ಎಂಇಎಸ್‌ ನಿಷೇಧಿಸಲು: ವಾಟಾಳ್‌ ಆಗ್ರಹ

ಜ.30ರಂದು ರೈಲ್‌ ರೋಕೋ ಚಳವಳಿ: ವಾಟಾಳ್‌ ನಾಗರಾಜ್‌ ಮಾಹಿತಿ

Team Udayavani, Jan 28, 2021, 1:23 PM IST

Ban on MES:  vatal nagaraj demand

ರಾಮನಗರ: ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಕೋಪಕ್ಕೆ ಹೋಗಿದೆ. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಫ‌ಲ್ಯವಿದೆ. ಇದಕ್ಕೆ ಹೊಣೆ ಹೊತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಷಾ ರಾಜೀನಾಮೆ ನೀಡ ಬೇಕು ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್‌ ನಾಗರಾಜ್‌ ಆಗ್ರಹಿಸಿದರು.

ನಗರದ ಐಜೂರು ವೃತ್ತದಲ್ಲಿ ಎಂ.ಇ.ಎಸ್‌. ನಿಷೇಧಿಸುವಂತೆ ಮತ್ತು ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಪಡಿಸುವಂತೆ ನಡೆಸಿದ ಕಂಬಳಿ ಸತ್ಯಾಗ್ರಹದ ವೇಳೆ ಸುದ್ದಿಗಾರರೊಂದಿಗೆ ಮಾತ ನಾಡಿದರು. ರಾಷ್ಟ್ರಧ್ವಜ ಕಟ್ಟುತ್ತಿದ್ದ ಪವಿತ್ರವಾದ ಸ್ಥಳದಲ್ಲಿ ಅನ್ಯ ಧ್ವಜಗಳು ಹಾರಾಡಿವೆ. ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಕೂಡದು. ರೈತರು ಪ್ರಮಾಣಿಕವಾಗಿ ಚಳವಳಿ ಮಾಡುತ್ತಿದ್ದಾರೆ.ಅವರನ್ನು ದಾರಿ ತಪ್ಪಿಸುವ ಹುನ್ನಾರ ನಡೆದಿದೆ.

ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆ  ಯಾಗಬೇಕು. ಧ್ವಜಕ್ಕೆ ಅಗೌರವ ತಂದ್ದಿರುವವರಿಗೆ ಶಿಕ್ಷೆಯಾಗಬೇಕು ಎಂದರು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಇರಬೇಕಿತ್ತು. ಇಲ್ಲಿ ಕೇಂದ್ರ ಸರ್ಕಾರದ ವೈಫ‌ಲ್ಯ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದರು.

ಎಂ.ಇ.ಎಸ್‌ ನಿಷೇಧಿಸಿ: ಬೆಳಗಾವಿಯಲ್ಲಿ ಎಂ.ಇ.ಎಸ್‌ ಇರುವ ತನಕ ಘೋರ ಅನ್ಯಾಯ ನಡೆಯುತ್ತಿರುತ್ತದೆ. ಮುಖ್ಯಮಂತ್ರಿಗಳು ತಕ್ಷಣ ಎಂ.ಇ.ಎಸ್‌ ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.

ಜ.30 ರಂದು ಎಂ.ಇ.ಎಸ್‌ ನಿಷೇಧಕ್ಕೆ ಒತ್ತಾಯಿಸಿ ರಾಜ್ಯಾ ದ್ಯಂತ ರೈಲ್‌ ಬಂದ್‌ ಕಾರ್ಯ ಮಾಡಲಾಗುತ್ತದೆ. ಈ ವೇಳೆ ರಾಜ್ಯದ ಎಲ್ಲಾ ಕನ್ನಡ ಪರ ಹೋರಾಟಗಾರರು ಭಾಗವಹಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಬೆಂಗಳೂರಿನಲ್ಲಿ ನಡೆಯಲಿರುವ ಏರ್‌ ಷೋಗೆ ವಿವಿಧ ರಾಜ್ಯಗಳಿಂದ ಹಲವು ಮಂದಿ ಭಾಗವಹಿಸಲಿದ್ದಾರೆ. ಕೋವಿಡ್‌ ಇರುವ ಕಾರಣಕ್ಕೆ ಏರ್‌ ಷೋ ಕಾರ್ಯಕ್ರಮವನ್ನು ಮುಂದೂಡಬೇಕು. ಮಂಗಳವಾರ ರಾಜ್ಯಪಾಲರ ಗಣರಾಜ್ಯೋತ್ಸವದ ಭಾಷಣ ಮಾಡುವ ವೇಳೆ ಕೋವಿಡ್‌ ಕೊನೆಯ ಹಂತದಲ್ಲಿ ಇದ್ದು, ಗಂಭೀರವಾಗಿರಲು ತಿಳಿಸಿದ್ದಾರೆ.

ಇಂತಹ ಸಮಯದಲ್ಲಿ ಏರ್‌ ಷೋ ಆಯೋಜನೆ ಮಾಡುವುದು ತಪ್ಪಾಗುತ್ತದೆ ಎಂದು ಹೇಳಿದರು. ತಾಳವಾಡಿಯನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳ ಬೇಕು ಎಂದು ವಾಟಾಳ್‌ ನಾಗರಾಜ್‌ ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.