ಬಿಜೆಪಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಆಕ್ರೋಶ


Team Udayavani, May 17, 2018, 2:17 PM IST

ram.jpg

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ನಿರೀಕ್ಷಿತ ಮತಗಳು ಬಂದಿಲ್ಲ. ಬಿಜೆಪಿ ಅಭ್ಯರ್ಥಿ ಲೀಲಾವತಿ ಪ್ರಚಾರ ಕೈಗೊಳ್ಳದಿರುವುದರಿಂದ ಪಕ್ಷಕ್ಕೆ ಇರುವ ಸಾಂಪ್ರದಾಯಿಕ ಮತಗಳು ಲಭಿಸಿಲ್ಲ ಎಂದು ಬಿಜೆಪಿ ಸ್ಲಂ ಮೋರ್ಚಾ ಅಧ್ಯಕ್ಷ ರಮೇಶ್‌ ಆರೋಪಿಸಿದ್ದಾರೆ. ಲೀಲಾವತಿ ಮತ್ತು ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು ಅವರನ್ನು ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಕ್ಷೇತ್ರದಲ್ಲಿ ಸುಮಾರು 20 ರಿಂದ 25 ಸಾವಿರ ಸಾಂಪ್ರದಾಯಿಕ ಮತಗಳಿವೆ. ಅಭ್ಯರ್ಥಿ ಲೀಲಾವತಿ ಅವರು ಕ್ಷೇತ್ರಾದ್ಯಂತ ಸಂಚರಿಸಿಲ್ಲ. ಹೀಗಾಗಿ ಪಕ್ಷಕ್ಕೆ ಕೇವಲ 4750 ಮತಗಳು ಮಾತ್ರ ಲಭಿಸಿವೆ. ಪಕ್ಷದ ಪರ ಪ್ರಚಾರಕ್ಕೆ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್‌ ಸಹ ಶ್ರಮಿಸಲಿಲ್ಲ ಎಂದರು.

ತಾವು ಕಸಬಾ ಹೋಬಳಿಯ ತಮ್ಮ ಗ್ರಾಮಗಳಿಗೆ ಬಂದು ಪ್ರಚಾರ ಮಾಡುವಂತೆ ಅಭ್ಯರ್ಥಿ ಲೀಲಾವತಿ ಅವರಿಗೆ ಮನವಿ ಮಾಡಿದ್ದೆ. ಆದರೆ ಅವರು ಸಂಪನ್ಮೂಲನದ ನೆಪವೊಡ್ಡಿ ಪ್ರಚಾರಕ್ಕೆ ಬರಲೇ ಇಲ್ಲ ಎಂದು ದೂರಿದರು. ಕಸಬಾ
ಹೋಬಳಿಗೆ ಅಭ್ಯರ್ಥಿ ಬಾರದಿದ್ದರಿಂದ ಮತದಾರರಿಗೆ ಅವರ ಮುಖಪರಿಚಯವೂ ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಲೀಲಾವತಿ ಅವರು ತಮ್ಮ ಸ್ವಗ್ರಾಮ ಮತ್ತು ಹೋಬಳಿಯಲ್ಲಿ ಪ್ರಚಾರ ಮಾಡಿದರೇ ಹೊರತು ಕ್ಷೇತ್ರದ ಇತರೆಡೆ ಅವರ ಪ್ರವಾಸ ಕೈಗೊಳ್ಳಲೇ ಇಲ್ಲ. ತಮ್ಮ ಮತ್ತು ಇತರ ಕಾರ್ಯಕರ್ತರ ದೂರವಾಣಿ ಕರೆಗಳನ್ನು ಸ್ವೀಕರಿಸಲಿಲ್ಲ ಎಂದರು. 

ಚುನಾವಣಾ ಪ್ರಚಾರಕ್ಕೆಂದೆ ಪಕ್ಷ ಚೆಕ್‌ ಮುಲಕ 15 ಲಕ್ಷ ರೂ. ಕೊಟ್ಟಿದೆ. ಪಕ್ಷ ಕೊಟ್ಟ ಆರ್ಥಿಕ ಸಂಪನ್ಮೂಲ ಸಮರ್ಪಕವಾಗಿ ಬಳಕೆಯಾಗಿಲ್ಲ. ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಬಹುಶಃ ಪಕ್ಷಕ್ಕೆ ಕನಿಷ್ಠ 20 ರಿಂದ 25 ಸಾವಿರ ಮತಗಳು ದೊರಕುತ್ತಿದ್ದವು ಎಂದು ದೂರಿದರು. 

ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಇತರ ಕಾರ್ಯಕರ್ತರು ಮಾತನಾಡಿ, ಪಕ್ಷ ನೀಡಿದ ಸಂಪನ್ಮೂಲದ ಸಮರ್ಪಕ ಬಳಕೆ ಮಾಡದಿರುವುದು ಮತ್ತು ತಕ್ಕ ಪ್ರಚಾರ ಕೈಗೊಳ್ಳಲದೆ ಪಕ್ಷವನ್ನು ವಂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್‌ ಮತ್ತು ಅಭ್ಯರ್ಥಿ ಲೀಲಾವತಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಸ್ವಾಮಿ, ಸಾಮಾಜಿಕ ಜಾಲತಾಣ ಘಟಕ ವಿನೋದ್‌ ಭಗತ್‌, ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿರಣ್‌ ಕುಮಾರ್‌, ಕೃಷ್ಣ, ಅನಿಲ್‌, ಲೋಕೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.