ಪ್ರಭಾವಿಗಳ ಭವಿಷ್ಯ ಇಂದು ನಿರ್ಧಾರ

ಇಂದು ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ • ಸಂಘಗಳ ಅಧ್ಯಕ್ಷರಿಗೆ ಮತದಾನದ ಅವಕಾಶ

Team Udayavani, May 12, 2019, 3:18 PM IST

ramanagar-tdy01

ಚನ್ನಪಟ್ಟಣ: ಕಳೆದ ಹದಿನೈದು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ಭಾನುವಾರ ನಡೆಯಲಿದೆ. ಶತಾಯ ಗತಾಯ ಗೆಲ್ಲಬೇಕೆಂದು ಜಿದ್ದಿಗೆ ಬಿದ್ದಿರುವ ತಾಲೂಕು ಜೆಡಿಎಸ್‌ ಪಕ್ಷದ ಇಬ್ಬರು ಪ್ರಭಾವಿ ಮುಖಂಡರ ಭವಿಷ್ಯವನ್ನು ಮತದಾರರು ನಿರ್ಧಾರಿಸಲಿದ್ದಾರೆ.

ಹಾಲಿ ನಿರ್ದೇಶಕ ಎಸ್‌.ಲಿಂಗೇಶ್‌ಕುಮಾರ್‌ ಹಾಗೂ ಮಾಜಿ ನಿರ್ದೇಶಕ ಜಯಮುತ್ತು ಅವರು ಸ್ಪರ್ಧಾಕಣದಲ್ಲಿದ್ದು, ಕಳೆದ ಬಾರಿಯೂ ಈ ಇಬ್ಬರೇ ನೇರ ಸ್ಪರ್ಧಿಗಳಾಗಿದ್ದರು. ತಾಲೂಕಿನ 147 ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರುಗಳು ಮತದಾನದ ಅವಕಾಶ ಪಡೆದುಕೊಂಡಿದ್ದಾರೆ. ಇವರೆಲ್ಲರೂ ನೂತನ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, 4ರ ನಂತರ ಎಣಿಕೆ ನಡೆದು, ಫಲಿತಾಂಶವೂ ಸಹ ಪ್ರಕಟವಾಗಲಿದೆ.

ಎರಡು ಅವಧಿಯಲ್ಲೂ ಆಯ್ಕೆ: ಎರಡು ಅವಧಿಯಲ್ಲಿ ಎಸ್‌.ಲಿಂಗೇಶ್‌ಕುಮಾರ್‌ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಜಯಮುತ್ತು ಕಳೆದ ಅವಧಿಯಲ್ಲಿ ಆಯ್ಕೆಯಾಗಿ, ಆಯ್ಕೆಯಾಗಲು ಬೇಕಿರುವ ಹಾಲು ಉತ್ಪಾದಕರ ಸಂಘಗಳ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೆಲವೇ ತಿಂಗಳು ನಿರ್ದೇಶಕ ಸ್ಥಾನದಿಂದ ವಂಚಿತರಾಗಬೇಕಾಯಿತು. ನ್ಯಾಯಾಲಯ ಅವರ ಆಯ್ಕೆಯನ್ನು ವಜಾಗೊಳಿಸಿ ಮತ್ತೂಮ್ಮೆ ಮರುಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗಳಿಗೆ ಸೂಚಿಸಿತ್ತು. ನಂತರ ನಡೆದ ಚುನಾವಣೆಯಲ್ಲಿ ಎಸ್‌.ಲಿಂಗೇಶ್‌ ಕುಮಾರ್‌ ಆಯ್ಕೆಗೊಂಡಿದ್ದರು.

ಮುಂದುವರಿದ ಜಿದ್ದಾಜಿದ್ದಿ: ಕಳೆದ ಬಾರಿಯ ಚುನಾವಣೆಯಲ್ಲಿ ಆರಂಭವಾದ ಜಿದ್ದಾಜಿದ್ದಿ, ಈ ಬಾರಿಯೂ ಮುಂದುವರಿದಿದೆ. ತಾಲೂಕು ಜೆಡಿಎಸ್‌ನಲ್ಲಿ ಬಣ ರಾಜಕಾರಣ ಸೃಷ್ಟಿಸುತ್ತಿರುವ ಬಮೂಲ್ ವಿಚಾರವನ್ನು ಸರಿಪಡಿಸಲು ವರಿಷ್ಠರಿಗೆ ಮನಸ್ಸಿಲ್ಲ. ಶಕ್ತಿ ಇದ್ದವರು ಗೆದ್ದುಬನ್ನಿ ಎನ್ನುವ ಮೂಲಕ ಭಿನ್ನಮತಕ್ಕೆ ಪರೋಕ್ಷವಾಗಿ ಅವರೇ ಕಾರಣರಾಗುತ್ತಿದ್ದಾರೆ ಎನ್ನುವ ಮಾತುಗಳು ಕಳೆದ ಬಾರಿಯಿಂದಲೂ ಇವೆ, ಆದು ಈ ಬಾರಿಯೂ ಮರುಕಳಿಸಿದೆ.

ಈ ಬಾರಿಯೂ ಎರಡು ಬಣಗಳ ಸೃಷ್ಟಿ: ಸ್ಪರ್ಧಿಗಳಿಬ್ಬರನ್ನೂ ಕರೆಸಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ವಿಚಾರದಲ್ಲಿಯೂ ಸಹ ವರಿಷ್ಠರು ಸ್ಪಷ್ಟಪಡಿಸುವ ಗೋಜಿಗೆ ಹೋಗಿಲ್ಲ. ಪರಿಣಾಮ ತಾಲೂಕು ಜೆಡಿಎಸ್‌ನಲ್ಲಿ ಈ ಬಾರಿಯೂ ಎರಡು ಬಣಗಳ ಸೃಷ್ಟಿಯಾಗಿದೆ. ಜಿದ್ದಾಜಿದ್ದಿಗೆ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಟೊಂಕಕಟ್ಟಿ ನಿಂತಿವೆ. ಮತದಾನ ಹೊಂದಿರುವ ಗ್ರಾಮಗಳಲ್ಲಿ ಎರಡೂ ಅಭ್ಯರ್ಥಿಗಳ ಪರ ಗುಂಪುಗಳು ಸೃಷ್ಪಿಸಯಾಗಿ ಮತಯಾಚನೆ ಮಾಡಿವೆ. ನೆರೆಯ ಕನಕಪುರ ಕ್ಷೇತ್ರದಲ್ಲಿ ಡಿಕೆ ಸಹೋದರರು ಅವಿರೋಧವಾಗಿ ನಿರ್ದೇಶಕರನ್ನು ಆಯ್ಕೆ ಮಾಡಿದ್ದಾರೆ. ಆದರೆ, ಸಿಎಂ ಕುಮಾರಸ್ವಾಮಿ ಕ್ಷೇತ್ರದಲ್ಲಿ ಮಾತ್ರ ಜಿದ್ದಾಜಿದ್ದಿ ಏರ್ಪಟ್ಟಿದೆ.

ಮತದಾರರಿಗೆ ಪ್ರವಾಸ ಭಾಗ್ಯ: ವಿಧಾನಸಭೆ ಚುನಾವಣೆಯನ್ನೂ ಮೀರಿಸುವಂತೆ ಬಮೂಲ್ ಚುನಾವಣೆಯಲ್ಲಿ ಕಾಂಚಾಣ ಸದ್ದುಮಾಡಿದೆ. ಹಣ, ಪ್ರವಾಸ ಭಾಗ್ಯ ಈಗಾಗಲೇ ಪ್ರಾಪ್ತಿಯಾಗಿವೆ. ಚುನಾವಣೆ ಹಕ್ಕನ್ನು ಅಧ್ಯಕ್ಷರಿಗೆ ನೀಡುವ ಸಭೆಯಿಂದ ಹಿಡಿದು, ಮತದಾನ ಆಗುವವರೆಗೂ ಸಂಪೂರ್ಣ ಖರ್ಚು ವೆಚ್ಚಗಳನ್ನು ಅಭ್ಯರ್ಥಿಗಳೇ ನೋಡಿಕೊಂಡಿದ್ದಾರೆ. ಯಾವುದೇ ಅದ್ಧೂರಿ, ಸದ್ದುಗದ್ದಲಿಲ್ಲದೇ ನಡೆಯುತ್ತಿದ್ದ ಚುನಾವಣೆ ಅಖಾಡದಲ್ಲಿ ಈ ಬಾರಿ ಲಕ್ಷಾಂತರ ರೂ.ಹಣ ಹರಿಯಲು ಅಭ್ಯರ್ಥಿಗಳ ಪ್ರತಿಷ್ಠೆಯೇ ಕಾರಣ ಎನ್ನಬಹುದಾಗಿದೆ. ಪ್ರತಿ ಮತಕ್ಕೆ 1.5 ಲಕ್ಷ ರೂ.ಗಳಿಂದ 2 ಲಕ್ಷ ರೂ.ವರೆಗೆ ದುಬಾರಿಯಾಗಿದೆ. ಮತದಾರರಿಗಿಂತ ಅಭ್ಯರ್ಥಿಗಳೇ ಈ ಹಣ ನಿಗದಿಪಡಿಸಿದ್ದಾರೆ ಎನ್ನುವುದು ಇಲ್ಲಿ ಗಮನಾರ್ಹ. ಅಲ್ಲದೆ, ಈ ಹಣದ ಪ್ರಮಾಣ ದುಪ್ಪಟ್ಟಾಗುವ ಮಾತುಗಳೂ ಸಹ ಈ ಹಿಂದೆ ಕೇಳಿ ಬಂದಿದ್ದವು.

ಬಮೂಲ್ ರಾಜಕಾರಣ ಇಂದು ಅಂತ್ಯ: ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ಬಮೂಲ್ ರಾಜಕಾರಣ ಇದೀಗ ಅಂತ್ಯಗೊಳ್ಳುವ ಸಂದರ್ಭ ಎದುರಾಗಿದೆ. ಭಾನುವಾರ ಅಭ್ಯರ್ಥಿಗಳು ನಡೆಸಿದ ಶ್ರಮಕ್ಕೆ ಮತದಾರರು ಉತ್ತರ ನೀಡಲಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಸಮನಾಗಿ ಅಖಾಡವನ್ನು ರಂಗುಗೊಳಿಸಿದ್ದಾರೆ. ಎಲ್ಲ ಪಟ್ಟುಗಳನ್ನೂ ಹಾಕಿದ್ದಾರೆ. ಮತದಾರರು ಯಾರ ಬೆಂಬಲಿಸಲಿದ್ದಾರೆ ಎಂಬುದು ನಿಗೂಢವಾಗಿದೆ.

● ಎಂ.ಶಿವಮಾದು

 

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.