ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್‌ ಪೊಲೀಸರ ವಶಕ್ಕೆ


Team Udayavani, Jan 30, 2023, 3:48 PM IST

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್‌ ಪೊಲೀಸರ ವಶಕ್ಕೆ

ನೆಲಮಂಗಲ: ತಾಲೂಕಿನ ಡಾಬಸ್‌ಪೇಟೆ ಪಟ್ಟಣದಲ್ಲಿ ವಾಹನ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ದಾಬಸ್‌ಪೇಟೆ ಪೊಲೀಸರು ಕೊನೆಗೂ ಕಳ್ಳರನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕರು ವಾಹನಕಳ್ಳತನದಿಂದ ನಿಟ್ಟುಸಿರು ಬಿಟ್ಟಿದ್ದಾರೆ.

ತುಮಕೂರಿನ ಶಾಂತಿನಗರ ವಾಸಿ ಮುಬಾರಕ್‌ (27), ಎನ್‌.ಆರ್‌. ಕಾಲೋನಿಯ ನಂದೀಶ್‌(19), ಅರವಿಂದ ನಗರದ ಅಭಿಷೇಕ್‌(26) ಆರೋಪಿಗಳು ತಮ್ಮ ಮೋಜು-ಮಸ್ತಿಗಾಗಿ ಸುಲಭವಾಗಿ ಹಣ ಗಳಿಸಲು ಬೈಕ್‌ ಕಳ್ಳತನವನ್ನೇ ಉದ್ಯೋಗವಾಗಿಸಿಕೊಂಡಿರುವ ವಿಚಾರ ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಇಲಾಖೆಯ ಹಿರಿಯ ಅಧಿಕಾರಿಗಳ ಮೇರೆಗೆ ವಾಹನಗಳ ಕಳ್ಳತನ ಪ್ರಕರಣ ಭೇದಿಸಲು ದಾಬಸ್‌ ಪೇಟೆ ಪೊಲೀಸರು ಇನ್ಸ್‌ಪೆಕ್ಟರ್‌ ಎಸ್‌.ರವಿ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿಕೊಂಡು ಆಯ್ದ ಸಿಸಿ ಕ್ಯಾಮೆರಾ, ಮೊಬೈಲ್‌ ಸಿಮ್‌ ಟ್ರ್ಯಾಕಿಂಗ್‌ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡುವಿವಿಧ ಆಯಾಮದಲ್ಲಿ ತೀವ್ರ ತನಿಖೆ ನಡೆಸಿದ್ದು, ಖಚಿತ ಮಾಹಿತಿ ಮೇರೆಗೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ದಾಬಸ್‌ ಪೇಟೆ, ನರಸೀಪುರ, ತುಮಕೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ವಾಹನ ಕಳ್ಳತನ ಮಾಡಿರುವುದನ್ನು ಬಂಧಿತರು ಬಾಯಿಬಿಟ್ಟಿದ್ದಾರೆ. ಬಂಧಿತರಿಂದಒಟ್ಟು 9.50 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 12 ಬೈಕ್‌ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೋಜು-ಮಸ್ತಿಗಾಗಿ ಕಳ್ಳತನ: ಆರೋಪಿಗಳು ಬೆಂಗಳೂರು ಹೊರವಲಯಗಳಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡಿಕೊಂಡು ದಾಖಲಾತಿ ತಂದು ಕೊಡುವುದಾಗಿ ನಂಬಿಸಿ ಹಲವರಿಗೆ ಮಾರಾಟ ಮಾಡಿದ್ದು ಹಾಗೂ ಇನ್ನು ಹಲವು ಬೈಕ್‌ಗಳ ನಂಬರ್‌ ಪ್ಲೇಟ್‌ ತೆಗೆದು ಗ್ಯಾರೇಜುಗಳಲ್ಲಿ ಬಿಟ್ಟಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಕಾರ್ಯಕ್ಕೆ ಅಭಿನಂದನೆ: ಜಿಲ್ಲಾ ಪೊಲೀಸ್‌ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ,ಅಪರ ಪೊಲೀಸ್‌ ಅಧೀಕ್ಷಕ ಪುರುಷೊತ್ತಮ್‌, ಡಿವೈಎಸ್‌ಪಿ ಗೌತಮ್‌ ಅವರ ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆಸಿದ ದಾಬಸ್‌ಪೇಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಎಸ್‌. ರವಿ. ಸಬ್‌ಇನ್ಸ್‌ಪೆಕ್ಟರ್‌ ವಿಜಯಕುಮಾರಿ, ಸಿಬ್ಬಂದಿ ಗಂಗಾಧರ್‌, ಇಮ್ರಾನ್‌ ಖಾನ್‌, ಲಕ್ಷ್ಮಣ್‌, ಶಿವಕುಮಾರ ನಾಯ್ಕ, ಗೌತಮ್‌ ಕಾಳಿ, ಸಂತೋಷ್‌ ಕುಮಾರ್‌ . ಪೀರ್‌ ಸಾಬ್‌, ಉಮೇಶ್‌, ಆನಂದ್‌ ಅವರನ್ನೊಳಗೊಂಡ ತಂಡಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ: ಅಮಿತ್ ಶಾ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

1-wqe-ewqe

ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

1-sfdsfdsfsdf

ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

ತಾಲೂಕು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ

tdy-15

ರೈತರಿಗೆ ಬೆಳಗ್ಗೆ ನಾಯಿ, ರಾತ್ರಿ ಚಿರತೆ ಕಾಟ

TDY-13

ದೇವರ ಮೊರೆ ಹೋದ ದಳಪತಿ-ಸೈನಿಕ

tdy-12

ಇತಿಹಾಸ ಅವಿತಿಟ್ಟು ಕೊಂಡಿರುವ ಹ್ಯಾಡಾಳ

TDY-12

ಡಬಲ್‌ ಎಂಜಿನ್‌ ಸರ್ಕಾರದಿಂದ ದೇಶ ಅಭಿವೃದ್ಧಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ: ಅಮಿತ್ ಶಾ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

1-wqe-ewqe

ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

1-sfdsfdsfsdf

ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.