ಚನ್ನಪಟ್ಟಣದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ
ರಾಮನಗರದಲ್ಲಿ ನಿಲ್ಲದ ಕಮಲ - ತೆನೆ ಕದನ
Team Udayavani, Oct 3, 2022, 6:36 PM IST
ಚನ್ನಪಟ್ಟಣ : ಬಿಜೆಪಿ ಮುಖಂಡ,ಆರ್ ಟಿಐ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ನಗರದ ಲೋಕೋಪಯೋಗಿ ಇಲಾಖೆಯ ಕಚೇರಿ ಮುಂಭಾಗ ನಡೆದಿದೆ.
ಸಿದ್ದೇಗೌಡ ಎನ್ನುವವರ ಮೇಲೆ ಜೆಡಿಎಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಗೋವಿಂದಹಳ್ಳಿ ನಾಗರಾಜ್ ಮತ್ತು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.
ಮುಖಕ್ಕೆ 3 ಹೊಲಿಗೆ ಹಾಕುವಷ್ಟರ ಮಟ್ಟಿಗೆ ಹಲ್ಲೆ ನಡೆಸಲಾಗಿದ್ದು, ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದ್ದು, ಗಾಯಾಳು ಸಿದ್ದೇಗೌಡ ಹೇಳಿಕೆ ನೀಡಿದ್ದು, ನಾನು 2006 ರಿಂದ ಆರ್ ಟಿಐ ಕಾರ್ಯಕರ್ತನಾಗಿದ್ದೇನೆ. ಕೆಲವು ಮಾಹಿತಿ ಬೇಕೆಂದು ಪಿಡಬ್ಲ್ಯೂ ಡಿ ಕಚೇರಿಗೆ ಹೋಗಿದ್ದೆ. ಎಂಜಿನಿಯರ್ ರಮ್ಯಾರವರ ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ಗೋವಿಂದಹಳ್ಳಿ ನಾಗರಾಜು ಸಹ ಬಂದರು. ನಾನು ಅವರು ಬರುತ್ತಿದ್ದಂತೆ ಹೊರಗೆ ಹೋಗಲು ಬಂದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದು, ಕೊರಳ ಪಟ್ಟಿ ಹಿಡಿದರು.ಅವರ ಸಂಬಂಧಿಕರು, ಕಾರು ಚಾಲಕ ಸೇರಿ ಎಲ್ಲರೂ ಹಲ್ಲೆ ಮಾಡಿದರು. ರಾಡ್ ನಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೂಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು