ದೇಶದಲ್ಲೇ ಕೆನರಾ ಬ್ಯಾಂಕ್‌ಗೆ 3ನೇ ಸ್ಥಾನ


Team Udayavani, Nov 22, 2021, 3:07 PM IST

ದೇಶದಲ್ಲೇ ಕೆನರಾ ಬ್ಯಾಂಕ್‌ಗೆ 3ನೇ ಸ್ಥಾ ನ

 ರಾಮನಗರ: ಗ್ರಾಹಕರ ಸಹಕಾರದಿಂದ ಕೆನರಾ ಬ್ಯಾಂಕ್‌ ಉನ್ನತಿ ಸಾಧಿಸಿದೆ ಎಂದು ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಉಪ ಮಹಾಪ್ರಬಂಧಕ ಜಿ.ವಿ.ರಮಾಕಾಂತರಾವ್‌ ಅಭಿಪ್ರಾಯಪಟ್ಟರು. ತಾಲೂಕಿನ ಬಿಡದಿಯ ಕೆನರಾ ಬ್ಯಾಂಕ್‌ನಲ್ಲಿ ಅಮ್ಮೆಂಬಾಳ ಸುಬ್ಬರಾವ್‌ ಪೈ ಅವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 116ನೇ ಸಂಸ್ಥಾಪನಾ ದಿನಾಚರಣೆಯಲ್ಲಿ (ಫೌಂಡರ್ಸ್‌ ಡೇ) ಅವರು ಮಾತನಾಡಿದರು.

ಸಾಮಾಜಿಕ ಕಾಳಜಿ: ಗ್ರಾಹಕರ ವಿಶ್ವಾಸ ಗಳಿಸಲು ಬ್ಯಾಂಕ್‌ ನಿರಂತರ ಉತ್ತಮ ಸೇವೆ ಒದಗಿಸುತ್ತಿದೆ. ಈ ವಿಚಾರದಲ್ಲಿ ಬ್ಯಾಂಕ್‌ನ ಪ್ರಾಮಾಣಿಕತೆಗೆ ಗ್ರಾಹಕರು ಮನ್ನಣೆ ಕೊಟ್ಟು ಬ್ಯಾಂಕ್‌ನ ಉನ್ನತಿಗೆ ಕಾರಣರಾಗಿದ್ದಾರೆ ಎಂದರು. ತಮ್ಮ ಬ್ಯಾಂಕು ಸಾಮಾಜಿಕ ಸೇವೆ ಯಲ್ಲಿಯೂ ಮುಂದಿದೆ ಎಂದರು.

ದೇಶದಲ್ಲೇ 3ನೇ ಸ್ಥಾನ: ಬ್ಯಾಂಕಿನ ಮುಖ್ಯ ಪ್ರಬಂಧಕ ಬಿ.ವಿ.ಕೇಶವಮೂರ್ತಿ ಮಾತ ನಾಡಿ, ಸಂಸ್ಥಾಪಕ ಎ.ಸುಬ್ಬ ರಾವ್‌ ಪೈರವರು ಉತ್ತ ಮ ಉದ್ದೇಶಗಳೊಂದಿಗೆ ಸ್ಥಾಪಿಸಿ, ಅಭಿ ವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅವರ ಶ್ರಮ ದಿಂದಾಗಿ ಇಂದು ಕೆನರಾ ಬ್ಯಾಂಕ್‌ ದೇಶದಲ್ಲಿ 3ನೇ ಸ್ಥಾನದಲ್ಲಿದೆ. ಈ ಸಾಧನೆಗೆ ಗ್ರಾಹಕರ ಸಹಕಾರ ಮುಖ್ಯವಾಗಿದೆ ಎಂದರು.

ನಿರುದ್ಯೋಗಿಗಳಿಗೆ ತರಬೇತಿ: ಕಾರ್ಯಕ್ರಮ ದಲ್ಲಿ ಹಾಜರಿದ್ದ ಸಾಮಾಜಿಕ ಕಾರ್ಯಕರ್ತ ಬಿಡದಿಯ ಮುತ್ತಣ್ಣ ಮಾತನಾಡಿ, ಕೆನರಾ ಬ್ಯಾಂಕ್‌ನ ಸಾಮಾಜಿಕ ಸೇವೆಯ ಬಗ್ಗೆ ಮೆಚ್ಚುಗೆ ನುಡಿಗಳನ್ನಾಡಿದರು. ವಿದ್ಯಾವಂತ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಸ್ಥಾಪಿಸಿಕೊಳ್ಳಲು ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಕೊಡುತ್ತಿದೆ. ಊಟ, ವಸತಿ ಸಹಿತ ಉಚಿತ ತರಬೇತಿ ನೀಡು ತ್ತಿರುವುದು ಕೆನರಾ ಬ್ಯಾಂಕ್‌ನ ಸಾಮಾಜಿಕ ಬದ್ಧತೆ ಪ್ರದರ್ಶಿಸಿದೆ.

ಬಿಡದಿ ಹೋಬಳಿಯಲ್ಲಿ 2 ಹಾಗೂ ಹಾರೋಹಳ್ಳಿಯಲ್ಲಿ 1 ತರಬೇತಿ ಸಂಸ್ಥೆಯನ್ನು ಕೆನರಾ ಬ್ಯಾಂಕ್‌ ಸ್ಥಾಪಿಸಿದೆ. ಸ್ಥಳೀಯರು ಇದರ ಉಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಬಿಡದಿ ಇಟ್ಟಮಡು ಪ್ರಾಥಮಿಕ ಶಾಲೆ ಹಾಗೂ ತೊರೆದೊಡ್ಡಿಯ ಪ್ರೌಢಶಾಲೆಯ ತಲಾ ಮೂವರು ಎಸ್ಸಿ, ಎಸ್ಟಿ ವರ್ಗದ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕ್‌ಗಳನ್ನು ವಿತರಿಸಿ ದರು.

ಬೀದಿಬದಿ ವ್ಯಾಪಾರಿಗಳ ಅರ್ಜಿಯನ್ನು ಪುರಸ್ಕರಿಸಿ ತಲಾ 10 ಸಾವಿರ ರೂ.ಸಾಲದ ಮೊತ್ತ ವನ್ನು ವಿತರಿಸಲಾಯಿತು. ಬೀದಿಬದಿ ವ್ಯಾಪಾರಿಗಳು ಸಹ ಆನ್‌ಲೈನ್‌ ಪಾವತಿ ಬಳಕೆಗೆ ಅನುಕೂಲವಾಗುವಂತೆ ಬ್ಯಾಂಕ್‌ನ ಕ್ಯೂಆರ್‌ ಕೋಡ್‌ ವ್ಯವಸ್ಥೆ ವಿತರಿಸಲಾಯಿತು. ಸಮಾಜ ಸೇವಕ ಇಟ್ಟಮಡು ಸೋಮಣ್ಣ , ಸ್ಥಳೀಯ ಶಾಖೆಯ ವ್ಯವಸ್ಥಾಪಕರಾದ ನೇಖಾ, ಪ್ರಮುಖರಾದ ಸೌಮ್ಯ ಪ್ರೀತಿ, ರಾಜೇಶ್‌, ದಿಲೀಪ್‌ ಮತ್ತು ಬ್ಯಾಂಕ್‌ ಸಿಬ್ಬಂದಿ ವರ್ಗ, ಗ್ರಾಹಕರು ಹಾಜರಿದ್ದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.