ಅರ್ಕಾವತಿ ನದಿಯನ್ನು ಕೊಂದವರು ಯಾರು?

ಯುಜಿಡಿ ವ್ಯವಸ್ಥೆ ಅವೈಜ್ಞಾನಿಕ ಹಿನ್ನೆಲೆ, ಅರ್ಕಾವತಿ ಒಡಲು ಕಲ್ಮಷಕ್ಕೆ ಕಾರಣ

Team Udayavani, Aug 31, 2020, 12:17 PM IST

ಅರ್ಕಾವತಿ ನದಿಯನ್ನು ಕೊಂದವರು ಯಾರು?

ರಾಮನಗರ: ನಗರದ ಮಧ್ಯಭಾಗದಲ್ಲಿ ಹರಿಯುತ್ತಿರುವ ಅರ್ಕಾವತಿ ನದಿಯನ್ನು ಕೊಂದವರ್ಯಾರು? ಹೀಗೊಂದು ಪ್ರಶ್ನೆ ಜಿಲ್ಲಾ ಕೇಂದ್ರ ರಾಮ ನಗರದಲ್ಲಿ ಉದ್ಭವಿಸಿದೆ.

ಮರಳು ಲೂಟಿಯಾಗಿ ಬರಡು: ಕೆಲವು ದಶಕಗಳ ಹಿಂದೆ ರಾಮನಗರ ನಗರ ಪ್ರದೇಶದ ಮೂಲಕ ಅರ್ಕಾವತಿ ನದಿಶುಭ್ರ ನೀರಿನೊಂದಿಗೆ ಹರಿಯುತ್ತಿತ್ತು. ಮಂಚನಬೆಲೆ ಜಲಾಶಯ ನಿರ್ಮಾಣವಾದ ನಂತರ ನದಿಯಲ್ಲಿ ನೀರು ಹರಿಯುವುದು ನಿಂತಿದೆ. ನದಿಪಾತ್ರದಲ್ಲಿದ್ದ ಮರಳು ಲೂಟಿಯಾಗಿ ಇಡೀ ನದಿ ಪಾತ್ರ ಬರಡಾಗಿದೆ.

ಅರ್ಕಾವತಿ ನದಿ ಮಲೀನ: ಮುಂದೆ ಸಂಗಮದಲ್ಲಿ ಕಾವೇರಿ ನದಿ ಸೇರುವ ತನಕ ರಾಮನಗರ ನಗರ ಸೇರಿದಂತೆ ನದಿಯ ಎರಡೂ ಕಡೆಯ ಗ್ರಾಮಗಳಲ್ಲಿ ಜನಸಂಖ್ಯೆ ಹೆಚ್ಚಾದಂತೆಲ್ಲ ಕಲ್ಮಷ ನೀರು ನದಿಯ ಒಡಲಿಗೆ ಸೇರುತ್ತಿದೆ. ಇಂದು ಅರ್ಕಾವತಿ ನದಿ ಅಕ್ಷರಶಃ ಮಲೀನವಾಗಿದೆ.ಕೇವಲ ಎರಡು ಮೂರು ದಶಕಗಳಲ್ಲಿ ನದಿ ಪಾತ್ರದಲ್ಲಿ ಲಾಳದ ಕಡ್ಡಿ, ಜೊಂಡು ಮುಂತಾದ ಬೇಡದ ಗಿಡಗಳು ಸೊಂಪಾಗಿ ಬೆಳೆದಿದೆ. ವಿಷ ಜಂತುಗಳ ಆವಾಸ ಸ್ಥಾ ನವಾಗಿ ಪರಿಣಮಿಸಿದೆ. ಕೆಲ ತಿಂಗಳ ಹಿಂದೆ ಚಿರತೆಗಳು ಇಲ್ಲಿ ಅಡಗಿ ಕುಳಿತು, ರಾತ್ರಿ ವೇಳೆ ನಗರ ಪ್ರದೇಶದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು.

ಗಂಭೀರವಾಗಿ ಪರಿಗಣಿಸಲೇ ಇಲ್ಲ!: ರಾಮನಗರ – ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಕೆ.ಶೇಷಾದ್ರಿಯವರು ಆಸಕ್ತಿ ವಹಿಸಿ ನದಿ ಪಾತ್ರದಲ್ಲಿ ಬೆಳೆದಿದ್ದ ಲಾಳದಕಡ್ಡಿ, ಜೊಂಡು ಇತ್ಯಾದಿಯನ್ನು ತೆರವು ಮಾಡಿಸಿದ್ದರು. ಈ ಪ್ರಯತ್ನಗಳೆಲ್ಲ ತಾತ್ಕಾಲಿಕ, ಜೊಂಡು ಮತ್ತೆ ಮತ್ತೆ ಬೆಳೆಯುತ್ತದೆ. ಇದಕ್ಕೆ ವೈಜ್ಞಾನಿಕ ಪರಿಹಾರ ಕಂಡು ಕೊಳ್ಳಬೇಕಾಗಿದೆ ಎಂದು ಅವರು ಅಂದೇ ಸರ್ಕಾರದ ಗಮನ ಸೆಳೆದಿದ್ದರು. ಆದರೆ ಅದನ್ನು ಯಾರು ಗಂಭೀರವಾಗಿ ಪರಿಗಣಿಸಲೇ ಇಲ್ಲ.

20 ಕಡೆಯಿಂದ ನದಿ ಸೇರುತ್ತಿದೆ ಒಳಚರಂಡಿ ನೀರು! : ನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಸುಮಾರು 5 ಕಿ.ಮೀ. ಉದ್ದದ ನದಿ ಪಾತ್ರ ಇಂದು ಗಬ್ಬೆದ್ದು ಹೋಗಿದೆ. ಜಿಲ್ಲಾ ಕೇಂದ್ರ ರಾಮನಗರದಲ್ಲಿ ಒಳಚರಂಡಿ ವ್ಯವಸ್ಥೆ ಇದೆ. ಆದರೆ ಅದು ಅವೈಜ್ಞಾನಿಕವಾಗಿದೆ. ನಗರದ ಹೊರವಲಯದಲ್ಲಿರುವ ಯುಜಿಡಿ ನೀರು ಶುದ್ಧೀಕರಣ ಘಟಕಕ್ಕೆ ತಲುಪಬೇಕಾದ ಒಳಚರಂಡಿ ವ್ಯವಸ್ಥೆ ನೀರು ತಲುಪುತ್ತಿಲ್ಲ. 5 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 20 ಕಡೆ ಒಳಚರಂಡಿ ನೀರು ನದಿ ಸೇರುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರಾದ ಪಿ.ವಿ.ಬದರೀನಾಥ್‌, ಚಂದನ್‌ ಮತ್ತಿತರರು ಪತ್ತೆ ಹಚ್ಚಿದ್ದಾರೆ. ಈ ವಿಚಾರದಲ್ಲಿ ಈ ಕಾರ್ಯಕರ್ತರ ತಂಡ ನಗರಸಭೆಯ ಮಾಜಿ ಸದಸ್ಯ ಬಿ.ನಾಗೇಶ್‌ ನೇತೃತ್ವದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಅವರ ಗಮನ ಸೆಳೆದಿದ್ದಾರೆ.

ಏನಾಗಬೇಕು? :  ಸರ್ಕಾರ ಪರಿಸರ ಕಾಳಜಿ ಮೆರೆಯಬೇಕಾಗಿದೆ. ಇದಕ್ಕೆ ಸ್ಥಳೀಯ ನಗರಸಭೆ, ತಾಲೂಕು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ನದಿ ಪಾತ್ರದ ಮೂಲಕ ಹಾಳಾಗುತ್ತಿರುವ ಪರಿಸರ ಉಳಿಸಬೇಕಾಗಿದೆ. ನಗರ ವ್ಯಾಪ್ತಿಯ ಯುಜಿಡಿ ವ್ಯವಸ್ಥೆಯನ್ನು ತಕ್ಷಣ ಉನ್ನತೀಕರಿಸಿ, ಕಲ್ಮಷ ನೀರು ನದಿ ಒಡಲನ್ನು ಸೇರದಂತೆ ಎಚ್ಚರ ವಹಿಸಬೇಕು. ಕಲ್ಮಷ ನೀರು ನೇರ ಶುದ್ಧೀಕರಣ ಘಟಕ ಸೇರುವಂತೆ ಅಲ್ಲಿ ನೀರು ಸಂಸ್ಕರಣಗೊಂಡ ನಂತರ ನದಿಪಾತ್ರಕ್ಕೆ ಹರಿ ಬಿಡಬೇಕು ಎಂಬುದು ನಾಗರಿಕರ ಆಶಯ. ಇಲ್ಲದಿದ್ದರೆ ಈ ನದಿ ಕೂಡ ವೃಷಭಾವತಿಯಂತೆ ಆಗುತ್ತದೆ ಎಂದು ಜನತೆ ಎಚ್ಚರಿಸಿದ್ದಾರೆ.

ನಗರ ವ್ಯಾಪ್ತಿಯ ಅರ್ಕಾವತಿ ನದಿಯ ಎರಡೂ ಬದಿಯ ಹದ್ದುಬಸ್ತನ್ನು ಸರ್ವೇ ಮೂಲಕ ಗುರುತಿಸಬೇಕು. ಒತ್ತುವರಿತೆರವುಗೊಳಿಸಬೇಕು. ಕೊಳಚೆ ನೀರು ನದಿ ಸೇರದಂತೆ ಪರಿಹಾರೋಪಾಯ ಕಂಡುಕೊಳ್ಳಬೇಕು. ತಕ್ಷಣಕ್ಕೆ ಲಾಳದ ಕಡ್ಡಿ ಮುಂತಾದ ಗಿಡಗಳನ್ನು ತೆರವುಗೊಳಿಸಿ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿ ಮತ್ತೆ ಬೆಳೆಯದಂತೆ ಕ್ರಮ ವಹಿಸಬೇಕಾಗಿದೆ.  ಬಿ.ನಾಗೇಶ್‌, ನಗರಸಭೆ ಮಾಜಿ ಸದಸ್ಯ

 

ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.