Ramanagara: ಬಿಡದಿ ಸ್ಮಾರ್ಟ್‌ಸಿಟಿ ಯೋಜನೆಗೆ ಬಾಲಗ್ರಹಣ


Team Udayavani, Sep 26, 2023, 4:37 PM IST

Ramanagara: ಬಿಡದಿ ಸ್ಮಾರ್ಟ್‌ಸಿಟಿ ಯೋಜನೆಗೆ ಬಾಲಗ್ರಹಣ

ರಾಮನಗರ: ರಾಜಧಾನಿ ಬೆಂಗಳೂರಿನ ಮೇಲಿನ ಒತ್ತಡ ತಪ್ಪಿಸುವ ಉದ್ದೇಶದಿಂದ ಬಿಡದಿ ಸಮೀಪ ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಸ್ಮಾರ್ಟ್‌ಸಿಟಿ(ಉಪನಗರ ನಿರ್ಮಾಣ) ಕೇವಲ ದಾಖಲೆಗಳ ಮೇಲೆ ಸೀಮಿತವಾಗಿದ್ದು, 17 ವರ್ಷಗಳಿಂದ ಯೋಜ ನೆಗೆ ಸ್ಪಷ್ಟ ರೂಪುರೇಷೆ ಇಲ್ಲದೆ ಶೈಶಾವಸ್ಥೆಯಲ್ಲೇ ನರಳುತ್ತಿದೆ.

2007 ರಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಬೆಂಗಳೂರು ನಗರದ ಸುತ್ತಾ 5 ನವನಗರಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಈ ಐದು ಸ್ಯಾಟಲೈಟ್‌ ಸಿಟಿಗಳಲ್ಲಿ ಬಿಡದಿ ಸಹ ಸೇರಿತ್ತು. ಅಂದಿನಿಂದ ಇಂದಿನ ವರಗೆ ಭೂಮಿ ಗುರುತಿಸಿದ್ದು ಹೊರತು ಪಡಿಸಿದರೆ ಯಾವುದೇ ಪ್ರಯೋಜನವಾಗಿಲ್ಲ.

ಏನಿದು ಸ್ಮಾರ್ಟ್‌ಸಿಟಿ ಯೋಜನೆ: ಬೆಂಗಳೂರು ನಗರ ದಿನೇ ದಿನೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ 2007ರಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಸರ್ಕಾರ ಬಿಡದಿ, ರಾಮ ನಗರ, ಮಾಗಡಿ ತಾಲೂಕಿನ ಸೋಲೂರು, ಕನಕಪುರ ತಾಲೂಕಿನ ಸಾತನೂರು ಮತ್ತು ದೊಡ್ಡಬಳ್ಳಾಪುರ ತಾಲೂಕಿನ ನಂದಗುಡಿಬಳಿ ಐದು ಸ್ಯಾಟಲೈಟ್‌ ಸಿಟಿ ನಿರ್ಮಿಸುವ ಯೋಜನೆಯನ್ನು ರೂಪಿಸಿತು.ಹೀಗೆ ರೂಪುಗೊಂಡ ಯೋಜನೆಯಲ್ಲಿ ಮೊದಲಿಗೆ ಚಾಲನೆ ನೀಡಿದ್ದು ಬಿಡದಿ ಸ್ಮಾರ್ಟ್‌ಸಿಟಿ ಯೋಜನೆ. ಭೈರಮಂಗಲ ಗ್ರಾಪಂನ 5 ಹಾಗೂ ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯ 7 ಸೇರಿ ಒಟ್ಟು 12 ಕಂದಾಯ ಗ್ರಾಮಗಳ ಜೊತೆಗೆ ಇತರೆ 11 ಸಣ್ಣ ಗ್ರಾಮಗಳನ್ನು ಒಳಗೊಂಡಂತೆ 9600 ಎಕರೆ ಭೂಮಿಯನ್ನು ಗುರುತಿಸಿ ಸ್ಮಾರ್ಟ್‌ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಯೋಜನೆಯ ನೀಲನಕ್ಷೆ ಸಿದ್ದಪಡಿಸಿ, ವಿಸ್ತೃತ ಯೋಜನಾ ವರದಿ ತಯಾರಿಸಲು ವ್ಯಾಪ್‌ಕೋಸ್‌ಲಿ ಎಂಬ ಖಾಸಗಿ ಸಂಸ್ಥೆಗೆ ಗುತ್ತಿಗೆಯನ್ನು ನೀಡಲಾಯಿತು. ಇನ್ನು 2016 ರಲ್ಲಿ ಗ್ರೇಟರ್‌ ಬೆಂಗಳೂರು ಬಿಡದಿ ಸ್ಮಾರ್ಟ್‌ಸಿಟಿ ಯೋಜನಾ ಪ್ರಾಧಿಕಾರವನ್ನು ಸಹ ರಚನೆ ಮಾಡಲಾಯಿತು. ಈ ಮಹಾತ್ವಾಕಾಂಕ್ಷಿ ಯೋಜನೆ ಸದ್ಯಕ್ಕೆ ನಿಂತಲ್ಲೇ ನಿಂತಿದೆ.

ಅಮರಾವತಿ ಮಾದರಿ ನಿರ್ಮಾಣಕ್ಕೆ ಚಿಂತನೆ: ಬಿಡದಿ ಬಳಿ 9600 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಸ್ಮಾರ್ಟ್‌ ಸಿಟಿಯನ್ನು ಸುಮಾರು 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಆಂಧ್ರ ಪ್ರದೇಶದ ಅಮರಾವತಿ ನಗರದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿತ್ತು. ಬಿಎಂಆರ್‌ಡಿಎ ಮೇಲುಸ್ತುವಾರಿಯಲ್ಲಿ ಯೋಜನೆ ರೂಪಿ ಸಲಾಗಿತ್ತು. ಇದರೊಂದಿಗೆ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಐದು ಸ್ಮಾರ್ಟ್‌ಸಿಟಿಗಳನ್ನು ಸಂಪರ್ಕಿಸುವಂತೆ ಪೆರಿಪಲ್‌ ರಿಂಗ್‌ ರಸ್ತೆಯನ್ನು ನಿರ್ಮಾಣ ಮಾಡಲು ಯೋಜನೆ ಸಿದ್ಧಪಡಿಸಲಾಗಿತ್ತು. ಎಚ್‌ಡಿಕೆ-ಯಡಿಯೂರಪ್ಪ ನೇತೃತ್ವದ ದೋಸ್ತಿ ಸರ್ಕಾರ ಪಥನದ ಬಳಿಕ ಯೋಜನೆ ಹಳ್ಳ ಹಿಡಿಯಿತು. 2013ರಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯಾದಾಗ ಈ ಯೋಜನೆ ಚರ್ಚೆಗೆ ಬಂದಿತಾ ದರೂ ಪ್ರಾಧಿಕಾರ ರಚನೆ ಮಾಡಿದ್ದನ್ನು ಹೊರತು ಪಡಿಸಿದರೆ ಇನ್ಯಾವುದೇ ಪ್ರಗತಿಯಾಗಲಿಲ್ಲ. ಸದ್ಯಕ್ಕೆ ಯೋಜನೆಗೆ ಗ್ರಹಣ ಹಿಡಿದಿದ್ದು ಯೋಜನೆಯ ಬಗ್ಗೆ ಯಾರೂ ಮಾತನಾಡುತ್ತಿಲ್ಲ.

ಯಾವುದೇ ಅಡ್ಡಿ ಇಲ್ಲ: ಬಿಡದಿ ಸ್ಮಾರ್ಟ್‌ಸಿಟಿ ಯೋಜನೆಯನ್ನು ರೂಪಿಸಿ ಯೋಜನಗೆ ಭೂಸ್ವಾಧೀನ ಪಡಿಸಿಕೊಳ್ಳಲು ಜಮೀನನ್ನು ಗುರುತಿಸಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದರೂ ಸರ್ಕಾರ ಯೋಜನೆಯನ್ನು ಪ್ರಾರಂಭಿಸಲು ಮೀನ ಮೇಷ ಏಣಿಸುತ್ತಿದೆ. ಇನ್ನು ಈ ಯೋಜನೆಯನ್ನು ವಿರೋಧಿಸಿ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ನ್ಯಾಯಾಲಯದಲ್ಲಿ ದಾವೆ ಹೂಡಿಲ್ಲ. ಯಾವುದೇ ಅಡ್ಡಿ ಆತಂಕ ಸರ್ಕಾರಕ್ಕೆ ಇಲ್ಲವಾಗಿದ್ದರೂ ಯೋಜನೆ ಮಾತ್ರ ಆರಂಭವಾಗದಿರುವುದು ಯಾಕೆ ಎಂಬುದು ಎಲ್ಲರನ್ನು ಕಾಡುತ್ತಿರುವ ಯಕ್ಷಪ್ರಶ್ನೆಯಾಗಿದೆ. ರೆಡ್‌ಜೋನ್‌ನಲ್ಲಿ ಸಾವಿರಾರು ರೈತರು: ಬಿಡದಿ ಸ್ಮಾರ್ಟ್‌ಸಿಟಿ ಯೋಜನೆಗೆ 9600 ಎಕರೆ ಭೂಮಿಯನ್ನು ಬಿಎಂಆರ್‌ಡಿಎ ಗುರುತಿಸಿದ್ದು, ಈ ಭೂಮಿಯನ್ನು ವಿಶೇಷ ಆರ್ಥಿಕವಲಯಕ್ಕೆ ಸೇರಿದ ಪ್ರದೇಶ(ರೆಡ್‌ಜೋನ್‌) ಎಂದು ಘೋಷಿಸಲಾಗಿದೆ.

12 ಕಂದಾಯ ಗ್ರಾಮಗಳಿಗೆ ಸೇರಿದ ಸಾವಿರಾರು ರೈತರ ಭೂಮಿ ಈಯೋಜನೆಗೆ ಒಳಪಟ್ಟಿದ್ದು, 17 ವರ್ಷಗಳಿಂದ ರೈತರ ಭೂಮಿಯನ್ನು ಇತ್ತ ಸ್ವಾಧೀನ ಪಡಿಸಿಕೊಳ್ಳಲೂ ಇಲ್ಲ, ಅತ್ತ ರೈತರು ಕೃಷಿ ಭೂಮಿಯ ಮೇಲೆ ಬೇರೆ ಚಟುವಟಿಕೆ ಮಾಡಲು ಅವಕಾಶವನ್ನೂ ಮಾಡಿಕೊಟ್ಟಿಲ್ಲ. ಇದರಿಂದಾಗಿ ರೆಡ್‌ಜೋನ್‌ನಲ್ಲಿರುವ ರೈತರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಯೋಜನೆಗೆ ಗುರುತಿಸಿ ರೆಡ್‌ಜೋನ್‌ ಎಂದು ಘೋಷಿಸಿರುವ ಭೂಮಿಯನ್ನು ರೈತರು ಮಾರಾಟ ಮಾಡುವುದಕ್ಕೆ, ವಾಣಿಜ್ಯ, ಕೈಗಾರಿಕೆ, ವಸತಿ ಇನ್ನಿತರ ಉದ್ದೇಶಕ್ಕೆ ಅನ್ಯಕ್ರಾಂತ ಮಾಡಿಸುವುದಕ್ಕೆ ಬಿಎಂಆರ್‌ಡಿಎ ನಿರ್ಬಂಧ ವಿಧಿಸಿ ಸ್ಥಳೀಯ ಸಂಸ್ಥೆಗಳು ಮತ್ತು ಪ್ರಾಧಿಕಾರಕ್ಕೆ ಆದೇಶ ಹೊರಡಿಸಿದೆ. ಇದರಿಂದಾಗಿ ರೈತರು ಈ ಭೂಮಿಯನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಅಡಮಾನವಿರಿಸಿ ಸಾಲ ಸೌಲಭ್ಯ ಪಡೆಯಲೂ ಸಾಧ್ಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಇನ್ನಾದರೂ ಗಮನ ಹರಿಸಿ ತ್ರಿಶಂಕು ಸ್ಥಿತಿಯಲ್ಲಿರುವ ಯೋಜನೆಗೆ ಮುಕ್ತಿ ಕಾಣಿಸಬೇಕಿದೆ.

ಟೌನ್‌ಶಿಪ್‌ಗೆ ಸೇರಿರುವ ಗ್ರಾಮಗಳು: ಭೈರಮಂಗಲ ಗ್ರಾಪಂ ಸಹರದ್ದಿನ ಕಂದಾಯ ಗ್ರಾಮಗಳಾದ ಭೈರಮಂಗಲ, ಕೋಡಿಹಳ್ಳಿ, ಬನ್ನಿಗಿರಿ, ಅಂಚೀಪುರ, ಮಂಡಲಹಳ್ಳಿ. ಕಂಚುಗಾರನಹಳ್ಳಿ ಗ್ರಾಪಂನ ಕಂಚುಗಾರನಹಳ್ಳಿ, ಕಾವಲ್‌, ಹೊಸೂರು, ಅರಳಾಳುಸಂದ್ರ, ಕೆಂಪಯ್ಯನ ಪಾಳ್ಯ, ಕೆ.ಜಿ.ಹೊಸಹಳ್ಳಿ ಹಾಗೂ ತಾಯಪ್ಪನದೊಡ್ಡಿ ಜೊತೆಗೆ 11 ಸಣ್ಣ ಗ್ರಾಮ ಗಳು ಒಳಪಡಲಿವೆ.

ಬಿಡದಿ ಮತ್ತು ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ನಡುವೆ ಕೇವಲ 1 ಕಿ.ಮೀ ಅಂತರ ಹಾಗೂ ಬೆಂಗಳೂರು ದಕ್ಷಿಣ ತಾಲೂಕಿಗೆ ಹೊಂದಿಕೊಂಡಂತೆ 9600 ಎಕರೆ ಭೂಪ್ರದೇಶವನ್ನು ಉಪನಗರ ನಿರ್ಮಾಣಕ್ಕೆ ಗುರುತಿಸಲಾಗಿದೆ.

ಇಷ್ಟು ವರ್ಷಗಳಿಂದ ಈ ಯೋಜನೆ ಯಾಕೆ ಅನುಷ್ಠಾನವಾಗಿಲ್ಲ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಮುಂದಿನ ಕೆಡಿಪಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಸಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು. ● ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರು.

ರಾಮನಗರ ಜಿಲ್ಲೆ. ಚುನಾವಣೆ ಸಮಯದಲ್ಲಿ ಈ ಭಾಗದ ಜನತೆಗೆ ನಾನು ಮಾತು ಕೊಟ್ಟಿದ್ದೇನೆ. ಟೌನ್‌ಶಿಫ್‌ ವ್ಯಾಪ್ತಿಯ ಭೂಪ್ರದೇಶವನ್ನು ಸರ್ವೆ ಮಾಡಿ ವರದಿ ನೀಡುವಂತೆ ಬಿಎಂಆರ್‌ಡಿಎ ಅಧಿಕಾರಿಗಳಿಗೆ ಸೂಚಿಸಿದ್ದು, ಕೆಲ ದಿನಗಳಲ್ಲಿ ಈ ಸಂಬಂಧ ಸ್ಪಷ್ಟ ಚಿತ್ರಣ ದೊರೆಯಲಿದೆ. ● ಎಚ್‌.ಸಿ.ಬಾಲಕೃಷ್ಣ, ಶಾಸಕ.

 -ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.