ರೈತರ ನಿದ್ದೆಗೆಡಿಸಿದ ರೇಷ್ಮೆಗೂಡು ಕಳವು ಪ್ರಕರಣ


Team Udayavani, Dec 2, 2021, 6:14 PM IST

jeju gudu theft

ಕನಕಪುರ: ರೇಷ್ಮೆ ಗೂಡಿನ ಬೆಲೆ ಏರಿಕೆಯಾಗು ತ್ತಿದ್ದಂತೆ ಖದೀಮರ ಕಣ್ಣು ರೈತರು ಬೆಳೆದ ರೇಷ್ಮೆ ಗೂಡಿನ ಮೇಲೆ ನೆಟ್ಟಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನಲ್ಲಿ ಎರಡು ತಿಂಗಳಲ್ಲಿ ಎರಡು ರೇಷ್ಮೆ ಗೂಡು ಕಳ್ಳತ ನಡೆದಿದೆ. ಇದು ರೈತರ ಆತಂಕವನ್ನು ಹೆಚ್ಚಿಸಿದ್ದು ಕಷ್ಟಪಟ್ಟು ಬೆಳೆದ ಗೂಡನ್ನು ಹಗಲು ರಾತ್ರಿ ನಿದ್ದೆಗೆಟ್ಟು ರಕ್ಷಣೆ ಮಾಡುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ರೇಷ್ಮೆ ಗೂಡಿನ ಬೆಲೆ ಏರಿಕೆಯಾಗಿರುವುದು ಕಳ್ಳರ ಕಣ್ಣು ರೇಷ್ಮೆ ಗೂಡಿನ ಮೇಲೆ ಬಿದ್ದಿದೆ.

ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ಮೇಲೆ ಅವಲಂಬಿತವಾಗಿದ್ದ ರೈತರಿಗೆ ನಿರಂತರವಾಗಿ ಸುರಿದ ಜಡಿ ಮಳೆಯಿಂದಾಗಿ ಮೇವಿನ ಕೊರತೆ ಸವಾಲಾಗಿ ಪರಿಣಮಿಸಿತ್ತು. ಅಂತಹ ಸಂದರ್ಭದಲ್ಲೂ ತಿಂಗಳು ಕಾಲ ಕಷ್ಟಪಟ್ಟು ರೈತರು ರೇಷ್ಮೆ ಬೆಳೆದಿದ್ದರು.

ರೇಷ್ಮೆ ಗೂಡು ಕಳವು: ಕೋಡಿಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶೆಟ್ಟಿಕೆರೆದೊಡ್ಡಿ ಗ್ರಾಮದ ಚಂದ್ರೇಗೌಡ ಎಂಬುವವರಿಗೆ ಸೇರಿದ ಗೂಡು ಕಳ್ಳತನವಾಗಿತ್ತು. ರೈತ ಚಂದ್ರೇಗೌಡ ಬೆಳೆದಿದ್ದ ಗೂಡನ್ನು ರೇಷ್ಮೆ ಮನೆಯಲ್ಲಿ ಇಟ್ಟಿದ್ದರು. ಇನ್ನು ಒಂದೆರಡು ದಿನದಲ್ಲಿ ಬಿಡಿಸಿ ಮಾರುಕಟ್ಟೆಗೆ ಹಾಕುವಷ್ಟರಲ್ಲಿ ರಾತ್ರೋರಾತ್ರಿ ರೇಷ್ಮೆ ಮನೆಗೆ ನುಗ್ಗಿದ ಖದೀಮರು ಸುಮಾರು 20 ರಿಂದ 30 ಚಂದ್ರಿಕೆಯಲ್ಲಿದ್ದ ರೇಷ್ಮೆ ಗೂಡನ್ನು ಬಿಡಿಸಿಕೊಂಡು ಪರಾರಿಯಾಗಿದ್ದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ರೈತ ಹಾಕಿದ ಬಂಡವಾಳ ತಿಂಗಳ ಶ್ರಮ ಎಲ್ಲವೂ ನಿರೀನಲ್ಲಿ ಹೋಮ ಮಾಡಿದಂತಾಗಿ ತ್ತು. ಕೋಡಿಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಆದರೇ 2 ತಿಂಗಳಾದರೂ ಖದೀಮರು ಪತ್ತೆಯಾಗಿಲ್ಲ.

100 ಕೆ.ಜಿ ರೇಷ್ಮೆ ಗೂಡು ಕಳವು: ತಾಲೂಕಿನ ಸಾತನೂರು ಹೋಬಳಿಯ ಅಚ್ಚಲು ಗ್ರಾಮದ ಸುನಂದಮ್ಮ ಮತ್ತು ಲೋಕೇಶ್‌ ಎಂಬುವವರಿಗೆ ಸೇರಿದ 50 ಸಾವಿರ ಬೆಲೆ ಬಾಳುವ ಸುಮಾರು 80ರಿಂದ 100 ಕೆ.ಜಿ ರೇಷ್ಮೆಗೂಡು ಮಂಗಳವಾರ ರಾತ್ರಿ ಕಳವಾಗಿದೆ. ರೈತ ಲೋಕೇಶ್‌ 100 ಮೊಟ್ಟೆ ರೇಷ್ಮೆ ಸಾಕಾಣಿಕೆ ಮಾಡಿದ್ದರು. ಬುಧವಾರ ಮಾರುಕಟ್ಟೆಗೆ ಹಾಕಲು ಹಿಂದಿನ ದಿನ ಮಂಗಳವಾರ ಚಂದ್ರಿಕೆಯಲ್ಲಿದ್ದ ಗೂಡನ್ನು ಬಿಡಿಸಿ ತೋಟದಲ್ಲಿರುವ ರೇಷ್ಮೆ ಮನೆಯಲ್ಲಿ ಇಟ್ಟಿದ್ದರು.

ಬೆಳಗ್ಗೆ ಬಂದು ನೋಡುವಷ್ಟರಲ್ಲಿ ರೇಷ್ಮೆ ಗೂಡು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ರೇಷ್ಮೆ ಬೆಳೆ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಈ ಸಂಬಂಧ ಸಾತನೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಠಾಣೆಯ ಪಿಎಸ್‌ಐ ರವಿಕುಮಾರ್‌ ಸ್ಥಳ ಮಹಜರು ಮಾಡಿ ಸ್ಥಳೀಯ ಗ್ರಾಪಂನಲ್ಲಿ ಅಳವಡಿಸಿರುವ ಸಿಸಿ ಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.