ಕೋವಿಡ್: ಕಂಗಾಲಾದ ಕಲಾವಿದರು

ಸರ್ಕಾರದಿಂದ ಸಮರ್ಪಕವಾಗಿ ತಲುಪದ 2000 ರೂ. ಧನ ಸಹಾಯ

Team Udayavani, Oct 30, 2020, 4:00 PM IST

ಕೋವಿಡ್: ಕಂಗಾಲಾದ ಕಲಾವಿದರು

ಕನಕಪುರ: ಕಲೆ ಸಾಹಿತ್ಯ ಸಂಸ್ಕೃತಿಗೆ ರಾಜ್ಯ ದೇಶಕ್ಕೆ ಮಾದರಿಯಾಗಿದೆ. ಆದರೆ ಅದನ್ನು ಉಳಿಸಿ ಬೆಳೆಸುತ್ತಿರುವ ಕಲಾವಿದರ ಬದುಕು ಕೋವಿಡ್  ಮಹಾಮಾರಿಯಿಂದ ಬೀದಿಗೆ ಬಿದ್ದಿದೆ.

ಡೊಳ್ಳು ಕುಣಿತ, ಸೋಬಾನೆ ಪದ, ತಮಟೆ ವಾದ್ಯ, ಗೊರವರ ಕುಣಿತ, ಕರಡಿ ಕುಣಿತ, ಕಂಸಾಳೆ ಪದ, ವೀರಬಾಹು, ವೀರಗಾಸೆ ಕುಣಿತ, ಸಿದ್ದಪ್ಪಾಜಿ, ಮಹದೇಶ್ವರ, ಮಂಟೇಸ್ವಾಮಿ ಭಕ್ತಿ ಗೀತೆಗಳನ್ನು ಪೂರ್ವಿಕರ ಕಾಲದಿಂದಲೂ ಗಾಯಕರು, ಕಲಾವಿದರು ಇವುಗಳನ್ನು ಕಟ್ಟಿ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ.

ಕಾರ್ಯಕ್ರಮಗಳು ಸ್ತಬ್ಧ: ಪಾರಂಪರಿಕವಾದ ದಸರಾ ಉತ್ಸವ, ಊರ ಹಬ್ಬ, ನವರಾತ್ರಿ, ಗಣೇಶ ಚತುರ್ಥಿ, ಕನ್ನಡ ರಾಜ್ಯೋತ್ಸವದಂತಹ ಹಬ್ಬಗಳಲ್ಲಿ ಕಲಾವಿದರು ತಮ್ಮ ಕಲೆ ಪ್ರದರ್ಶನ ಮಾಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವುದರ ಜೊತೆಗೆ ತಮ್ಮ ಬದುಕನ್ನು ಕಟ್ಟಿಕೊಂಡಿದ್ದರು. ಆದರೆ ಇತ್ತೀಚೆಗೆ ಒಕ್ಕರಿಸಿದ ಕೋವಿಡ್  ದಿಂದ ನಾಡು-ನುಡಿ ಸಾಹಿತ್ಯ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮ ಗಳು ಎಲ್ಲವೂ ಸ್ತಬ್ಧಗೊಂಡಿವೆ. ಇದರಿಂದ ಕಲಾವಿದರು ಬದುಕು ನಡೆಸುವುದು ಕಷ್ಟವಾಗಿದೆ.

ಸದ್ಬಳಕೆಯಾಗದ ಅನುದಾನ: ಗಣೇಶ ಚತುರ್ಥಿ ತಮಟೆ ನಾದ, ಕಲೆಗಳ ಪ್ರದರ್ಶನವಿಲ್ಲದೆ ಕಳೆದುಹೋಗಿದೆ. ದಸರಾ ಉತ್ಸವ ಬೆರಳೆಣಿಕೆಯಷ್ಟು ಮಂದಿಗೆ ಸೀಮಿತವಾಗಿದೆ. ಮುಂಬರುವ ಕನ್ನಡ ರಾಜ್ಯೋತ್ಸವ ಸರಳತೆಗೆ ಸಾಕ್ಷಿಯಾಗಲಿದೆ. ಇನ್ನು ಗ್ರಾಮೀಣ ಭಾಗದ ಊರ ಹಬ್ಬಗಳು ಸಂಪೂರ್ಣ ಸ್ಥಗಿತಗೊಂಡಿವೆ. ಈ ಎಲ್ಲಾ ಕಾರ್ಯಕ್ರಮಗಳು ಕಲಾವಿದರಿಂದಲೇ ಕಳೆಕಟ್ಟುತ್ತಿದ್ದವು. ಆದರೆ, ಕೋವಿಡ್   ಮಹಾಮಾರಿ ಎಲ್ಲಾ ರಂಗಗಳ ಮೇಲೆ ಪರಿಣಾಮ ಬೀರಿ ದೇಶದ ಆರ್ಥಿಕತೆಯನ್ನು ಬುಡಮೇಲಾಗಿಸಿದೆ. ಇದರಿಂದ ಬೀದಿಗೆ ಬಿದ್ದ ಕಲಾವಿದರನ್ನು ಕೈ ಹಿಡಿಯಬೇಕಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನದಿಂದ ಇಲಾಖೆಗೆ ಬಂದಿದ್ದ ಕೋಟ್ಯಂತರ ರೂ. ಅನುದಾನಸದ್ಬಳಕೆಯಾಗದೆ, ಸರ್ಕಾರ ಹಿಂಪಡೆದಿದೆ ಎಂಬ ಆರೋಪಗಳು ವ್ಯಕ್ತವಾಗುತ್ತಿವೆ.

ನೆರವು ಬೇಕಿದೆ ಕಲಾವಿದರಿಗೆ: ಕೋವಿಡ್   ಸಂಕಷ್ಟದಲ್ಲಿ ಕುಲಕಸುಬುದಾರರು, ವಾಹನ ಚಾಲಕರು, ರೈತರು ಹಾಗೂ ಇತರೆ ರಂಗದವರಿಗೆ ಸಹಾಯಧನ ನೀಡಿದ್ದ ಸರ್ಕಾರ ಕಲಾವಿದರನೆರವಿಗೆ ಘೋಷಣೆ ಮಾಡಿದ 2 ಸಾವಿರ ರೂ. ಧನ ಸಹಾಯ ಜಿಲ್ಲೆಯ ಕಲಾವಿದರಿಗೆ ಸಮರ್ಪಕವಾಗಿ ತಲುಪದೇ ಇರುವುದು ಮಾತ್ರ ವಿಪರ್ಯಾಸವೇ ಸರಿ. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾ

ಮಟ್ಟದ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳದೆ, ಹಿಂದಕ್ಕೆ ಕಳುಹಿಸಿದ್ದಾರೆ. ಇಂತಹ ಬದ್ಧತೆ ಇಲ್ಲದ ರಾಜಕಾರಣಿಗಳು ಮತ್ತು ಅಧಿಕಾರಿಗಳು ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೇಗೆ ಪ್ರೋತ್ಸಾಹಿಸಬಲ್ಲರು. ಇಂತಹ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದ ಕಲಾವಿದರ ಬದುಕು ನಾಶವಾಗುತ್ತಿದೆ. ಸರ್ಕಾರಕಲಾವಿದರ ನೆರವಿಗೆ ಬರಬೇಕಿದೆ ಎಂದು ದಮ್ಮ ದೀವಿಗೆ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೋವಿಡ್  ದಿಂದ ಸಂಕಷ್ಟದಲ್ಲಿದ್ದ ಕಲಾವಿದರಿಗೆ ಸರ್ಕಾರ 2 ಸಾವಿರ ರೂ. ಧನ ಸಹಾಯ ಘೋಷಣೆ ಮಾಡಿತ್ತು. ಆದರೆ, ಹಲವು ರಾಜ್ಯಮಟ್ಟದ ಕಲಾವಿದರಿಗೆ ಅದು ತಲುಪಿಲ್ಲ. ಇನ್ನೂ ಗ್ರಾಮೀಣ ಭಾಗದ ಕಲಾವಿದರಿಗೆ ತಲುಪಲು ಹೇಗೆ ಸಾಧ್ಯ ಸರ್ಕಾರ ಕಲಾವಿದರನ್ನು ಕಡೆಗಣಿಸಿದ್ದು, ಸಾಕು ಇನ್ನಾದರೂ ಸ್ಪಂದಿಬೇಕಿದೆ. ವೆಂಕಟಾಚಲ, ದೊಡ್ಡಾಲಹಳ್ಳಿಯ ರಾಜ್ಯ ಮಟ್ಟದ ಜಾನಪದ ಕಲಾವಿದ.

 

ಬಿ.ಟಿ.ಉಮೇಶ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.