ರಕ್ತದ ಕೊರತೆ ನೀಗಿಸಲಿದೆ ಬೆಳ್ಳಿ ರಕ್ತನಿಧಿ ಕೇಂದ್ರ


Team Udayavani, Apr 24, 2019, 2:24 PM IST

ramanagar-tdy-4

ರಾಮನಗರ: ಅಪಘಾತ ಮುಂತಾದ ತುರ್ತು ಸ್ಥಿತಿಯಲ್ಲಿ ರಕ್ತಕ್ಕಾಗಿ ಜಿಲ್ಲೆಯ ಜನತೆ ಬೆಂಗಳೂರು ಅಥವಾ ಮಂಡ್ಯಕ್ಕೆ ಹೋಗಬೇಕಾಗಿತ್ತು. ಈ ಕೊರತೆಯನ್ನು ನೀಗಿಸಲುವಾಗಿ ಬೆಳ್ಳಿ ರಕ್ತ ನಿಧಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದಿ ಬೆಳ್ಳಿ ಹೆಲ್ತ್ ಸರ್ವೀಸ್‌ ಫೌಂಡೇಷನ್‌ ಅಧ್ಯಕ್ಷ ವಿನೋದ್‌ ತಿಳಿಸಿದರು.

ನಗರದ ರಾಮಕೃಷ್ಣ ಆಸ್ಪತ್ರೆಯ ಬಳಿ ನೂತನವಾಗಿ ಆರಂಭವಾಗಿರುವ ಬೆಳ್ಳಿ ರಕ್ತ ನಿಧಿ ಕೇಂದ್ರಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಈಗಾಗಲೇ ರೆಡ್‌ ಕ್ರಾಸ್‌ ಸಂಸ್ಥೆ ನೇತೃತ್ವದಲ್ಲಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಕ್ತ ಸಂಗ್ರಹ ಕೇಂದ್ರದಲ್ಲಿ ಹೆಚ್ಚಿನ ಪ್ರಮಾಣದ ರಕ್ತ ಸಂಗ್ರಹಿಸಲು ಅಸಾಧ್ಯ. ನಿರ್ವಹಣೆ ಕೊರತೆಯಿಂದ ಹೆಚ್ಚಿನ ಸೇವೆಯನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಕೊರತೆಯನ್ನು ನೀಗಿಸಲು ರಕ್ತನಿಧಿಯನ್ನು ಸ್ಥಾಪಿಸಿರುವುದಾಗಿ ತಿಳಿಸಿದರು.

ತಾಲೂಕು ಕೇಂದ್ರದಲ್ಲಿ ರಕ್ತನಿಧಿಗಳಿಲ್ಲ: ಜಿಲ್ಲೆಯ ಚನ್ನಪಟ್ಟಣ, ಕನಕಪುರ, ಮಾಗಡಿಯಲ್ಲೂ ರಕ್ತನಿಧಿಗಳಿಲ್ಲ. ವಿವಿಧ ಸಂದರ್ಭಗಳಲ್ಲಿ ಅಗತ್ಯವಾಗಿ ಬೇಕಾಗಿರುವ ರಕ್ತಕ್ಕಾಗಿ ಜನ ಬೆಂಗಳೂರು, ಮಂಡ್ಯ ಎಂದು ಅಲೆದಾಡಬೇಕಿತ್ತು. ಇದೀಗ ತಮ್ಮಲ್ಲೇ ಈ ವ್ಯವಸ್ಥೆ ಸಿಗಲಿದೆ. ರಕ್ತನಿಧಿಯಲ್ಲಿ ರಕ್ತದಿಂದ ಪ್ಲೇಟ್ಲೆಟ್, ಪ್ಲಾಸ್ಮ ಮುಂತಾದ ಕಾಂಪೋನೆಂಟ್‌ಗಳನ್ನು ವಿಭಜಿಸುವ ವ್ಯವಸ್ಥೆ ಇದೆ. ಸರ್ಕಾರಿ ಆಸ್ಪತ್ರೆಯಲ್ಲಿರುವ ರಕ್ತನಿಧಿಯಲ್ಲಿ ಈ ವ್ಯವಸ್ಥೆ ಇರಲಿಲ್ಲ. ಹೀಗಾಗಿ ತಮ್ಮ ಸಂಸ್ಥೆ ಸ್ಥಾಪಿಸಿರುವ ಬೆಳ್ಳಿ ರಕ್ತ ನಿಧಿ ಸಾರ್ವಜನಿಕರಿಗೆ ತುರ್ತುಸ್ಥಿತಿಯಲ್ಲಿ ಉಪಯೋಗವಾಗಲಿದೆ ಎಂದರು.

850 ರೂ.ಗೆ ಒಂದು ಯೂನಿಟ್ ರಕ್ತ: ಬೆಳ್ಳಿ ರಕ್ತನಿಧಿ ಕೇಂದ್ರ ಟೆಕ್ನಿಕಲ್ ಸೂಪರ್‌ವೈಸರ್‌ ರಾಮು ಮಾತನಾಡಿ, ಸರ್ಕಾರದ ನಿಯಮದ ಪ್ರಕಾರವೇ ತಮ್ಮಲ್ಲಿ ಒಂದು ಯೂನಿಟ್ ರಕ್ತ 850 ರೂ. ಗೆ ದೊರೆಯಲಿದೆ. ಆರೋಗ್ಯವಂತ ವ್ಯಕ್ತಿಗಳಿಂದ ಸಂಗ್ರಹಿಸಿದ ರಕ್ತವನ್ನು ಎಚ್ಐವಿ, ಜಾಂಡಿಸ್‌, ಮಲೇರಿಯಾ ಮುಂತಾದ ಸೋಂಕು ಇಲ್ಲ ಎಂದು ದೃಢಪಡಿಸಿಕೊಳ್ಳಲು ನಡೆಸುವ ಪರೀಕ್ಷೆಗಳಿಗೆ ಆಗುವ ವೆಚ್ಚವನ್ನು ಮಾತ್ರ ಪಡೆದು ರಕ್ತವನ್ನು ನೀಡಲಾಗುತ್ತದೆ ಎಂದರು.

ಸುಸಜ್ಜಿತ ರಕ್ತಕೇಂದ್ರ ಸ್ಥಾಪನೆ: ಕೇಂದ್ರದ ವೈದ್ಯ ಡಾ.ಅನುಪಮ ಮಾತನಾಡಿ, ಸಂಗ್ರಹದಲ್ಲಿರುವ ರಕ್ತವನ್ನು ಸಾಮಾನ್ಯ ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸುವುದು ಸರಿಯಲ್ಲ. ಇದಕ್ಕೆಂದ ವಿಶೇಷ ರೆಫ್ರಿಜರೇಟರ್‌ಗಳನ್ನು ಬಳಸಬೇಕಾಗಿದೆ. ಬೆಳ್ಳಿ ರಕ್ತನಿಧಿಯಲ್ಲಿ ಈ ಎಲ್ಲಾ ಸೂಕ್ಷ್ಮ ಅಂಶಗಳನ್ನು ಗಮನಿಸಿ ಸುಸಜ್ಜಿತವಾಗಿ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.

ಕೇಂದ್ರ ಆರಂಭ ಸಂತಸದ ವಿಚಾರ: ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ತಮ್ಮ ಸಂಸ್ಥೆ ಸೇರಿದಂತೆ ವಿವಿಧ ಸಂಸ್ಥೆಗಳು ರಕ್ತದಾನ ಶಿಬಿರಗಳು ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸುತ್ತಿವೆ. ತಮ್ಮ ಸಂಸ್ಥೆ ಆಯೋಜಿಸಿದ್ದ ರಕ್ತದಾನ ಶಿಬಿರಗಳಲ್ಲಿ ಇಲ್ಲಿಯವರೆಗೆ 1 ಸಾವಿರಕ್ಕೂ ಅಧಿಕ ಯೂನಿಟ್ ರಕ್ತವನ್ನು ಸಂಗ್ರಹಿಸಲಾಗಿತ್ತು. ಆದರೆ, ಈ ರಕ್ತವನ್ನು ಸಂಗ್ರಹಿಸಿಡುವ ವ್ಯವಸ್ಥೆ ರಾಮನಗರದಲ್ಲಿ ಇಲ್ಲದ ಕಾರಣ ಬೆಂಗಳೂರು ರಕ್ತ ನಿಧಿಯ ಮೊರೆ ಹೋಗಬೇಕಾಗಿತ್ತು. ಇದೀಗ ಸುಸಜ್ಜಿತ ರಕ್ತ ನಿಧಿ ಕೇಂದ್ರ ಆರಂಭವಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಅನ್ನದಾನೇಶ್ವರ ಸಾಮೀಜಿಗಳಿಂದ ಉದ್ಘಾಟನೆ: ರಕ್ತನಿಧಿ ಕೇಂದ್ರವನ್ನು ಆದಿಚುಂಚನಗಿರಿ ಮಠದ ರಾಮನಗರ ಶಾಖೆಯ ಮುಖ್ಯಸ್ಥ ಶ್ರೀ ಅನ್ನದಾನೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಕನಕಪುರದ ಲಯನ್‌ ಮರಸಪ್ಪ ರವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಹಕಾರಕ್ಕಾಗಿ ಸಂಪರ್ಕಿಸಿ: ರಕ್ತದಾನ ಶಿಬಿರ ಆಯೋಜಿಸುವ ಸಂಘ-ಸಂಸ್ಥೆಗಳು ಸಹಕಾರಕ್ಕಾಗಿ 080-29782345, 9845235648, 7892215917 ಸಂಪರ್ಕಿಸಬಹುದು ಎಂದು ಕೇಂದ್ರದ ಆಡಳಿತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.