ಬಿಡದಿ ಟೌನ್‌ಶಿಪ್‌: ಸಿಎಂ ರೈತರ ಪರ


Team Udayavani, May 14, 2020, 5:58 AM IST

raitaru

ಮಾಗಡಿ: ಬಿಡದಿ ಸಮೀಪದ ಕಂಚಗಾರನ ಹಳ್ಳಿ ಕೆಐಎಡಿಬಿ ಭೂಸ್ವಾಧೀನ ವಿಚಾರವಾಗಿ ರೈತರ ಆತಂಕವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೂರ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪುರಸಭೆಯಲ್ಲಿ ಸಂಸದ ಡಿ.ಕೆ. ಸುರೇಶ್‌ ಕೊಠಡಿಯಲ್ಲಿ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, 2006 ರಿಂದ 2020ರವರೆಗೆ ರಾಜಕೀಯ ಕೆಸರೆರಚಾಟ ದಿಂದಾಗಿ ರೈತರು  ಆತಂಕದಲ್ಲಿದ್ದರು. ಈಗ ಬಹುಶಃ ಸಿಎಂ ಬಿಎಸ್‌ವೈ ಕಾಯಕಲ್ಪ ಕೊಡುತ್ತಾರೆ ಎಂಬ ಆತ್ಮವಿಶ್ವಾಸವಿದೆ. ಸಿಎಂಗೆ ಮತ್ತು ಉಸ್ತವಾರಿ ಸಚಿವ ಡಿಸಿಎಂಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಂಸದ ಡಿ.ಕೆ.ಸುರೇಶ್‌ ಸ್ಪಷ್ಟಿಕರಣ ಕೊಡಲಿ: ರೈತರು ನನ್ನ ತಾಯಿಯಿದ್ದಂತೆ. ಕಾಸಿಗೆ ಕೈಯೊಡ್ಡಿ ರೈತರಿಗೆ ಮೋಸ ಮಾಡಿದರೆ ಹೆತ್ತ ತಾಯಿ ಮೋಸ ಮಾಡಿದಂತೆ. ಚರ್ಚೆ ವಿಚಾರವೇ ಬೇರೆ, ಶಾಸಕರು ಕೊಟ್ಟ ಹೇಳಿಕೆಯೇ ಬೇರೆಯಾಗಿದೆ.  ಒಂದೊ ಕ್ಕೊಂದು ತಾಳೆಯೇ ಇಲ್ಲ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡಿದ್ದಾರೆ.

ಡಿ.ಕೆ. ಶಿವಕುಮರ್‌, ಮಾಜಿ ಸಿಎಂ, ಎಚ್‌ಡಿಕೆ, ಸಂಸದ ಡಿ.ಕೆ.ಸುರೇಶ್‌ ಅವರಿಂದ ಸರ್ಕಾರಕ್ಕೆ ಪತ್ರ ಕೊಡಿಸಿದ್ದೇನೆ ಎಂದು ಶಾಸಕರು ಹೇಳಿಕೊಂಡಿದ್ದಾರೆ. ಹಾಗಾದರೆ ನೋಟಿಫಿಕೇಷನ್‌ ಏಕೆ ಆಗಿಲ್ಲ. ಇದಕ್ಕೆಲ್ಲ ಎಂಎಲ್‌ಎ ಎ.ಮಂಜುನಾಥ್‌, ಎಂಪಿ ಡಿ.ಕೆ.ಸುರೇಶ್‌ ಅವರೇ ಸ್ಪಷ್ಟೀಕರಣ ಕೊಡಬೇಕು. ಅವರ ಪತ್ರಕ್ಕೆ ಕಿಮ್ಮತ್ತಿಲ್ಲವೇ ಎಂದು ಪ್ರಶ್ನಿಸಿದರು.

ಬಹಿರಂಗ ಚರ್ಚೆಗೆ ಸಿದ್ದ: ರೈತರಿಗೆ ಅನ್ಯಾಯ ಮಾಡಿ, ಉದ್ಯಮಿಗಳಿಗೆ ಅನುಕೂಲ ಮಾಡಿ ಕೊಡುತ್ತಾರೆ ಎಂದರೆ ಹೇಗೆ? ಬಹಿರಂಗ ಚರ್ಚೆಗೆ ಕರೆದಿದ್ದಾರೆ. ಜೀವನದಲ್ಲಿ ಪಲಾ ಯನ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದರೆ  ಶರಣಾಗುತ್ತೇನೆ. ತಪ್ಪು ಮಾಡಿ ದವರನ್ನು ನೇರವಾಗಿ ದಂಡಿಸುತ್ತೇನೆ. ಬಾಲಕೃಷ್ಣನ ಮಾತು ಬೋಗಸ್‌ ಎಂದಾದರೆ ಕೆಐಎಡಿಬಿ ವಿಚಾರವಾಗಿ ಸಿಎಂ ಏಕೆ ನನ್ನನ್ನು ಕರೆಯಿಸುತ್ತಿದ್ದರು.

ರೈತರಿಗೆ ನ್ಯಾಯ ದೊರಕಿಸುವುದು ನನ್ನ ಕೆಲಸ.  ಪ್ರಾಣ ಕೊಟ್ಟಾದರೂ ರೈತರನ್ನು ಉಳಿಸುತ್ತೇನೆ. ಅಗತ್ಯ ಬಿದ್ದರೆ ಶಾಸಕ ಎ.ಮಂಜು ಅವರಿಗೆ ರೈತರ ಪರ ಹೋರಾಟಕ್ಕೆ ಕೈಜೋಡಿಸುತ್ತೇನೆ. ತಪ್ಪಾಗಿದ್ದರೆ ಸರಿಪಡಿಸೋಣ. ಆದರೆ ಶಾಸಕರು ಏಕವಚನದಲ್ಲಿ ಮಾತನಾಡಿ, ನನ್ನನ್ನು  ಕೆಣಕಿದ್ದಾರೆ. ಹಂತ ಹಂತವಾಗಿ ಉತ್ತರಿಸುತ್ತೇನೆ. ತಪ್ಪು ತೋರಿಸಿದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು.

ಬಾಣೆಲೆಯಿಂದ ಬೆಂಕಿಗೆ ಬಿದ್ದಂತಾಗಿದೆ: ಸಂಸದ ಡಿ.ಕೆ.ಸುರೇಶ್‌ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಹಿಂದೆಯಲ್ಲ ನನ್ನ ಮೇಲೆ ಗೌರವಿದೆ ಎಂದು ತಿಳಿದಿದ್ದೆ. ಹೊಂದಾಣಿಕೆ ರಾಜಕೀಯ ನನಗೆ ಬರಲ್ಲ. ನೇರವಾದಿ, ಜೆಡಿಎಸ್‌  ಶಾಸಕರೊಂದಿಗೆ ಸಂಸದರು ಕುಳಿತು ಕಾರ್ಯಕ್ರಮ ಮಾಡುತ್ತಾರೆ ಎಂದಾದರೆ ಕಾಂಗ್ರೆಸ್‌ ನಂಬಿರುವ ಕಾರ್ಯಕರ್ತರ ಪಾಡೇನು? ನನ್ನ ಕಥೆ ಈಗ ಬಾಣೆಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದು ನೋವು ವ್ಯಕ್ತಪಡಿಸಿದರು.

ಬಮೂಲ್‌  ಅಧ್ಯಕ್ಷ ನರಸಿಂಹಮೂರ್ತಿ, ಕೆಪಿಸಿಸಿ ಟಾಸ್ಕ್ ಫೋರ್ಸ್‌ ಕಮಿಟಿ ಅಧ್ಯಕ್ಷ ವಿಜಯಕುಮಾರ್‌, ಪುರಸಭೆ ಸದಸ್ಯ ಗುರುಸ್ವಾಮಿ, ಪುರುಷೋತ್ತಮ್‌, ನಾಗರಾಜು, ಎಂ.ಆರ್‌.ಮಂಜುನಾಥ್‌, ತೇಜಸ್‌ ಕುಮಾರ್‌, ಬಿ.ಎನ್‌. ಚಂದ್ರ ಶೇಖರ್‌, ತೇಜಾ,  ಕಿರಣ್‌ಕುಮಾರ್‌, ಸುರೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.