ಗೆಲುವು ಸಾಧಿಸಲು ಬಿಜೆಪಿ ರಣತಂತ್ರ


Team Udayavani, Mar 27, 2019, 12:58 PM IST

geluvu

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಬಿಜೆಪಿ ರಣತಂತ್ರವನ್ನು ಹೆಣೆಯಲಿದೆ ಎಂದು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್‌.ಆಶೋಕ್‌ ಹೇಳಿದರು.

ನಗರದಲ್ಲಿ ಜಿಲ್ಲಾ ಕಚೇರಿಗಳ ಸಂಕಿರ್ಣದಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಅಶ್ವಥನಾರಾಯಣ್‌ ಅವರು ನಾಮಪತ್ರ ಸಲ್ಲಿಸಿದ ವೇಳೆ ಅವರ ಜೊತೆಗಿದ್ದು, ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ 22 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ನರೇಂದ್ರ ಮೋದಿ ಅವರು ರಾಜ್ಯದಲ್ಲಿ 7 ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್‌ 7ರಂದು ಮೈಸೂರು, ಚಿಕ್ಕಮಗಳೂರುಗಳಲ್ಲಿ ಸಭೆಗಳನ್ನು ಆಯೋಜಿಸಲಾಗಿದೆ ಎಂದರು.

ಸಿ.ಪಿ. ಯೋಗೇಶ್ವರ್‌ಗೆ ಟಿಕೆಟ್‌ ಸಿಗಲಿಲ್ಲವೇಕೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ನಾಯಕರನ್ನಾಗಿ ರೂಪಿಸುವ ಉದ್ದೇಶವಿದೆ. ಪಕ್ಷದಲ್ಲಿ ಯಾವ ಭಿನ್ನಾಭಿಪ್ರಾಯಗಳು ಇಲ್ಲ. ಒಗಟ್ಟಿನಿಂದಲೇ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ನಾವೇ ಗೆಲ್ಲುವ ವಿಶ್ವಾಸ: ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ್‌ ಮಾತನಾಡಿ, ಈ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಸೋತಿದ್ದಾರೆ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಕಡಿಮೆ ಅಂತರದಲ್ಲಿ ಸೋತರು. ಈ ಬಾರಿ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡ ಸಿ.ಪಿ. ಯೋಗೇಶ್ವರ್‌ ಮಾತನಾಡಿ, ನರೇಂದ್ರ ಮೋದಿಯೇ ಖುದ್ದು ಸ್ಪರ್ಧಿಸಿದ್ಧಾರೆ ಎಂದು ಭಾವಿಸಿ ಕಾರ್ಯಕರ್ತರು ಮತದಾರರ ಮನವೊಲಿಸಬೇಕು ಎಂದರು. ಬಿಜೆಪಿ ಮುಖಂಡರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಪ್ಪ, ಮುನಿರಾಜುಗೌಡ, ಮಾಳವಿಕ, ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯ ಕೆ. ಸೋಮಶೇಖರ್‌ ಮುಂತಾದವರು ಹಾಜರಿದ್ದರು.

ತಾಯಿ ಸಮಾಧಿಗೆ ನಮಸ್ಕಾರ: ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ್‌ ನಾಮಪತ್ರ ಸಲ್ಲಿಸುವ ಮುನ್ನ ತಮ್ಮ ತಾಯಿಯವರ ಪುಣ್ಯತಿಥಿಯಲ್ಲಿ ಭಾಗವಹಿಸಿ, ತಾಯಿಯವರ ಸಮಾಧಿಗೆ ನಮಸ್ಕರಿಸಿ ನಂತರ ನೇರವಾಗಿ ರಾಮನಗರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ತಾಯಿ ಚಿಕ್ಕಮ್ಮ ಅವರು 11 ದಿನದ ಹಿಂದೆ ಅಗಲಿದ್ದರು. ಅವರ ಉತ್ತರ ಕ್ರಿಯಾದಿ ಭೂಶಾಂತಿ ಕಾರ್ಯಕ್ರಮಗಳಲ್ಲಿ ಮಂಗಳವಾರ ಭಾಗವಹಿಸಿ ನಂತರ ಅವರು ರಾಮನಗರಕ್ಕೆ ಆಗಮಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಅಶ್ವತ್ಥನಾರಾಯಣ ಆಸ್ತಿ 23.02 ಕೋಟಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಅವರ ಬಳಿ 32.52 ಲಕ್ಷ ರೂ. ಚರಾಸ್ತಿ ಮತ್ತು 22.70 ಕೋಟಿ ರೂ. ಮಾರುಕಟ್ಟೆ ಮೌಲ್ಯ ಸ್ಥಿರಾಸ್ತಿ ಇದೆ. ಒಟ್ಟು 23.02 ಕೋಟಿ ಇದೆ.
32.52 ಲಕ್ಷ ರೂ. ಚರಾಸ್ತಿ ಮತ್ತು 13.09 ಕೋಟಿ ರೂ. ಸ್ಥಿರಾಸ್ತಿ ಅಶ್ವತ್ಥನಾರಾಯಣ ಅವರ ಬಳಿ ಇದೆ. ಇವರ ಪತ್ನಿ ಎಂ.ಸುನಿತಾ ಅವರ ಬಳಿ 1.75 ಲಕ್ಷ ರೂ. ಮೌಲ್ಯದ ಚರಾಸ್ಥಿ ಮತ್ತು 3.20 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ದಂಪತಿಗಳು ವಾರ್ಷಿಕ ಆದಾಯವನ್ನು ಘೋಷಿಸಿಕೊಂಡಿಲ್ಲ. ಅಶ್ವತ್ಥನಾರಾಯಣ ಅವರು ತಮ್ಮ ಆದಾಯದ ಮೂಲವನ್ನು ಕೃಷಿ ಮತ್ತು ವ್ಯಾಪಾರ ಎಂದು ಘೋಷಿಸಿಕೊಂಡಿದ್ದಾರೆ. ಇವರ ಪತ್ನಿಯವರಿಗೆ ಬಾಡಿಗೆ ಆದಾಯವಿದೆ ಎಂದು ಹೇಳಿಕೊಂಡಿದ್ದಾರೆ.

ಅಶ್ವತ್ಥನಾರಾಯಣ ಅವರ ಬಳಿ ಸದ್ಯ 5 ಲಕ್ಷ ರೂ. ನಗದು ಹಣವಿದೆ. 1450 ಗ್ರಾಂ ಚಿನ್ನಾಭರಣ, 5530 ಗ್ರಾಂ ಬೆಳ್ಳಿ, ಇವರ ಪತ್ನಿಯವರ ಬಳಿ 75 ಸಾವಿರ ರೂ, 550 ಗ್ರಾಂ ಚಿನ್ನಾಭರಣ, 2510 ಬೆಳ್ಳಿ ಇದೆ. ಅಶ್ವತ್ಥನಾರಾಯಣ ಅವರು ತಮ್ಮ ಬಳಿ ಒಂದು ಸ್ಕೂಟರ್‌ ಮತ್ತು ಇನ್ನೋವ ಕಾರು ಇರುವುದಾಗಿ ಬರೆದುಕೊಂಡಿದ್ದಾರೆ.

ನೆಲಮಂಗಲ ತಾಲೂಕು ಹುಳ್ಳೇನಹಳ್ಳಿ, ಬೆಂಗಳೂರು ಉತ್ತರ ತಾಲೂಕು ದಾಸನಪುರ, ಕೆಂಗೇರಿ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ, ಯಶವಂತ ಪುರ ಹೋಬಳಿ ಮಲ್ಲತಹಳ್ಳಿಯಲ್ಲಿ 4 ಅಪರ್ಟ್‌ಮೆಂಟ್‌ನಲ್ಲಿ ಶೇ.50ರಷ್ಟು ಭಾಗ ಭೂಮಿ ಇದೆ.

ಪೊಲೀಸ್‌ ಎಸ್‌ಐ ಭುವಿತ ಎಂಬವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರೊಂದಿಗೆ ಅಶ್ವತ್ಥನಾರಾಯಣ ಅವರು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟು ಮಾಡಿದ್ದಾರೆ ಎಂಬ ಕೇಸು ಮತ್ತು ಭೂಮಿ ಪರಿವರ್ತನೆ ಮಾಡದೆ ಮಾರಾಟ ಮಾಡಿರುವ ಬಗ್ಗೆ ಪ್ರಕರಣಗಳು ತಮ್ಮ ವಿರುದ್ಧ ಇದೆ ಎಂದು ಅಶ್ವತ್ಥನಾರಾಯಣ ಅವರ ನಾಮಪತ್ರದ ಜೊತೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.