ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆ ಕಾರ್ಯಾರಂಭ


Team Udayavani, Sep 7, 2019, 12:21 PM IST

rn-tdy-1

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವಿನ ವಾಹನ ಸಂಚಾರ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ (275)ನ್ನು 10 ಮಾರ್ಗಗಳಿಗೆ ವಿಸ್ತರಿಸುವ ಯೋಜನೆ ಯನ್ನು ಹಮ್ಮಿಕೊಂಡಿದೆ. ಬೆಂಗಳೂರಿನಿಂದ ಮದ್ದೂರಿನ ನಿಡಘಟ್ಟ ಗ್ರಾಮದವರೆಗೆ ಶೇ.10ರಷ್ಟು ಕಾಮಗಾರಿಯೂ ಪೂರ್ಣಗೊಂಡಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ದಟ್ಟಣೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಬೆಂಗಳೂರು ಮತ್ತು ಮೈಸೂರು ನಡುವಿನ ರಸ್ತೆಯನ್ನು ನಾಲ್ಕು ಪಥಗಳ ಹೆದ್ದಾರಿ ರಸ್ತೆಯನ್ನಾಗಿ ಪರಿವರ್ತಿಸಲಾಗಿತ್ತು. ಮಂಗಳೂರಿನ ಬಂಟ್ವಾಳದವರೆಗೂ, ರಸ್ತೆ ಅಭಿವೃದ್ಧಿಯಾಗಿ ವಾಹನ ದಟ್ಟಣೆ ಕೂಡ ಗಣನೀಯವಾಗಿ ಏರಿಕೆಯಾಯಿತು. 2014ರಲ್ಲಿ ಕೇಂದ್ರ ಸರ್ಕಾರ ಈ ರಸ್ತೆಯನ್ನು 8 ಪಥದ ರಸ್ತೆ ನಿರ್ಮಿಸಲು ಮುಂದಾಗಿ ನಂತರದ ದಿನಗಳಲ್ಲಿ 10 ಪಥಗಳ ರಸ್ತೆಯನ್ನಾಗಿ ಪರಿವರ್ತಿಸಲು ನಿರ್ಧರಿಸಲಾಯಿತು. ಇದೀಗ ಬೆಂಗಳೂರು ನಗರದಿಂದ 18 ಕಿಮೀ ದೂರ ಇರುವ ನೈಸ್‌ ಜಂಕ್ಷನ್‌ ಬಳಿಯಿಂದ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ.

ಎಲ್ಲಿಂದ ಎಲ್ಲಿಯವರೆಗೆ ವಿಸ್ತರಣೆ: ಬೆಂಗಳೂರಿನ ಕೆಂಗೇರಿ ಹೊರ ವಲಯದ ನೈಸ್‌ ಜಂಕ್ಷನ್‌ ಬಳಿಯ ಪಂಚಮುಖೀ ದೇವಾಲಯದಿಂದ ಬೆಂಗಳೂರು ದಕ್ಷಿಣ ತಾಲೂಕು ಕುಂಬಳಗೂಡು, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದ ಮೂಲಕ ಮೈಸೂರು ಹೊರ ವಲಯದ ಕೊಲಂಬಿಯಾ ಏಷಿಯಾ ಆಸ್ಪತ್ರೆಯವರೆಗೆ 117.30 ಕಿ.ಮೀ ರಸ್ತೆಯನ್ನು 10 ಪಥಗಳ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದೆ.

ರಸ್ತೆ ವಿಸ್ತರಣೆ ಕಾರ್ಯ ಎರಡು ಹಂತಗಳು ನಿಡಘಟ್ಟ ಪ್ಯಾಕೇಜ್‌ 1 ಮತ್ತು ಮೈಸೂರು ಪ್ಯಾಕೇಜ್‌ 2 ಹೆಸರಿನಲ್ಲಿ ಕಾಮಗಾರಿಗಳು ನಡೆಯಬೇಕಾಗಿದೆ. ನಿಡಘಟ್ಟ ಪ್ಯಾಕೇಜ್‌ 1ರಲ್ಲಿ ಕಾಮಗಾರಿ ಆರಂಭವಾಗಿದ್ದು, ಸುಮಾರು ಶೇ.10ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಪ್ಯಾಕೇಜ್‌ 2ರ ಕಾಮಗಾರಿ ಇನ್ನೊಂದು ತಿಂಗಳಲ್ಲಿ ಆರಂಭವಾಗಬೇಕಾಗಿದೆ.

49 ಅಂಡರ್‌ಪಾಸ್‌ 13 ಓವರ್‌ ಪಾಸ್‌ಗಳು: ರಾಷ್ಟ್ರೀಯ ಹೆದ್ದಾರಿ 475 ವಿಸ್ತರಣೆಯ ನಂತರ ವಾಹನ ಸಂಚಾರ ಸುಗಮವಾಗಿ ಸಾಗಲಿದೆ. ರಸ್ತೆಯ ಎರಡೂ ಕಡೆ ಬ್ಯಾರಿಕೇಡ್‌ಗಳು ಇರಲಿವೆ. ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ನಗರಗಳಿಗೆ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದ್ದು, ಹಾಗೂ ಹೆದ್ದಾರಿ ರಸ್ತೆಯಲ್ಲಿ ಬರುವ ಗ್ರಾಮ, ಪಟ್ಟಣ, ನಗರಗಳ ವ್ಯಾಪ್ತಿಯಲ್ಲಿ ಸರ್ವಿಸ್‌ ರಸ್ತೆ ಇರುತ್ತದೆ. ಅಲ್ಲದೇ ಪ್ರತಿ ಗ್ರಾಮಕ್ಕೂ ಅಂಡರ್‌ಪಾಸ್‌ ಅಥವಾ ಓವರ್‌ ಪಾಸ್‌ಗಳು ಇರುವುದರಿಂದ ಅಲ್ಲಿನ ನಾಗರಿಕರಿಗೆ ತೊಂದರೆ ಆಗುವುದಿಲ್ಲ. 49 ಅಂಡರ್‌ ಪಾಸ್‌ ಗಳು ಮತ್ತು 13 ಕಡೆ ಓವರ್‌ ಪಾಸ್‌ಗಳು ನಿರ್ಮಾಣವಾಗುವುದರಿಂದ ಹೆದ್ದಾರಿ ಹಾಗೂ ಗ್ರಾಮೀಣ ವಾಹನಗಳ ಸಂಚಾರಕ್ಕೆ ತೊಂದರೆ ಆಗುವುದಿಲ್ಲ. ಹೆದ್ದಾರಿ ರಸ್ತೆಯಲ್ಲಿ 69 (ಪ್ಯಾಕೇಜ್‌ 1ರಲ್ಲಿ 27, ಪ್ಯಾಕೇಜ್‌ 2ರಲ್ಲಿ 42) ಬಸ್‌ ಶೆಲ್ಟರ್‌ಗಳು ಹಾಗೂ 56ನೇ ಕಿಮಿ ಬಳಿ ಒಂದು ಕಡೆ ವಿಶ್ರಾಂತಿ ಪ್ರದೇಶ (ರೆಸ್ಟ್‌ ಏರಿಯಾ) ನಿರ್ಮಾಣವಾಗಲಿದೆ.

ಸೇತುವೆಗಳು ಎಷ್ಟು?: ಶ್ರೀರಂಗಪಟ್ಟಣದಲ್ಲಿ ಎಲಿವೇಟೆಡ್‌ ರಸ್ತೆಯನ್ನು ನಿರ್ಮಿಸುವ ಉದ್ದೇಶವಿದ್ದು, ಇದು ಸುಮಾರು 8 ಕಿಮೀ ಉದ್ದವಿರಲಿದೆ. ಬೆಂಗಳೂರು ಮತ್ತು ನಿಡಘಟ್ಟ ನಡುವೆ 4 ಪ್ರಮುಖ (ಮೇಜರ್‌) ಸೇತುವೆಗಳು ಮತ್ತು 11 ಸಣ್ಣ ಸೇತುವೆಗಳು (ಮೈನರ್‌) ಮತ್ತು ರೈಲು ರಸ್ತೆಯ ಮೇಲೆ 2 ಕಡೆ ಮೇಲ್ಸೆತುವೆಗಳು ನಿರ್ಮಾಣವಾಗಲಿದೆ.

ಪ್ಯಾಕೇಜ್‌ 2 ಮೈಸೂರು ಮತ್ತು ನಿಡಘಟ್ಟ ನಡುವೆ 5 ಪ್ರಮುಖ ಸೇತುವೆಗಳು (ಮದ್ದೂರು ಬಳಿಯ ಕೆರೆ, ಮಂಡ್ಯ ಬಳಿ ಕೆನಾಲ್, ಲೋಕಪಾವನಿ ನದಿ, ಉತ್ತರ ಕಾವೇರಿ ನದಿ ಮತ್ತು ದಕ್ಷಿಣ ಕಾವೇರಿ ನದಿ) ಮತ್ತು 11 ಕಿರಿಯ ಸೇತುವೆಗಳನ್ನು ನಿರ್ಮಿಸಬೇಕಾಗಿದೆ.

 

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.