ಬೈಕ್ ತಡವಾಗಿ ಹಿಂದಿರುಗಿಸಿದ್ದಕ್ಕಾಗಿ ಸ್ನೇಹಿತನಿಗೆ ಚೂರಿ ಇರಿತ: ಯುವಕ ಸಾವು
Team Udayavani, Sep 22, 2022, 8:09 PM IST
ಕನಕಗಿರಿ: ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಎರಡು ದಿನಗಳ ಹಿಂದೆ ಚಾಕು ಇರಿತಕ್ಕೆ ಒಳಪಟ್ಟಿದ್ದ ರವಿ (40) ಸಾವನ್ನಪ್ಪಿದ ಘಟನೆ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ.
ಇದನ್ನೂ ಓದಿ: ಮಣಿಪಾಲದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ವಶಕ್ಕೆ
ರವಿ ಹಾಗೂ ಮುತ್ತುರಾಜ ಎಂಬ ಇಬ್ಬರು ಯುವಕರು ಆತ್ಮೀಯ ಗೆಳೆಯರಾಗಿದ್ದರು. ಎರಡು ದಿನದ ಹಿಂದೆ ರವಿಯ ಬೈಕ್ನ್ನು ಗೆಳೆಯ ಮುತ್ತುರಾಜ ತೆಗೆದುಕೊಂಡು ಹೋಗಿ ತಡವಾಗಿ ಬಂದಿದ್ದ. ರವಿಯು ಬೈಕನ್ನು ತಡವಾಗಿ ಏಕೆ ತಂದಿರುವೆ’ ಎಂದು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಯುವಕ ಮುತ್ತುರಾಜನಿಗೆ ಚಾಕುವಿನಿಂದ ತನ್ನ ಗೆಳೆಯನಿಗೆ ಇರಿದಿದ್ದ.
ಈ ಸುದ್ದಿ ತಿಳಿದ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಮತ್ತೆ ಹೆಚ್ಚುವರಿ ಚಿಕಿತ್ಸೆ ಕೊಡಿಸಲು ವೈದ್ಯರು ಧಾರವಾಡ ಎಸ್ ಡಿ ಎಂ ಸಿ ಯಲ್ಲಿ ಚಿಕಿತ್ಸೆ ನೀಡುವಂತೆ ಹೇಳಿದ್ದರು. ಈ ವೇಳೆ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಆರೋಪಿ ಮುತ್ತುರಾಜನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ