ಪಕ್ಷದ ಕಾರ್ಯಕರ್ತರನ್ನು ಬೆದರಿಸಿದರೆ ಶಿಸ್ತು ಕ್ರಮ


Team Udayavani, Dec 7, 2020, 7:49 PM IST

ಪಕ್ಷದ ಕಾರ್ಯಕರ್ತರನ್ನು ಬೆದರಿಸಿದರೆ ಶಿಸ್ತು ಕ್ರಮ

ಕನಕಪುರ: ನಮ್ಮ ಪಕ್ಷದ ಮುಖಂಡರು ಮತ್ತುಕಾರ್ಯಕರ್ತರಿಗೆ ಸುಖಾಸುಮ್ಮನೆ ಬೆದರಿಕೆ ಯೋಡ್ಡುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಕೆಆರ್‌ಐಡಿಎಲ್‌ ಮಂಡಳಿ ಅಧ್ಯಕ್ಷ ರುದ್ರೇಶ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಬೈಪಾಸ್‌ ರಸ್ತೆಯ ತೋಟದಲ್ಲಿ ಪಕ್ಷದ ವತಿಯಿಂದ ಇತ್ತೀಚಿಗೆ ಕೆ.ಆರ್‌.ಐ.ಡಿ.ಎಲ್‌ ಮಂಡಳಿಯ ಅಧ್ಯಕ್ಷರಾದ ರುದ್ರೇಶ್‌ ಅವರಿಗೆ ಅಭಿನಂದನಾ ಸಮಾರಂಭ ಮತ್ತು ಗ್ರಾಪಂ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬಿಜೆಪಿ ಕಾರ್ಯಕರ್ತರನ್ನು ಬೆದರಿಸಿ ರೌಡಿ ಶೀಟರ್‌ ಪಟ್ಟಿಗೆ ಸೇರಿಸಿ ರೌಡಿ ಪರೇಡ್‌ ಮಾಡಿಸಿದ್ದಾರೆ. ನಮ್ಮ ಕಾರ್ಯಕರ್ತರು ಯಾರ ವಿಚಾರಕ್ಕೂ ಹೊಗುವುದಿಲ್ಲ ಆದರೆ ನಮ್ಮ ಕಾರ್ಯಕರ್ತರ ವಿಚಾರಕ್ಕೆ ಬಂದರೆ ನಾವು ಸುಮ್ಮನಿರುವವರಲ್ಲ. ಪ್ರಭಾವಿಗಳ ಮಾತಿಗೆ ಕಟ್ಟುಬಿದ್ದು ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊಂದರೆ ಕೊಟ್ಟರೆ ಅಂತಹ ಅಧಿಕಾರಿಗಳ ವಿರುದ್ಧ ಸರ್ಕಾರ ಮುಖೇನ ಸೂಕ್ತ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

ಯಾವುದೇ ಹುದ್ದೆ ಮತ್ತು ಸ್ಥಾನ ಮಾನಗಳು ಸುಮ್ಮನೆ ಬರುವುದಿಲ್ಲ ಯಡಿಯುರಪ್ಪನವರು ಮುಖ್ಯಮಂತ್ರಿಯಾಗಲು 40 ವರ್ಷಗಳ ಸತತ ಹೊರಾಟ ಮತ್ತು ಸಂಘಟನೆ ಮಾಡಿದ್ದಾರೆ. ಅದೇ ರೀತಿ ಪಕ್ಷಕ್ಕೆ ದುಡಿದ ಸೇವೆ ಮತ್ತು ಪಕ್ಷ ಸಂಘಟನೆ ಪ್ರತಿಫ‌ಲವಾಗಿ ನನಗೆ ಕೆಆರ್‌ಐಡಿಎಲ್‌ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಪ್ರತಿಯೊಬ್ಬರು ಪ್ರಮಾಣಿಕವಾಗಿ ಮತದಾರರ ಜತೆಗಿದ್ದು ಪಕ್ಷ ಸಂಘಟನೆ ಮಾಡಿದರೆ ಮತದಾರರು ನಮ್ಮ ಪರ ನಿಲ್ಲುತ್ತಾರೆ ಜತೆಗೆ ಸೂಕ್ತ ಸ್ಥಾನಮಾನಗಳು ತಾನಾಗಿಯೇ ಒಲಿದು ಬರುತ್ತವೆ ಎಂದರು.

ಈ ದೇಶಕ್ಕೆ ಮರಾಠ ಕೊಡುಗೆ ಅಪಾರವಾಗಿದೆ ಅದನ್ನು ಮರೆಯಬಾರದು ಪೋಡಿ ಪಹಣಿ ಎಂಬ ಪದಗಳೂ ಮರಾಠರ ಭಾಷೆಯೇ ಆಗಿದೆ ಆನೇಕ ವರ್ಷಗಳಿಂದ ಮರಾಠರು ನಮ್ಮ ರಾಜ್ಯದಲ್ಲಿದ್ದಾರೆ ನಮ್ಮ ಸರ್ಕಾರ ಮರಾಠ ಭಾಷೆಗೆ ಕೊಟ್ಟಿಲ್ಲ ಮರಾಠ ಸುಮುದಾಯಕ್ಕೆ ಕೊಟ್ಟಿದ್ದೆ ತಪ್ಪು ಕಲ್ಪನೆ ಬೇಡ ಎಂದರು.

ಹೆಚ್ಚು ಸ್ಥಾನ ಗಳಿಸಲು ಪಣ: ಜಿಲ್ಲೆಯಲ್ಲಿ ಜೆಡಿಎಸ್‌ ನಿರ್ನಾಮವಾಗುತ್ತಿದೆ. ಜೆಡಿಎಸ್‌ ಮುಖಂಡರು ವಿಶ್ವಾಸ ಕಳೆದುಕೊಂಡು ಸ್ವಾರ್ಥಸಾಧನೆಗೆ ಇಳಿದಿದ್ದಾರೆ. ಇದರಿಂದ ಜೆಡಿಎಸ್‌ ನಾಯಕರು ನಂಬಿಕೆ ದ್ರೋಹಿಗಳೆಂದು ಜನರೇ ತಿರ್ಮಾನಿಸಿದ್ದಾರೆ. ಇವರ ನಡೆಯಿಂದಬೆಸತ್ತಿರುವ ಮತದಾರರನ್ನುಕಾರ್ಯಕರ್ತರನ್ನು ನಮ್ಮ ಪಕ್ಷಕ್ಕೆ ಕರೆತಂದು ಪಕ್ಷದಿಂದ ಸ್ಪರ್ಧೆ ಮಾಡಲು ಅವಕಾಶ ಕೊಡಿ ಸದೃಢವಾಗಿ ಪಕ್ಷ ಸಂಘಟನೆ ಮಾಡೋಣ ಈ ಬಾರಿ ಗ್ರಾಪಂ ಚುನಾವಣೆಯಲ್ಲಿ 2 ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳನ್ನು ಗೆಲ್ಲಿಸಲು ಪಣ ತೊಡಬೇಕು ಎಂದರು. ಬಿಜೆಪಿ ನಗರ ಮಾಜಿ ಅಧ್ಯಕ್ಷ ನಾಗಾನಂದ್‌ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ ಬೆಳೆಸುವುದರಲ್ಲಿ ರುದ್ರೇಶ್‌ ಅವರ ಪಾತ್ರ ಮುಖ್ಯವಾಗಿದ್ದು, ಇದನ್ನು ಪಕ್ಷ ಗುರತಿಸಿ ಹೆಚ್ಚಿನ ಅಧಿಕಾರ ನೀಡಿರುವುದ ಸ್ಥಳೀಯ ಕಾರ್ಯಕರ್ತರಲ್ಲಿ ಬಲತುಂಬಿದಂತಾಗಿದೆ ಎಂದರು.

ಬಿಜೆಪಿಗೆ ಸೇರ್ಪಡೆಗೊಂಡ ಅನೇಕ ಕಾರ್ಯಕರ್ತರನ್ನು ಈ ವೇಳೆ ರುದ್ರೇಶ್‌ ಬರಮಾಡಿಕೊಂಡರು. ರಾಮನಗರ ತಾಲೂಕು ಮಾಜಿ ಅಧ್ಯಕ್ಷ ಪ್ರವೀಣ್‌, ಪ್ರಾಧಿಕಾರದ ಅಧ್ಯಕ್ಷ ಮುರುಳಿ, ಆನೇಕಲ್‌ ಜಯಣ್ಣ, ಮಾಗಡಿ ರಂಗಧಾಮಯ್ಯ, ಮಾಜಿ ನಾಗರಾಜು, ಕನಕಪುರ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್‌, ಮಲೇವೇಗೌಡ, ಮಾಲತಿ ಆನಂದ್‌ ಪೈ, ಮೋಹನ್‌, ಗೋಪಿ, ರಾಜೇಶ್‌,ಪವಿತ್ರ, ತಹಸೀನಾಖಾನ್‌, ಮಂಜು, ಶ್ರೀನಿವಾಸ್‌ ಸೇರಿದಂತೆ ಕಾರ್ಯಕರ್ತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.