ಬೆಟ್ಟಹಳ್ಳಿ ಸರ್ಕಾರಿ ಶಾಲೆಯೇ ಉದ್ಯಾನ


Team Udayavani, Jan 27, 2019, 11:37 AM IST

kudur.jpg

ಕುದೂರು: ಸರ್ಕಾರಿ ಶಾಲೆಯಲ್ಲಿ ಪರಿಸರ ಸೌಂದರ್ಯಕ್ಕೆ ಕೊರತೆ ಇಲ್ಲ. ಶಾಲೆ ಆವರಣದಲ್ಲಿ ಗಿಡ- ಮರ ಒಣಗಿಲ್ಲ. ಈ ಪರಿಸರ ಯಾವ ಉದ್ಯಾನವನಗಳಿಗೂ ಕಮ್ಮಿಯಿಲ್ಲ. ಓರ್ವ ಶಿಕ್ಷಕ ಹಾಗೂ 10 ಜನ ಮಕ್ಕಳ ಪರಿಶ್ರಮದಿಂದ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಬೆಟ್ಟಹಳ್ಳಿ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ಈ ಉದ್ಯಾನವನವನ್ನು ಕಾಣಬಹುದು.

ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ: ಬೇಸಿಗೆ ಬಿರುಬಿಸಿಲಿನಲ್ಲಿಯೂ ಇಲ್ಲಿನ ಶಿಕ್ಷಕ ರಘುಪತಿ, ಮಕ್ಕಳು ಹಾಗೂ ಪೋಷಕರ ಶ್ರಮದಿಂದ ಸುಮಾರು ಒಂದು ಎಕರೆ ಪ್ರದೇಶದಲ್ಲಿರುವ ಶಾಲೆ ಆವರಣ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಗ್ರಾಮೀಣ ಸೊಗಡಿನ ಕಲಾಕೃತಿಗಳು ಹಾಗೂ ಕಾರಂಜಿಗಳ ನರ್ತನ ನಡುವೆ ಕಣ್ಮನ ಸೆಳೆಯುತಿದೆ. ಇದರಿಂದ ಶಾಲೆಯನ್ನು ನೋಡುವ ಪ್ರವಾಸಿಗರ ಸಂಖ್ಯೆಯೂ ಕೂಡ ದಿನೇ ದಿನೆ ಹೆಚ್ಚಾಗುತ್ತಿದೆ. ಶಾಲಾ ಅವಧಿ ಹಾಗೂ ರಜೆ ದಿನ ಎನ್ನದೆ ಇಲ್ಲಿನ ಶಿಕ್ಷಕರು ಹಾಗೂ ಮಕ್ಕಳು ಶಾಲಾ ಪರಿಸರವನ್ನು ಕಾಪಾಡುತ್ತಿರುವುದು ವಿಶೇಷವಾಗಿದೆ.

ರಜೆಯಲ್ಲೂ ಕಾರ್ಯ ನಿರ್ವಹಣೆ: ಬೆಟ್ಟಹಳ್ಳಿ ಕಾಲೋನಿ ಶಾಲೆಯ ಆವರಣದಲ್ಲಿ ಸುಂದರ ಪರಿಸರ ನಿರ್ಮಾಣ ಮಾಡಿರುವುದು ಒಂದೆರಡು ತಿಂಗಳುಗಳ ಪರಿಶ್ರಮವಲ್ಲ. ಶಿಕ್ಷಕ ರಘುಪತಿ ಅವರ 10 ವರ್ಷಗಳ ತಪಸ್ಸು. ಶಾಲಾ ಅವಧಿ ಮತ್ತು ರಜೆ ದಿನಗಳನ್ನು ತೋರೆದು ಬಿಡುವು ಸಿಕ್ಕ ವೇಳೆಯಲ್ಲಿ ಶಾಲೆಯತ್ತ ಕಡೆ ಧಾವಿಸಿ ಪರಿಸರವನ್ನು ಅಭಿವೃದ್ಧಿಪಡಿಸಿದ್ದಾರೆ. ಶೇ.75ಕ್ಕೂ ಹೆಚ್ಚು ಭಾಗ ಸ್ವಂತ ಹಣವನ್ನು ವ್ಯಯಿಸಿ, ಪರಿಸರ ಕಾಳಜಿಯನ್ನು ಪ್ರದರ್ಶಿಸುತ್ತಿದ್ದಾರೆ. ಶಿಕ್ಷಕರಷ್ಟೇ ಬದ್ಧತೆಯನ್ನು ಮಕ್ಕಳು ತೋರಿಸುತ್ತಾ ರಜೆ ದಿನಗಳಲ್ಲಿಯೂ ಶಿಕ್ಷಕರ ಜೊತೆಯಲ್ಲಿ ಪರಿಸರ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆಯನ್ನು ನೀಡುತ್ತಿದ್ದಾರೆ. ಮಕ್ಕಳ ಶ್ರಮಕ್ಕೆ ಪೋಷಕರು ಕೂಡಾ ಬೆಂಬಲಕ್ಕೆ ನಿಂತಿದ್ದಾರೆ.

ಪರಿಸರ ರಕ್ಷಣೆ ಕಾರ್ಯಕ್ರಮಕ್ಕೆ ಆದ್ಯತೆ: ಬೆಟ್ಟಹಳ್ಳಿ ಕಾಲೋನಿ ಸರ್ಕಾರಿ ಶಾಲೆಯಾದರೂ ಇಲ್ಲಿ ಪರಿಸರ ಸಂರಕ್ಷಣೆ ವಿಚಾರದಲ್ಲಿ ಸದಾ ಮುಂದೆ ಇದ್ದಾರೆ. ನೀರಿನ ಮಿತ ಬಳಕೆ ಹಾಗೂ ಕಾರಂಜಿಗಳಲ್ಲಿ ಹೆಚ್ಚಾದ ನೀರನ್ನು ಗಿಡಗಳಿಗೆ ಹಾಕುತ್ತಿದ್ದಾರೆ. ಇಂಗುಗುಂಡಿಗಳ ಮೂಲಕ ಮಳೆ ನೀರನ್ನು ಇಂಗಿಸುವುದು, ಕಸ ನಿರ್ವಹಣೆ, ಪ್ಲಾಸ್ಟಿಕ್‌ ನಿಯಂತ್ರಣಕ್ಕಾಗಿ ಗ್ರಾಮದ ಅಂಗಡಿಗಳಿಗೆ ಕಾಗದದ ಚೀಲಗಳನ್ನು ತಯಾರಿಸಿ ನೀಡುವುದು, ಗ್ರಾಮ ನೈರ್ಮಲ್ಯಕ್ಕಾಗಿ ಜಾಗೃತಿ ಜಾಥಾ, ಕಿರು ನಾಟಕಗಳ ಪ್ರದರ್ಶನ, ಶ್ರಮದಾನದ ಮೂಲಕ ಗ್ರಾಮಸ್ಥರಿಗೆ ಅರಿವು ಮೂಡಿಸುವುದು. – ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಮೂಲಕ ಪರಿಸರ ಕಾಳಜಿಯನ್ನು ಇಲ್ಲಿನ ಶಿಕ್ಷಕರು ಮತ್ತು ಮಕ್ಕಳು ವಹಿಸಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಪರಿಸರ ಕಾಳಜಿಯನ್ನು ತೋರುತ್ತಿದ್ದಾರೆ.

ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.