ಜೆಡಿಎಸ್‌ ಕಾರ್ಯಕರ್ತರೊಂದಿಗೆ ಅನಿತಾ ಕುಮಾರಸ್ವಾಮಿ ಚರ್ಚೆ


Team Udayavani, Oct 21, 2018, 11:34 AM IST

jds.jpg

ರಾಮನಗರ: ನ.3ರಂದು ನಡೆಯುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನಿತಾ ಕುಮಾರಸ್ವಾಮಿ ಶನಿವಾರ ನಗರದ ವಾರ್ಡುವಾರು ಪ್ರಮುಖ ಕಾರ್ಯಕರ್ತರುಗಳೊಡನೆ ಸಮಾಲೋಚನೆ ನಡೆಸಿದರು. ನಗರವ್ಯಾಪ್ತಿಯಲ್ಲಿ ತಮಗೆ ಗರೀಷ್ಠ ಮತಗಳು ಲಭ್ಯವಾಗುವಂತೆ ಮತದಾರರ ಮನವೊಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಗರದ ಹೊರವಲಯದಲ್ಲಿರುವ ಹಿಲ್‌ ವ್ಯೂ ರೆಸಾರ್ಟ್‌ನಲ್ಲಿ ನಡೆದ  ಸಮಾಲೋಚನಾ ಸಭೆಯಲ್ಲಿ ಅವರು ನಗರದ 31 ವಾರ್ಡುಗಳ ಪ್ರಮುಖ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷಕ್ಕೆ ಲಭಿಸಿದ ಮತಗಳೆಷ್ಟು, ಎದುರಿಸದ ಸಮಸ್ಯೆಗಳು ಹಾಲಿ ಇರುವ ಸಮಸ್ಯೆಗಳು ಹೀಗೆ ವಿವಿಧ ವಿಚಾರಗಳಲಿ ಮಾಹಿತಿ ಸಂಗ್ರಹಿಸಿದರು. 

ಸಾರ್ವತ್ರಿಕ ಚುನಾವಣೆಯಲ್ಲಿ ನಗರವ್ಯಾಪ್ತಿಯಲ್ಲಿ  ಪಕ್ಷದ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಕಡಿಮೆ ಮತಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರು ವಿಶೇಷ ಕಾಳಜಿವಹಿಸಿದ್ದರು ಎಂದು ಗೊತ್ತಾಗಿದೆ. ನಗರ ವ್ಯಾಪ್ತಿಯಲ್ಲಿ ಈ ಬಾರಿ ತಮಗೆ ಹೆಚ್ಚು ಮತಗಳು ಲಭ್ಯವಾಗಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ಕೊಟ್ಟಿರುವುದಾಗಿ  ಪಕ್ಷದ ಮೂಲಗಳು ತಿಳಿಸಿವೆ. 

ಕಾಂಗ್ರೆಸ್‌ನವರೊಂದಿಗೆ ಜೊತೆಗೂಡಿ ಪ್ರಚಾರ ಮಾಡಲು ಸಲಹೆ: ಸಮಾಲೋಚನೆ ವೇಳೆ ಕೆಲವು ವಾರ್ಡುಗಳ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ ಎಂದು ಗೊತ್ತಾಗಿದೆ. ಕೆಲವರನ್ನು ಬದಲಾಯಿಸುವಂತೆಯೂ  ಮನವಿ ಮಾಡಿಕೊಂಡಿದ್ದಾರೆ. ವಿಶೇಷವಾಗಿ ಸಂಪನ್ಮೂಲ ವಿಚಾರದಲ್ಲಿ ಬಹಳಷ್ಟು ಕಾರ್ಯಕರ್ತರು ತಮ್ಮ ನೋವು ತೋಡಿಕೊಂಡಿದ್ದಾರೆ.

ಇವೆಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ಭರವಸೆ ಕೊಟ್ಟ ಅನಿತಾ ಕುಮಾರಸ್ವಾಮಿ ಪ್ರಚಾರದ ವೇಳೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಜೊತೆಗೆ ಕರೆದುಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ. ತಾವು ಮೈತ್ರಿ ಅಭ್ಯರ್ಥಿಯಾಗಿದ್ದು, ಪ್ರಚಾರದಲ್ಲಿ ಕಾಂಗ್ರೆಸ್‌ ಮುಖಂಡರು ಸಹ ಭಾಗವಹಿಸಲಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ  ಇದ್ದ ಗೊಂದಲಗಳು ನಿವಾರಣೆ ಆಗಿವೆ.  ಸೋಮವಾರ ಅಧಿಕೃತವಾಗಿ ಪ್ರಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. 

ಕಾರ್ಯಕರ್ತರೊಡನೆ ನಡೆದ ಸಭೆಯ ವೇಳೆ ರಾಜ್ಯ ಜೆಡಿಎಸ್‌ನ ಬೂತ್‌ ಸಮಿತಿ ಅಧ್ಯಕ್ಷ ಸುರೇಶ್‌ ಬಾಬು, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ, ರಾಜ್ಯ ವಕ್ತಾರ ಬಿ.ಉಮೇಶ್‌, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ  ಅಶೋಕ್‌ ಕುಮಾರ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ರಾಜಶೇಖರ್‌, ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ  ಎಚ್‌.ಸಿ.ರಾಜು, ನಗರಸಭಾ ಸದಸ್ಯ ಪರ್ವಿಜ್‌ ಪಾಷ, ಮಾಜಿ ಅಧ್ಯಕ್ಷ ಸಾಬಾನ್‌ ಸಾಬ್‌, ಪ್ರಮುಖರಾದ ಭಾಸ್ಕರ್‌ ಮುಂತಾದವರು ಹಾಜರಿದ್ದರು. 

ಎಚ್‌.ಡಿ.ಕೆ. ಮತ್ತು ಡಿ.ಕೆ.ಶಿ ಜಂಟಿ ಪ್ರಚಾರ: ಕಾರ್ಯಕರ್ತರ ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಅಕ್ಟೋಬರ್‌ 22ರಿಂದ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುವುದಾಗಿ, ಸಿಎಂ ಎಚ್‌.ಡಿ.ಕುಮಾರಸ್ವಾಮಿ. ಸಚಿವ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌   ಸಹ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು. 

ಸಾರ್ವತ್ರಿಕ ಚುನಾವಣೆಯಲ್ಲಿ  ನಗರವ್ಯಾಪ್ತಿಯಲ್ಲಿ  ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸ್ಪಲ್ಪ ಮಟ್ಟಿಗೆ ಮತಗಳಿಕೆಯಲ್ಲಿ ಹಿನ್ನಡೆಯಾಗಿತ್ತು. ಈ ಬಾರಿ ಚುನಾವಣೆ ವಿಭಿನ್ನ ಸನ್ನಿವೇಶದಲ್ಲಿ ನಡೆಯುತ್ತಿರುವುದರಿಂದ ಈ ಬಾರಿ ಅಧಿಕ ಮತಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಎರಡು ದಶಕಗಳಿಂದ ತಮ್ಮ ಕುಟುಂಬಕ್ಕೂ ರಾಮನಗರದ ಮತದಾರರಿಗೂ ಅವಿನಾಭಾವ ಸಂಬಂಧವಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರನ್ನು ತಮ್ಮ ಮನೆ ಮಗನಂತೆ ಇಲ್ಲಿನ ಜನ ಕಾಣುತ್ತಿದ್ದಾರೆ.  ಕ್ಷೇತ್ರದ ಮತದಾರರು ತಮ್ಮನ್ನು ಮನೆ ಮಗಳಂತೆ ಸ್ವೀಕರಿಸುವ ವಿಶ್ವಾಸ ವ್ಯಕ್ತಪಡಿಸಿದರು. ರಾಜಕೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆಗಳು ಸಹಜ, ಅದನ್ನೇ ದೊಡ್ಡದು ಮಾಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದರು. ಭಾನುವಾರ ನಡೆಯುವ ಕಾಂಗ್ರೆಸ್‌ ಕಾರ್ಯಕರ್ತರೊಂದಿಗಿನ ಸಭೆಗೂ ಮಾಧ್ಯಮದವರಿಗೆ ಪ್ರವೇಶವಿಲ್ಲ ಎಂದರು. 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.