ಕುದೂರು ನಾಡಕಚೇರಿ ಕಟ್ಟಡ ಸಂಪೂರ್ಣ ಕಳಪೆ

ಉದ್ಘಾಟನೆ ದಿನವೇ ಮುರಿದು ಬಿದ್ದ ಕಿಟಕಿ

Team Udayavani, Jun 28, 2022, 2:44 PM IST

ಕುದೂರು ನಾಡಕಚೇರಿ ಕಟ್ಟಡ ಸಂಪೂರ್ಣ ಕಳಪೆ

ಕುದೂರು: ಉತ್ತಮ ಕಟ್ಟಡ ನಿರ್ಮಾಣಕ್ಕೆಂದು ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ, ಗುತ್ತಿಗೆದಾರರು ಈ ಅನುದಾನವನ್ನು ಬಳಸಿಕೊಂಡು ಕಳಪೆ ಕಾಮಗಾರಿ ಮಾಡಿ, ಜನರಿಗೂ ಹಾಗೂ ಸರ್ಕಾರಕ್ಕೆ ಮಕ್ಮಲ್‌ ಟೋಪಿ ಹಾಕ್ತಾರೆ ಎನ್ನುವುದಕ್ಕೆ ಇದೊಂದು ಒಳ್ಳೆಯ ಉದಾಹರಣೆ.

ಹೌದು, ಕುದೂರು ಗ್ರಾಮದಲ್ಲಿ ರೈತಾಪಿ ವರ್ಗಗಳಿಗೆ ಅನುಕೂಲವಾಗಲಿ ಎಂದು ನೂತನವಾಗಿ ಕಟ್ಟಿರುವ ನಾಡಕಚೇರಿ ಕಟ್ಟಡ ಸಂಪೂರ್ಣ ಕಳಪೆಯಾಗಿದೆ ಉದ್ಘಾಟನೆಯಾದ ದಿನವೇ ಮುರಿದು ಬಿದ್ದ ಕಿಟಕಿ, ಕಟ್ಟಡದಲ್ಲಿ ವಿದ್ಯುತ್‌ ಸಂಪರ್ಕ ಸರಿಯಿಲ್ಲ, ಕಟ್ಟಡದ ಬಾಗಿಲನ್ನು ಕೂಡ ಸಿಮೆಂಟ್‌ನಲ್ಲೇ ಕಟ್ಟಿದ್ದಾರೆ. ಇಲ್ಲಿ ಯಾವುದೇ ಭದ್ರತೆ ಇಲ್ಲ ಎನ್ನುವುದು ಕುದೂರು ಗ್ರಾಮಸ್ಥರ ದೂರಾಗಿದೆ.

ಉದ್ಘಾಟನೆ ದಿನವೇ ಮುರಿದು ಬಿತ್ತು ಕಿಟಕಿ: ನಾಡಕಚೇರಿಯ ಉದ್ಘಾಟನೆ ದಿನವೇ ಕಿಟಕಿ ಯೊಂದು ಮುರಿದು ಬಿದ್ದಿದೆ. ಕಟ್ಟಡಕ್ಕೆ ಬಳಸಿರುವ ವಸ್ತುಗಳು ಕೂಡ ಅತ್ಯಂತ ಕಳಪೆಮಟ್ಟದಾಗಿದೆ. ಇಷ್ಟೆಲ್ಲಾ ಕಳಪೆ ಮಟ್ಟದಿಂದ ಕೂಡಿದ್ದರೂ, ಈ ಕುರಿತು ಯಾವೊಬ್ಬ ಅಧಿಕಾರಿಯಾಗಲಿ, ಎಂಜಿನಿಯರ್‌ ಆಗಲಿ ಗುತ್ತಿಗೆ ದಾರರನ್ನು ಪ್ರಶ್ನಿಸುವ ಗೋಜಿಗೆ ಹೋಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಧಿಕಾರಿಗಳು ಸಹ ಇದರಲ್ಲಿ ಶಾಮೀಲು ಆಗಿದ್ದಾರೆಯೇ ಎನ್ನುವ ಅನುಮಾನ ಮೂಡುತ್ತಿದೆ.

ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು: ಇಲ್ಲಿ ನಾಡಕಚೇರಿ ಆರಂಭಿಸಿದರೆ ರೈತಾಪಿ ವರ್ಗದವರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲಕ್ಕಿಂತ ಅನನು ಕೂಲವೇ ಹೆಚ್ಚು. ಏಕೆಂದರೆ, ರೈತರಿಗೆ, ವೃದ್ಧರಿಗೆ, ಮಹಿಳೆಯರಿಗೆ ಊರ ಹೊರಗಡೆ ಇರುವುದರಿಂದ ಜೆರಾಕ್ಸ್‌ ಮಾಡಿಸುವುದಕ್ಕೆ, ಹಾಳೆ, ಪೆನ್ನು ತರುವುದಕ್ಕೆ ಒಂದೂವರೆ ಕಿ.ಮೀ. ಹೋಗಬೇಕು. ಮತ್ತೆ ಒಂದೂವರೇ ಕಿ.ಮೀ. ಬರಬೇಕು. ಆಟೋದಲ್ಲಿ ಹೋಗಿ ಬರೋಣವೆಂದರೆ 80 ರೂ. ಖರ್ಚು ಆಗುತ್ತದೆ. ಅಧಿಕಾರಿಗಳು ಸಹ ಕಚೇರಿಯಲ್ಲಿ ಜನರು ಹೋದ ತಕ್ಷಣ ಕೆಲಸ ಮಾಡಿ ಕೊಡುವುದಿಲ್ಲ.

18.84 ಲಕ್ಷ ರೂಪಾಯಿ ವೆಚ್ಚ: ಕುದೂರಿನ ಮಧ್ಯಭಾಗದಲ್ಲಿರುವ ಕೆನರಾ ಬ್ಯಾಂಕ್‌ ಮೇಲ್ಭಾಗದಲ್ಲಿ ವಿಶಾಲವಾದ ಬಾಡಿಗೆ ಕಟ್ಟಡದಲ್ಲಿ ನಾಡಕಚೇರಿ ಇತ್ತು. ಅದಕ್ಕೆ ಸ್ವಂತ ಕಟ್ಟಡ ಬೇಕೆಂದು ಕುದೂರು-ಮರೂರು ರಸ್ತೆ ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಅದು ಅತ್ಯಂತ ಕಳಪೆಮಟ್ಟದ ಕಟ್ಟಡವಾಗಿದ್ದು, ಕಚೇರಿಯ ದಾಖಲೆಗಳು ಭದ್ರವಾಗಿ ಇಟ್ಟುಕೊಳ್ಳಲಾಗದಂತಹ ಸ್ಥಿತಿಯಲ್ಲಿ ಕಟ್ಟಡ ನಿರ್ಮಾಣ ಆಗಿದೆ. ಕೊಠಡಿಯೊಳಗೆ ಏಕ ಕಾಲದಲ್ಲಿ ಇಬ್ಬರು ಒಳಗೆ ಹೋಗಿ ನಿಂತುಕೊಳ್ಳುವುಕ್ಕೂ ಜಾಗವಿಲದಷ್ಟು ಕಟ್ಟಡ ನಿರ್ಮಾಣ ಮಾಡಲಾಗಿದೆ.

ಇಂತಹ ಕಳಪೆ ಕಟ್ಟಡಕ್ಕೆ ಖರ್ಚಾಗಿರುವ ವೆಚ್ಚ 18.84 ಲಕ್ಷ ರೂಪಾಯಿ ನೀರಿನಲ್ಲಿ ಹೋಮ ಮಾಡಿದ ಆಗಿದೆ. ನೂತನವಾಗಿ ಕಟ್ಟಿರುವ ನಾಡಕಚೇರಿ ಗ್ರಾಮದಿಂದ ಒಂದೂವರೆ ಕಿ.ಮೀ. ದೂರದಲ್ಲಿ ನಿರ್ಮಿಸಲಾಗಿದೆ. ಕಚೇರಿ ಕೆಲಸಕ್ಕೆ ಬಂದಂತಹವರಿಗೆ ಕುಳಿತು ಕೊಳ್ಳುವುದಕ್ಕಾಗಲಿ, ನಿಲ್ಲುವುದಕ್ಕಾಗಲಿ ಕಚೇರಿಯೊಳಗೆ ಜಾಗವಿಲ್ಲ. ಹೊರಗೆ ಕುಳಿತುಕೊಳ್ಳಲು ಸಹ ಜಾಗವಿಲ್ಲ. ಮಳೆ ಬಂದರಂತೂ ರೈತರ ಹಾಗೂ ಜನರ ಪಾಡು ಚಿಂತಾಜನಕ.

ಸ್ಟಾಕ್‌ ರೂಮ್‌ ಚಿಕ್ಕದ್ದು: ಕಚೇರಿಯ ದಾಖಲಾತಿ, ರೆವಿನ್ಯೂ ಇಲಾಖೆಯ ಕಡತ ಸುರಕ್ಷಿತವಾಗಿಡಲು ಸ್ಟಾಕ್‌ ರೂಮ್‌ ಅತ್ಯಂತ ಚಿಕ್ಕದಾಗಿದ್ದು, ಅದು ಕೂಡ ಬದ್ರ ಇಲ್ಲ. ಗಾಜಿನ ಕಿಟಕಿಯನ್ನು ಹೊಡೆದು ಹಾಕಿ ಅದರ ಮೂಲಕ ದಾಖಲೆ ಹಾಳು ಮಾಡುವ ಸಾಧ್ಯತೆಗಳಿವೆ. ರಾತ್ರಿಯಾಯಿತೆಂದರೆ ಇಲ್ಲಿ ಹೇಳುವವರು, ಕೇಳುವವರೂ ಇಲ್ಲದಂತಾಗುತ್ತದೆ. ಹಾಗಾಗಿ, ಕುದೂರು ಗ್ರಾಮದೊಳಗೆ ನಾಡಕಚೇರಿಯನ್ನು ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಜನರಿಗೆ ಅನುಕೂಲವಾಗುವ ಕಡೆ ಕಚೇರಿ ನಿರ್ಮಾಣ ಮಾಡಬೇಕೆಂದು ಕುದೂರು ಹೋಬಳಿ ಜನರ ಮನವಿ.

ಅಧಿಕಾರಿಗಳನ್ನು ಪ್ರಶ್ನಿಸದ ಜನಪ್ರತಿನಿಧಿಗಳು : ಹತ್ತಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಾಗಡಿ ಶಾಸಕರು ಈ ಕಟ್ಟಡ ಮುಂದೆಯೇ ಹೋಗಿ ಬರುತ್ತಾರೆ. ಒಮ್ಮೆಯೂ ಈ ಕಟ್ಟಡ ಬಳಿ ಇಳಿದು ಕಾಮಗಾರಿಯ ಗುಣಮಟ್ಟ ಪರೀಕ್ಷಿಸಲಿಲ್ಲ. ಮುಂದಾಲೋಚನೆ ಯಿಲ್ಲದ ಕಾರ್ಯಕ್ರಮ ಗಳಿಂದ ಜನರ ತೆರಿಗೆ ಹಣ ವ್ಯಯವಾಗುತ್ತಿದೆ. ಕಳಪೆ ಕಾಮಗಾರಿ ಮಾಡಿದವರಿಗೆ ದಂಡಿಸುವ ಹಾಗೂ ಇದನ್ನು ನಿಗಾವಹಿಸದ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸುವ ಕೆಲಸವನ್ನು ಜನಪ್ರತಿನಿಧಿಗಳು ಮಾಡುತ್ತಿಲ್ಲ. ಪ್ರಶ್ನೆ ಮಾಡದೇ ಇರುವುದನ್ನು ನೋಡಿದರೆ ಭ್ರಷ್ಟರಿಗೆ ಜನಪ್ರತಿನಿಧಿಗಳೇ ಸಾಥ್‌ ನೀಡುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಾಡಕಚೇರಿ ಉದ್ಘಾಟನೆಯಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ಜನರಿಗೆ ಅನನುಕೂಲವಾಗುವುಂತಹ ಕೆಲಸ ಯಾವತ್ತೂ ಕೂಡ ಮಾಡುವುದಿಲ್ಲ. ಕಟ್ಟಡ ಕಳಪೆಯಾಗಿದ್ದರೆ ಅದಕ್ಕೆ ಕಾರಣ ಆಗಿರುವವರನ್ನು ಹೊಣೆಗಾರಿಕೆಯನ್ನಾಗಿ ಮಾಡಲಾಗುತ್ತದೆ. ಕುದೂರಿನ ನಾಡ ಕಚೇರಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಎ.ಮಂಜುನಾಥ್‌, ಶಾಸಕ ಮಾಗಡಿ

ನೂತನವಾಗಿ ನಿರ್ಮಾಣ ಆಗಿರುವ ನಾಡಕಚೇರಿಯನ್ನು ಯಾರಾದರೂ ಪರಸ್ಥಳದವರು ನೋಡಿದರೇ, ಯಾವುದೂ ಶೌಚಾಲಯ ಇರಬಹುದೆಂದು ಅಂದು ಕೊಳ್ಳುತ್ತಾರೆ. ಆ ರೀತಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಕೆ.ಆರ್‌. ಯತಿರಾಜು, ತಾಪಂ ಮಾಜಿ ಅಧ್ಯಕ್ಷ

ಊರ ಹೊರಗೆ ನಾಡಕಚೇರಿ ಮಾಡಿ ರುವುದರಿಂದ ಓಡಾಡಲು ತುಂಬಾ ತೊಂದರೆ ಆಗುತ್ತದೆ. ಇಲ್ಲಿ ಯಾವುದೇ ಮೂಲಸೌಕರ್ಯವಿಲ್ಲ. ಜನರಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು.ಗಂಗರಾಜು, ರೈತ

 

ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.