ಜಲಾಮೃತ ಯೋಜನೆ ಅನುಷ್ಠಾನ ಸಮರ್ಪಕವಾಗಲಿ
Team Udayavani, Jun 4, 2019, 10:25 AM IST
ರಾಮನಗರ: ಸಮುದಾಯದ ಸಹಕಾರದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಜಲಾಮೃತ ಯೋಜನೆ ಅನುಷ್ಠಾನವಾಗೊಳಿಸಿ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಹಾಗೂ ಜಿಪಂನಿಂದ ಜಲಾಮೃತ ಯೋಜನೆ ಅನುಷ್ಠಾನ ಕುರಿತ ಸಭೆ ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಜಾಗತಿಕ ಹವಾಮಾನ ಬದಲಾವಣೆಯ ಪ್ರತಿಕೂಲಪರಿಣಾಮಗಳನ್ನು ಸತತ ಬರಗಾಲಗಳ ಮುಖಾಂತರ ಎದುರಿಸುತ್ತಿದ್ದೇವೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿನ ಕೆರೆಗಳನ್ನು ಪಟ್ಟಿಮಾಡಿ ಕೆರೆಗಳ ಹೂಳು ತೆಗೆಯುವ ಹಾಗೂ ಪರಿಸರ ಅಭಿವೃದ್ಧಿ ಕೆಲಸಗಳನ್ನು ಮಾಡ ಬೇಕಿದೆ ಎಂದರು.
ಜಲವರ್ಷ-2019: ಕರ್ನಾಟಕ ಸರ್ಕಾರ 2019ನ್ನು ಜಲವರ್ಷವೆಂದು ಘೋಷಿಸಿದೆ. ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ ಹಾಗೂ ಹಸಿರೀಕರಣ ವನ್ನು ಕೇಂದ್ರವಾಗಿಟ್ಟುಕೊಂಡು ಜಲಾಮೃತ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆಎಂದು ಹೇಳಿದರು. ಜಲಾಮೃತ ಯೋಜನೆಯು ಸಮುದಾಯ ಆಧಾರಿತ ಚಳವಳಿಯಾಗಿದೆ. ಎಲ್ಲಾ ಸಂಬಂಧಿತ ಸರ್ಕಾರಿ ಇಲಾಖೆಗಳು,ಶಾಲಾ ಕಾಲೇಜುಗಳು, ಖಾಸಗಿ ಸಂಸ್ಥೆಗಳು, ಸ್ಥಳೀಯ ಸಮುದಾಯಗಳು ಹಾಗೂ ಜಲ ಸಂರಕ್ಷಣೆ ಸಂಬಂಧಿತ ಸಂಘ ಸಂಸ್ಥೆಗಳೊಂದಿಗೆ ಅನುಷ್ಠಾನಗೊಳಿಸಲು ಸರ್ಕಾರ ಉದ್ದೇಶಿಸಿದೆ. ಜಲಾಮೃತ ಯೋಜನೆಗೆ ಭಾಗಿದಾರ ಸಂಸ್ಥೆಗಳಾಗಿ ಎರಡು ಖಾಸಗಿ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಸ್ಥೆಗಳು ಇನ್ನಿತರ ಸಂಸ್ಥೆಗಳ ಸಹಕಾರ ದೊಂದಿಗೆ ನಾಲ್ಕು ತಾಲೂಕುಗಳಲ್ಲಿನ ಕೆರೆಗಳನ್ನು ಹೂಳು ತೆಗೆಯುವ ಹಾಗೂ ಕೆರೆಗಳ ಅಭಿವೃದ್ಧಿ ಪಡಿಸುವ ಕಾಮಗಾರಿ ಮಾಡಬೇಕಿದೆ ಎಂದರು.
ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ತಲಾ ಎರೆಡೆರೆಡು ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಸಂಬಂಧಿಸಿದ ಸಂಸ್ಥೆ ಮತ್ತು ಇಲಾಖೆ ಜಲಾನಯನ ಪ್ರದೇಶಗಳನ್ನು ಗುರುತಿಸಿ, ಕೆರೆಗಳ ಹೂಳು ಎತ್ತುವ ಕೆಲಸ ವನ್ನು ಜವಾಬ್ದಾರಿಯುತ ವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎರಡು ಖಾಸಗಿ ಸಂಸ್ಥೆಗಳು ಸಣ್ಣ ಸಣ್ಣ ಖಾಸಗಿ ಸಂಸ್ಥೆಗಳೊಂದಿಗೆ ಸೇರಿ ಕೈಗಾರಿಕಾ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಸಸಿ ನೆಡುವ ಕೆಲಸಗಳನ್ನು ಮಾಡಬೇಕು. ಇದುಪರಿಸರವನ್ನು ಸುಂದರವಾಗಿ ಕಾಣುವಂತೆ ಮಾಡುತ್ತದೆ ಎಂದರು. ಜಿಪಂ ಸಿಇಒ ಎಂ.ಪಿ. ಮುಲ್ಲೆ„ ಮುಹಿಲನ್, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಉಮೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ