿಡ್ ಹರಡದಂತೆ ತಡೆಯಲು ಮುಂದಿನ 14 ದಿನಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ಕ್ರಮ ಕೈಗೊಂಡಿದ್ದೇವೆಂದರು.

ಪಡಿತರ ವಿತರಣೆ: ಬಡವರಿಗೆ ವರದಾನವಾಗಿದ್ದ ಪಡಿತರ ಕಡಿತಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಕಳೆದ ಸರ್ಕಾರ 5 ಕೆ.ಜಿ.ಪಡಿತರ ನೀಡುತ್ತಿತ್ತು. ಆದರೆ ವ್ಯಾಪಕವಾಗಿ ಪಡಿತರ ಕಾಳಸಂತೆಯಲ್ಲಿಮಾರಾಟವಾಗುತ್ತಿತ್ತು. ಅದಕ್ಕೆ ಕಡಿವಾಣ ಹಾಕುವುದರ ಜತೆಗೆ ರೈತರಿಗೂ ಅನುಕೂಲವಾಗುವಂತೆ ರೈತರಿಂದ ರಾಗಿ ಖರೀದಿ ಮಾಡಿ 3 ಕೆ.ಜಿ, ರಾಗಿ 2 ಕೆ.ಜಿ.ಅಕ್ಕಿನೀಡಲಾಗುತ್ತಿದೆ. ವಿತರಣೆಯಲ್ಲಿ ಕಡಿಮೆಯಾಗಿಲ್ಲ ಎಂದರು.

ಈ ವೇಳೆ ಎಸ್‌ಪಿ ಗಿರೀಶ್‌, ಜಿಲ್ಲಾಧಿಕಾರಿ ರಾಕೇಶ್‌, ಸಿಇಒ ಇಕ್ರಂ, ಡಿಎಚ್‌ಒ ನಿರಂಜನ್‌, ಆರ್‌ಸಿಎಚ್‌ ಡಾ.ಪದ್ಮಾ, ತಹಶೀಲ್ದಾರ್‌ ವಿಶ್ವನಾಥ್‌, ತಾಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಮುರುಳೀಧರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.