ಬೈಕ್‌ ಕಳವು: ಮತ್ತೂಬ್ಬ ಆರೋಪಿ ಬಂಧನ, 19 ವಾಹನ ವಶ


Team Udayavani, Aug 31, 2020, 12:31 PM IST

ಬೈಕ್‌ ಕಳವು: ಮತ್ತೂಬ್ಬ ಆರೋಪಿ ಬಂಧನ, 19 ವಾಹನ ವಶ

ರಾಮನಗರ: ಜಿಲ್ಲೆಯ ಚನ್ನಪಟ್ಟಣದಲ್ಲಿ ಬೈಕ್‌ ಕಳ್ಳತನದ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್‌ ಅಧೀಕ್ಷರು ರಚಿಸಿದ್ದ ವಿಶೇಷ ತಂಡ ಮತ್ತೂಬ್ಬ ಆರೋಪಿಯನ್ನು ಪತ್ತೆ ಹಚ್ಚಿದೆ.

ಆಗಸ್ಟ್‌ 20ರಂದು ಚನ್ನಪಟ್ಟಣ ತಾಲೂಕು ವಿರೂಪಾಕ್ಷಿಪುರ ಹೋಬಳಿ ಮೆಣಸಿಗನಹಳ್ಳಿಯ ಶಿವಮಲ್ಲಯ್ಯ ಎಂಬುವರು ಮಾವಿನ ತೋಟದಲ್ಲಿ ನಿಲ್ಲಿಸಿ ಕೂಲಿ ಕೆಲಸಕ್ಕೆ ತೆರಳಿ ದ್ದಾಗ ತಮ್ಮ ಬೈಕ್‌ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು. ಚನ್ನಪಟ್ಟಣ ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್‌ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿ ದ್ದುದ್ದನ್ನು ಗಮನಿಸಿದ ಎಸ್ಪಿ, ಚನ್ನಪಟ್ಟಣ ಗ್ರಾಮಾಂತರ ವೃತ್ತ ಸಿಪಿಐ ವಸಂತ್‌ ನೇತೃತ್ವದ ವಿಶೇಷ ತಂಡ ರಚಿಸಿದ್ದರು. ಕಾರ್ಯಪ್ರವೃತ್ತರಾದ ಈ ತಂಡ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕಿನ ಬ್ಯಾಡರಹಳ್ಳಿಯ ನಿವಾಸಿ ಭವನ ಬಿನ್‌ ಕೆಂಪೇಗೌಡ ಎಂಬ 19 ವರ್ಷದ ಯುವಕನನ್ನು ಬಂಧಿಸಿದ್ದು, ಈತನಿಂದ 8.45 ಲಕ್ಷ ರೂ. ಮೌಲ್ಯದ 19 ದ್ವಿಚಕ್ರವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ದ್ವಿಚಕ್ರ ವಾಹನಗಳ ಪೈಕಿ ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯ 5 ಪ್ರಕರಣ, ಕನಕಪುರ ತಾಲೂಕು ಸಾತ ನೂರು ಠಾಣೆಯ 2 ಪ್ರಕರಣ, ಕನಕಪುರ ಗ್ರಾಮಾಂತರ ಠಾಣೆಯ 1 ಪ್ರಕರಣ, ಮಂಡ್ಯ ಜಿಲ್ಲೆ ಮಳವಳ್ಳಿ ಗ್ರಾಮಾಂತರ ಠಾಣೆಯ 3, ಮಂಡ್ಯ ಜಿಲ್ಲೆ ಕಿರುಗಾವಲು ಠಾಣೆಯ 2, ಕೆ.ಎಂ.ದೊಡ್ಡಿ ಠಾಣೆಯ 1, ಬನ್ನೂರು ಠಾಣೆ ವ್ಯಾಪ್ತಿಯ 1 ಮತ್ತುಮದ್ದೂರು ಠಾಣೆಯ 4 ಪ್ರಕರಣಗಳ ಸಂಬಂಧ ಒಟ್ಟು 19 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿ ಲಕ್ಷಾಂತರ ರೂ. ಮೌಲ್ಯದ ಕಳವು ಮಾಲನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದ ಸಿಪಿಐ ವಸಂತ್‌, ಅಕ್ಕೂರು ಪಿಎಸ್‌ಐ ಸಿ.ಆರ್‌.ಭಾಸ್ಕರ್‌, ಎಎಸ್‌ಐಗಳಾದ ಪರಮಶಿವಯ್ಯ, ಎಂ.ರಾಜು, ಸಿಬ್ಬಂದಿಗಳಾದ ನಾಗರಾಜು, ಶಿವರಾಜಕುಮಾರ ಕುಂಭವ್ವರ, ಶಿವಕುಮಾರ, ಸುನೀಲ್‌, ಎಚ್‌.ಪ್ರಕಾಶ್‌, ಹೊಂಬಾಳ ಶೇಖಣ್ಣನವರ್‌ ಅವರುಗಳನ್ನು ಎಸ್ಪಿಯವರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.