ಕಾಂಗ್ರೆಸ್‌ ಮೇಲೆ ಬಿಜೆಪಿ ಸೇಡಿನ ರಾಜಕಾರಣ


Team Udayavani, Apr 26, 2023, 2:52 PM IST

ಕಾಂಗ್ರೆಸ್‌ ಮೇಲೆ ಬಿಜೆಪಿ ಸೇಡಿನ ರಾಜಕಾರಣ

ಮಾಗಡಿ: ಪ್ರಧಾನಿ ಮೋದಿ ಕಾಂಗ್ರೆಸ್‌ನ ವರಿಷ್ಠ ರಾಹುಲ್‌ ಗಾಂಧಿ ಅವರ ಮನೆ ಖಾಲಿ ಮಾಡಿಸುವ ಯತ್ನ ನಡೆಸಿದರು. ಇಡಿ, ಐಟಿ, ಸಿಬಿಐ ತನಿಖೆ ಎಂದು ಡಿಕೆಶಿ ಅವರನ್ನು ಕಟ್ಟಿ ಹಾಕುವ ಹುನ್ನಾರ ನಡೆಸುತ್ತಿರುವುದು ಅಕ್ಷರಶಃ ಇದು ಸೇಡಿನ ರಾಜಕಾರಣ ಎಂದು ಮಾಜಿ ಸಚಿವ ಎಚ್‌.ಎಂ. ರೇವಣ್ಣ ಹೇಳಿದರು.

ಪಟ್ಟಣದ ಎಚ್‌ಎಂಆರ್‌ ತೋಟದ ಮನೆಯಲ್ಲಿ ನಡೆದ ಅಹಿಂದ ಸಮುದಾಯದವರ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಬಸವಲಿಂಗಪ್ಪನವರಿಂದ ಹಿಡಿದು ಬಂಗಾರಪ್ಪ, ಡಿ.ದೇವರಾಜ ಅರಸು, ಮೊಯ್ಲಿ, ಸಿದ್ದರಾಮಯ್ಯ ಅವರವರೆಗೆ ಯಾರು ಸೇಡಿನ ರಾಜಕಾರಣ ಮಾಡಲಿಲ್ಲ. ತಮ್ಮದೇ ಆದ ಚಿಂತನೆಯಿಂದ ರಾಜ್ಯವನ್ನು ಮುನ್ನೆಡಿಸಿದ ಕೀರ್ತಿ, ದೇಶಕ್ಕೆ ಕೊಟ್ಟ ಕೊಡುಗೆ ಅನನ್ಯವಾದುದು ಎಂದರು.

ಬಿಜೆಪಿಯ ಬಿ ಟೀಂ ಜೆಡಿಎಸ್‌: ಕಳೆದ 20 ವರ್ಷ ನನ್ನ ವಿರುದ್ಧ ರಾಜಕೀಯ ಹೋರಾಟ ಮಾಡಿಕೊಂಡು ಬಂದಿದ್ದ ಬಾಲಕೃಷ್ಣ ಅವರು ಈಗ ಮೂಲ ಕಾಂಗ್ರೆಸ್‌ ಮುಖಂಡರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪಕ್ಷದ ಗೆಲುವು, ಇಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ. ಹಳೇ, ಹೊಸ ಕಾಂಗ್ರೆಸ್ಸಿಗರೆಲ್ಲರೂ ಒಟ್ಟಾಗಿ ಸೇರಿ ಆಸಕ್ತಿಯಿಂದ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಪಣ ತೊಟ್ಟಿದ್ದಾಗಿ ತಿಳಿಸಿದ್ದಾರೆ. ಬಿಜೆಪಿಯ ಬಿ ಟೀಂ ಜೆಡಿಎಸ್‌ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್‌ ನಾಯಕರು ಶಕ್ತಿಯಾಗಿದ್ದಾರೆ: ರಾಜ್ಯ ದಲ್ಲಿ ಬಿಜೆಪಿಯಷ್ಟೇ ಕಾಂಗ್ರೆಸ್‌ ನಾಯಕರು ಶಕ್ತಿ ಯಾಗಿ ದ್ದಾರೆ. ಬಿಜೆಪಿ ಅವರು ಭಾವನಾತ್ಮಕವಾದ ತೋ ರಿಕೆ ಹೇಳಿಕೆ ಕೊಡುವ ಮೂಲಕ ಜನರ ಮನಸ್ಸನ್ನು ಗೆಲ್ಲುವ ಯತ್ನ ಮಾಡುತ್ತಿದ್ದಾರೆ. ನಮ್ಮವರು ಸಹ ಜನಪರವಾದ ಕಾರ್ಯಕ್ರಮ ಕೊಡುವ ಯೋಜನೆ ರೂಪಿಸಿದ್ದು, ಗೆಲ್ಲುವ ತಂತ್ರಗಾರಿಕೆ ನಮ್ಮ ವರಲ್ಲೂ ಇದೆ. ಅತ್ಯುತ್ತಮ ಸಂಘಟನೆಕಾರರಾದ ಸಿದ್ದ ರಾ ಮಯ್ಯ, ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಚುನಾ ವಣೆ ನಡೆಯಲಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.

ಬಿಜೆಪಿ ಜನರ ಭಾವನೆಗೆ ಸ್ಪಂದಿಸುತ್ತಿಲ್ಲ: ಜಿಪಂ ಮಾಜಿ ಅಧ್ಯಕ್ಷ ಎಚ್‌.ಎನ್‌.ಅಶೋಕ್‌ ಮಾತನಾಡಿ, ಡಬಲ್‌ ಎಂಜಿನ್‌ ಸರ್ಕಾರ ಶೇ.40ರಷ್ಟು ಕಮಿಷನ್‌, ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೂ, ಜನರ ಭಾವನೆಗೆ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 140 ಸ್ಥಾನ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಸರ್ಕಾ ರದಲ್ಲಿ ಎಚ್‌.ಎಂ.ರೇವಣ್ಣ ಎಂಎಲ್ಸಿ ಆಗುತ್ತಾರೆ. ನಂತರ ಮಂತ್ರಿಯೂ ಆಗಲಿದ್ದಾರೆ ಎಂದರು.

ತಾಪಂ ಮಾಜಿ ಸದಸ್ಯ ಸಿ.ಜಯರಾಂ, ವಕೀಲ ಶಿವಣ್ಣ, ತ್ಯಾಗದೆರೆಪಾಳ್ಯದ ರಂಗಸ್ವಾಮಯ್ಯ, ಕಾಂ ಗ್ರೆಸ್‌ ಮುಖಂಡ ಕಲ್ಕೆರೆ ಶಿವಣ್ಣ, ರೇಷ್ಮೆ ಹುರಿ ಕಾರ್ಖಾ ನೆ ಮಾಲೀಕರ ಸಂಘದ ಅಧ್ಯಕ್ಷ ಹೊಸಪೇಟೆ ಚಂದ್ರ ಯ್ಯ, ಪುರಸಭಾ ಸದಸ್ಯ ಎಚ್‌.ಜೆ. ಪುರುಷೋತ್ತಮ್‌, ಶಿವಕುಮಾರ್‌, ಎಂ.ಸಿ. ರಾಜಣ್ಣ, ಜಿ.ಕೃಷ್ಣ ರೆಹಮಾನ್‌, ಚಕ್ರ ಬಾವಿ ಭೈರಪ್ಪ, ಬೆಳಗವಾಡಿ ರಂಗನಾಥ್‌, ಮಾನ ಗಲ್‌ ಶ್ರೀನಿವಾಸ್‌, ಎಲ್‌ಐಸಿ ಎಚ್‌. ಶಿವ ಕುಮಾರ್‌, ತೇಜ ಮೂರ್ತಿ, ಚಿಕ್ಕಣ್ಣ, ಬಸವರಾಜು, ಎಂ.ಜಿ. ಗೋಪಾಲ್‌, ತೇಜು, ದೊಡ್ಡಿ ವಿಶ್ವನಾಥ್‌, ಶಿವಣ್ಣ, ಎ.ಬಿ. ಮಹದೇವ್‌, ಕುಮಾರ್‌, ಶಶಾಂಕ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.