ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ


Team Udayavani, Feb 28, 2023, 6:40 AM IST

ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ

ಚನ್ನಪಟ್ಟಣ: ನಾಡಿನ ಅಧಿದೇವತೆ ಚಾಮುಂಡೇಶ್ವರಿ ಆಶೀರ್ವಾದವಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ನಾನೇ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆದ ಬಮೂಲ್‌ ಉತ್ಸವದಲ್ಲಿ ಬೃಹತ್‌ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಾಗಲೇ ರಾಜ್ಯಾದ್ಯಂತ 73ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ 15ರಿಂದ 18 ಗಂಟೆಗಳ ಕಾಲ ನಿರಂತರ ಪಂಚರತ್ನ ಯಾತ್ರೆ ಬಗ್ಗೆ ಪ್ರಚಾರ ನಡೆಸಿದ್ದೇನೆ ಎಂದರು.

ನನಗೆ 2 ಬಾರಿ ಹೃದಯ ಬೈಪಾಸ್‌ ಸರ್ಜರಿ ಆಗಿದೆ. ಪಂಚಯಾತ್ರೆ ಪ್ರಾರಂಭದ ದಿನದಿಂದಲೂ ಮಾಂಸಾಹಾರ ತಿನ್ನುವುದನ್ನು ಬಿಟ್ಟಿದ್ದೇನೆ. ಈಗಾಗಲೇ 75ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಓಡಾಡಿದ್ದೇನೆ. ನಾನು ಹೋದ ಕಡೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ನನ್ನ ಬಳಿ ಬಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ. ರಾಜ್ಯದಲ್ಲಿ ಪಂಚರತ್ನ ಯೋಜನೆ ಜಾರಿಯಾಗಬೇಕಾದರೆ ಸುಮಾರು 2.5 ಲಕ್ಷ ಕೋಟಿ ರೂ. ಬೇಕು. ಅದಕ್ಕೆ ಪೂರಕವಾಗಿ ಹಣ ತರುವ ಯೋಜನೆಯನ್ನು ರೂಪಿಸಬೇಕಿದೆ ಎಂದರು.

ಪಾಪ ಹಣದಿಂದ ಸರ್ಕಾರ ತೆಗೆದರು:
ಪಾಪದ ಹಣ ಬಳಸಿಕೊಂಡು ಸಮ್ಮಿಶ್ರ ಸರ್ಕಾರವನ್ನು ತೆಗೆದ ಕೀರ್ತಿ ನಿಮ್ಮ ಕ್ಷೇತ್ರದ ಮಾಜಿ ಶಾಸಕರಿಗೆ ಸಲ್ಲಲಿದೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಸ್ವಾಭಿಮಾನಿ ನಡಿಗೆ ಕಾರ್ಯಕ್ರಮದಲ್ಲಿ ನಾನು ಕೂಡ ಸಿಎಂ ಆಗುತ್ತೇನೆಂದು ಅಂತಾ ಸಿಪಿವೈ ಗ್ರಾಮೀಣ ಭಾಗದಲ್ಲಿ ಮತ ಪಡೆಯುತ್ತಿದ್ದಾರೆ ಎಂಬ ಮಾತುಗಳನ್ನು ಕೂಡ ಕೇಳಿದ್ದೇನೆ ಎಂದರು.

ಕ್ಷೇತ್ರದ ಜನ ಸೀರೆಗೆ ಮತ ಮಾರಿಕೊಳ್ಳಲ್ಲ
ಕ್ಷೇತ್ರದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಳೆದ 20 ವರ್ಷಗಳ ಕಾಲ ಶಾಸಕರಾಗಿದ್ದರು. ಅವರು ಕ್ಷೇತ್ರದಲ್ಲಿ ಒಳ್ಳೆಯ ಕಲಸ ಮಾಡಿದ್ರೆ ಈಗ ಕ್ಷೇತ್ರದ ಜನತೆಗೆ ಸೀರೆ ಹಚ್ಚುವ ಅವಶ್ಯಕತೆ ಇಲ್ಲ. ನಮ್ಮ ಕ್ಷೇತ್ರದ ಜನತೆ ಒಂದು ಸೀರೆಗಾಗಿ ತಮ್ಮ ಮತವನ್ನು ಮಾರಿಕೊಳ್ಳುವುದಿಲ್ಲ. ನಮ್ಮ ಜನರು ಸ್ವಾಭಿಮಾನಿಗಳು. ಹಾಗೆಯೇ ಇಗ್ಗಲೂರಿನಲ್ಲಿ ದೇವೇಗೌಡರು ಡ್ಯಾಂ ಕಟ್ಟದಿದ್ದರೆ ಕ್ಷೇತ್ರಕ್ಕೆ ಎಲ್ಲಿ ನೀರಾವರಿ ಮಾಡಲು ಸಾಧ್ಯವಾಗುತ್ತಿತ್ತು?, ಈಗ ಕ್ಷೇತ್ರದಲ್ಲಿ ನೀರಾವರಿ ಹರಿಕಾರ, ಭಗೀರಥ ಅಂತಾ ಎಂದು ಬರೆದುಕೊಂಡಿದ್ದಾರೆ. ಈಗ ಸತ್ತೆಗಾಲ ಯೋಜನೆ ರೂಪಿಸಿ ಈಡೀ ಜಿಲ್ಲೆಗೆ ಶಾಶ್ವತವಾಗಿ ನೀರಾವರಿ ಹಾಗೂ ಕುಡಿಯುವ ನೀರು ಯೋಜನೆ ರೂಪಿಸಲಾಗಿದೆ ಎಂದು ಸಿಪಿವೈ ವಿರುದ್ದ ಎಚ್‌ಡಿಕೆ ವಾಗ್ಧಾಳಿ ನಡೆಸಿದ್ದಾರೆ.

ಇವರಿಗೆ ನಿಜವಾದ ಕಾಳಜಿ ಇದ್ದಿದ್ದರೆ ಕೊರೊನಾ ಹಾಗೂ ರಾಸುಗಳಿಗೆ ಕಾಲು ಬಾಯಿ ಜ್ವರ ಬಂದು ಹಸುಗಳು ಸತ್ತಾಗ ನೀನು ಎಲ್ಲಿದ್ದಪ್ಪಾ?, ಸಂಕಷ್ಟದಲ್ಲಿದಾಗ ಕಾಣದ ಯೋಗೇಶ್ವರ್‌ ಸುಳ್ಳು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾನೆ. ಇಂತಹ ಪೊಳ್ಳು ಮಾತಿಗೆ ಜನ ಮಣೆ ಹಾಕುವುದಿಲ್ಲ ಎಂದರು.

ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟಿದ್ದೀರಿ,
ನಿಮ್ಮ ಕಳ್ಳಾಟ ಇನ್ನು 2 ತಿಂಗಳಷ್ಟೆ
ಚನ್ನಪಟ್ಟಣದಲ್ಲಿ ಬಮೂಲ್‌ ಉತ್ಸವ ನಡೆಸುವುದಕ್ಕೆ ಸಹಕಾರ ಇಲಾಖೆ ಅಧಿಕಾರಿಗಳು ತೀರಾ ತೊಂದರೆ ಕೊಟ್ಟಿದ್ದು, ಸಹಕಾರ ಕ್ಷೇತ್ರದ ಅಧಿಕಾರಿಗಳಾದ ಎಆರ್‌ ಹಾಗೂ ಡಿಆರ್‌ಗಳು ನೋಡಿದ್ದೇನೆ. ಇಲಾಖೆಯಲ್ಲಿ 50 ಲಕ್ಷ ಹಾಗೂ ಒಂದು ಕೋಟಿ ಲೂಟಿ ಮಾಡಿದವರಿಗೆ ಹೇಳುವವರು ಕೇಳುವವರು ಇಲ್ಲ. ಸಹಕಾರ ಇಲಾಖೆಯಲ್ಲಿ ಸರಿಯಾದ ಕಾನೂನು ಇಲ್ಲ. ನಿಮ್ಮ ಕಳ್ಳಾಟ ಇನ್ನು 2 ತಿಂಗಳು ಅಷ್ಟೆ. ನಾನು ಎಂದಿಗೂ ಅಧಿಕಾರದಲ್ಲಿ ಇದ್ದಾಗ ಅಧಿಕಾರಿಗಳಿಗೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಿಲ್ಲ. ಕೆಲ ಅಧಿಕಾರಿಗಳು ಬೆಳಗ್ಗೆ ನಮ್ಮ ಮನೆಗೆ ಬರುತ್ತಾರೆ ರಾತ್ರಿಯಾದ್ರೆ ಬೇರೆಯವರಿಗೆ ದುಡ್ಡು ಕೊಟ್ಟುತ್ತಾರೆ. ಅದೆಲ್ಲವು ಕೂಡ ಗೊತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕುವ ಕಾಲ ಸನ್ನಿಹಿತವಾಗಿದೆ ಎಂದು ಅಧಿಕಾರಿಗಳ ವಿರುದ್ಧ ಎಚಿxಕೆ ಗರಂ ಆದರು.

ಇದೇ ನನ್ನ ಕಡೆ ಚುನಾವಣೆ
ಚನ್ನಪಟ್ಟಣ ಕ್ಷೇತ್ರ ಬಿಟ್ಟು ನಾನು ಬೇರೆಡೆ ಸ್ಪರ್ಧೆ ಮಾಡೋಲ್ಲ. ಇದೇ ನನ್ನ ಕೊನೆ ಚುನಾವಣೆಯಾಗಿದೆ. 2028ಕ್ಕೆ ಈ ಕ್ಷೇತ್ರದಿಂದ ಕಾರ್ಯಕರ್ತರನ್ನು ನೀವೇ ಹುಡುಕಿಕೊಳ್ಳಿರಿ. ಮುಂದೆ ರಾಜಕೀಯ ಯಾವ ಹಂತಕ್ಕೆ ಬರಲಿದೆ ಕಾದು ನೋಡೋಣ. ನಾನು ಹಾಸನದಲ್ಲಿ ಹುಟ್ಟಿರಬಹುದು. ಆದರೆ, ರಾಮನಗರ ಕ್ಷೇತ್ರ ನನಗೆ ರಾಜಕೀಯವಾಗಿ ಜನ್ಮ ನೀಡಿದೆ ಎಂದು ಸ್ಮರಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.