ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ


Team Udayavani, Mar 29, 2023, 3:21 PM IST

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ರಾಮನಗರ: ಜೆಡಿಎಸ್‌ ಭದ್ರಕೋಟೆ ರಾಮನಗರ ಜಿಲ್ಲೆಯಲ್ಲಿ ನೆಲೆಕಂಡುಕೊಳ್ಳಬೇಕು. ಆ ಮೂಲಕ ಹಳೇ ಮೈಸೂರು ಭಾಗದ ಸುಮಾರು 80 ಕ್ಷೇತ್ರಗಳಲ್ಲಿ ಬಿಜೆಪಿ ಪ್ರಭಾವ ಬೀರಬೇಕೆನ್ನುವ ಸದುದ್ದೇಶದಿಂದ ಹಾಗೂ ಈ ಬಾರಿ ಚುನಾವಣೆಯಲ್ಲಿ ಶತಾಯ ಗತಾಯ ಸ್ಥಾನ ಭದ್ರಪಡಿಸಿಕೊಳ್ಳಬೇಕೆಂದು ಬಿಜೆಪಿ ಹೈಕಮಾಂಡ್‌ ಹಠಕ್ಕೆ ಬಿದ್ದಿದೆ.

ಇದರ ಮುಂದುವರಿದ ಭಾಗವಾಗಿ ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ದಕ್ಷಿಣಾಯೋಧ್ಯೆ ನಿರ್ಮಿಸುವ ಪ್ರಸ್ತಾವನೆ ಹರಿಬಿಟ್ಟು ಹಿಂದೂ ಮತದಾರರ ಸೆಳೆಯಲು ಪ್ರಯತ್ನಿಸಿತ್ತು. ಇನ್ನು ಮುಂದುವರಿದು ಇದೀಗ ದೇವಾಲಯ ನಿರ್ಮಾಣಕ್ಕೆ 40 ಲಕ್ಷ ರೂ.ಹಣ ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಬ್ಲೂಪ್ರಿಂಟ್‌(ನೀಲನಕ್ಷೆ) ಬಿಡುಗಡೆ ಮಾಡಿದ್ದು ಕುತೂಹಲ ಹೆಚ್ಚಿಸಿದೆ.

ಇನ್ನೂ ಹೇಳಿ ಕೇಳಿ ರಾಮನಗರ ಅಂದ್ರೆ ಮೂವರು ಮುಖ್ಯಮಂತ್ರಿಗಳನ್ನು ಕೊಡುಗೆ ನೀಡಿದೆ. ಅಲ್ಲದೆ, ಒಬ್ಬರು ಪ್ರಧಾನಿ ಮಾಡಿದ ಹೆಗ್ಗಳಿಕೆ ಕೂಡ ಇದೆ. ಈ ಜಿಲ್ಲೆಯಲ್ಲಿ ಶತಾಯ ಗತಾಯ ಶಾಸಕ ಸ್ಥಾನ ಹೆಚ್ಚಿಸಿಕೊಳ್ಳಲೇಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ, ಹಲವು ಯೋಜನೆ ಪ್ರಚಾರ ಮಾಡುವ ಮೂಲಕ ಮುನ್ನುಡಿ ಬರೆಯುತ್ತಿದ್ದಾರೆ. ಕಾಮಗಾರಿಗೆ ಚಾಲನೆ, 40 ಲಕ್ಷ ರೂ. ಬಿಡುಗಡೆ: ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಚಾಲನೆ ನೀಡಿದೆ. ಇದಕ್ಕಾಗಿ ಆರಂಭಿಕವಾಗಿ 40 ಲಕ್ಷ ರೂ. ಒದಗಿಸಲಾಗಿದೆ. ರಾಮನಗರ ಜಿಲ್ಲೆಯ ಜನತೆಗೆ ಇದು ರಾಮನವಮಿಯ ಉಡುಗೊರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಒಂದೆರೆಡು ವರ್ಷಗಳಲ್ಲಿ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿ ಆಗಲಿದ್ದು, ಇದು ದಕ್ಷಿಣದ ಅಯೋಧ್ಯೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‌

ಮಂದಿರ ನಿರ್ಮಾಣದ ಬ್ಲೂಪ್ರಿಂಟ್‌ ವೀಡಿಯೊ ವೈರಲ್: ರಾಮಮಂದಿರ ನಿರ್ಮಾಣದ ಬ್ಲೂಪ್ರಿಂಟ್‌ ರೆಡಿಯಾಗಿದ್ದು, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಬಿಡುಗಡೆ ಮಾಡಿದ್ದಾರೆ. ದಕ್ಷಿಣ ಅಯೋಧ್ಯೆ ರೀತಿಯಲ್ಲಿ ದೇವಸ್ಥಾನ ಅಭಿವೃದ್ಧಿಪಡಿಸಿ ರಾಮಮಂದಿರ ನಿರ್ಮಾಣದ ಬ್ಲೂಪ್ರಿಂಟ್‌ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಎರಡುವರೇ ನಿಮಿಷದ ಬ್ಲೂಪ್ರಿಂಟ್‌ ವೀಡಿಯೋದಲ್ಲಿ ದೇವಾಲಯದ ಬಗೆಗಿನ ಸಂಪೂರ್ಣ ಮಾಹಿತಿ ನೀಡಲಾಗಿದೆ. ಸಾಲು ಮಂಟಪ, ಗೋಪುರ, ಆಂಜನೇಯ ದೇವಾಲಯ, ಶಿವ ದೇವಾಲಯ, ವ್ಯೂವ್‌ ಪಾಯಿಂಟ್‌ಗಳ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯ ವಿನ್ಯಾಸಗಳ ಬಗ್ಗೆ ಮಾಹಿತಿ ಇದೆ.

ಗುದ್ದಲಿಪೂಜೆಗೆ ಸಿದ್ಧತೆ: ಇದೀಗ ಬ್ಲೂಪ್ರಿಂಟ್‌ ರೆಡಿ ಮಾಡಲಾಗಿದ್ದು, ಗುದ್ದಲಿ ಪೂಜೆಗೆ ಸಿದ್ಧತೆ ನಡೆಸಿದ್ದಾರೆ. ಚುನಾವಣೆಯ ದಿನಾಂಕ ಪ್ರಕಟಿಸಿ ನೀತಿ ಸಂಹಿತೆ ಘೋಷಣೆಗೂ ಮುನ್ನವೇ ರಾಮಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕೆಂದು ಬಿಜೆಪಿ ನಾಯಕರು ಉತ್ಸಾಹ ತೋರುತ್ತಿದ್ದಾರೆ. ಒಟ್ಟಾರೆ ಏನೇ ಇರಲಿ, ಕೊನೆ ಕ್ಷಣದಲ್ಲಿ ಹಿಂದೂ ಮತ ಕ್ರೂಡಿಕರಣಕ್ಕೆ ಮುಂದಾದ ಬಿಜೆಪಿ ರಾಮಜಪ ಮಾಡುವುದನ್ನು ಮರೆಯದೆ ಜೆಡಿಎಸ್‌ ಭದ್ರಕೋಟೆ ಬೇಧಿಸಲು ತಂತ್ರ ರೂಪಿಸಿದೆ. ಆದರೆ, ಇದು ಎಷ್ಟರ ಮಟ್ಟಿಗೆ ಫಲ ನೀಡಲಿದೆ ಕಾದು ನೋಡಬೇಕಿದೆ.

ರಾಮನಗರದ ಅಭಿವೃದ್ಧಿಗೆ ರಾಮಮಂದಿರ ಅಗತ್ಯ: ರಾಮಮಂದಿರ ನಿರ್ಮಾಣ ನಮ್ಮ ಕನಸು ಅದರಲ್ಲೂ ದಕ್ಷಿಣಾಯೋಧ್ಯೆ ನಿರ್ಮಿಸಿ ಶ್ರೀರಾಮನ ಆಶೀರ್ವಾದ ಪಡೆಯಬೇಕು. ರಾಮನಗರದ ಅಭಿವೃದ್ಧಿಗೆ ರಾಮಮಂದಿರ ಅಗತ್ಯವಾಗಿದೆ. ರಾಮಮಂದಿರ ಕಟ್ಟೋದು, ರಾಮನ ಸೇವೆ. ರಾಮನ ಸೇವೆಗೆ ಸಮಯದ ಗಡುವು ಇಲ್ಲ. ರಾಮಮಂದಿರ ನಿರ್ಮಾಣಕ್ಕೆ ಅಂದಾಜು 120 ಕೋಟಿ ರೂ. ವೆಚ್ಚ ಆಗಬಹುದು. ಮುಂದೆಯೂ ನಾವೇ ಅಧಿಕಾರಕ್ಕೆ ಬರೋದು. ರಾಮಮಂದಿರ ನಿರ್ಮಾಣ ಮಾಡಿ ಮುಗಿಸುತ್ತೇವೆ. ಶಿಲಾನ್ಯಾಸಕ್ಕೆ ಇನ್ನೂ ದಿನಾಂಕ ನಿಗದಿ ಮಾಡಿಲ್ಲ, ಕೆಲ ಇಲಾಖೆಗಳಲ್ಲಿ ಕಾನೂನಾತ್ಮಕವಾಗಿ ಅನುಮತಿ ಪಡೆದು ಶಿಲಾನ್ಯಾಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌ ಅಶ್ವತ್ಥ್ನಾರಾಯಣ ತಿಳಿಸಿದ್ದಾರೆ.

ಜಿಲ್ಲೆಯ ಹಿಂದೂ ಮತ ಸೆಳೆಯಲು ಬಿಜೆಪಿ ಯತ್ನ : ಇತ್ತೀಚೆಗೆ ಜಿಲ್ಲಾ ಸಚಿವರ ನೇತೃತ್ವದಲ್ಲಿ ರಾಮನಗರದ ಭಕ್ತರ ಗುಂಪು ಅಯೋಧ್ಯೆಗೆ ಭೇಟಿ ನೀಡಿತ್ತು. ಆ ಸಂದರ್ಭದಲ್ಲಿ ಅಲ್ಲಿನ ರಾಮಮಂದಿರಕ್ಕೆ ಬೆಳ್ಳಿಯ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ವಸ್ತ್ರವನ್ನು ಕಾಣಿಕೆಯಾಗಿ ಅರ್ಪಿಸಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಇದಾದ ಬಳಿಕ ಒಂದಲ್ಲಾ ಒಂದು ತಿರುವು ಪಡೆದುಕೊಳ್ಳುತ್ತಿದ್ದ ರಾಮಮಂದಿರ, ದಕ್ಷಿಣಾಯೋಧ್ಯೆಯನ್ನಾಗಿಸುವ ಕನಸಿಗೆ ಇದೀಗ ಜೀವ ಬಂದಿದೆ. ಹಣ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಹಿಂದೂ ಮತಗಳತ್ತ ಮತ್ತೂಂದು ಅಸ್ತ್ರ ಪ್ರಯೋಗಿಸಿದೆ.

ಕಮಿಟಿ ರದ್ದು; ನೂತನ ಕಮಿಟಿಯಲ್ಲಿ ಯಾರ್ಯಾರು? : ಈಗಾಗಲೆ ರಾಮದೇವರ ಬೆಟ್ಟದಲ್ಲಿ ದಕ್ಷಿಣಾಯೋಧ್ಯೆ ನಿರ್ಮಿಸಬೇಕೆಂದು ಚಿಂತಿಸುವ ಮೂಲಕ ಸರ್ವ ಪಕ್ಷದ ಮುಖಂಡರುಗಳನ್ನೊಳಗೊಂಡ ಕಮಿಟಿಯೊಂದನ್ನು ರಚಿಸಲಾಗಿತ್ತು. ಆದರೆ, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರ ಪ್ರತಿಭಟನೆ ಒತ್ತಡದ ಹಿನ್ನೆಲೆಯಲ್ಲಿ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಅದನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ದೇವಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ್ದು, ಹೊಸ ಕಮಿಟಿ ರಚನೆಯಾಗಲಿದೆಯೇ ಅಥವಾ ಸರ್ಕಾರ ಜೊತೆಗೆ ಅಧಿಕಾರಿಗಳ ನೇತೃತ್ವದಲ್ಲೇ ನಡೆಯಲಿದೆಯೇ ಎಂಬ ಗುಸುಗುಸು ಶುರುವಾಗಿದೆ.

-ಎಂ.ಎಚ್‌. ಪ್ರಕಾಶ, ರಾಮನಗರ

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.