ಜಿಲ್ಲೆಯಲ್ಲಿ ಸಂಭ್ರಮದ ರಥ ಸಪ್ತಮಿ ಆಚರಣೆ


Team Udayavani, Feb 13, 2019, 7:28 AM IST

jilley.jpg

ಮಾಗಡಿ (ಕುದೂರು): ರಥಸಪ್ತಮಿ ಪ್ರಯುಕ್ತ ಇತಿಹಾಸ ಪ್ರಸಿದ್ಧ ಸೋಮೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯಿಂದ ನಡೆಯಿತು. ನಾಡಪ್ರಭು ಕೆಂಪೇಗೌಡರು ನಿರ್ಮಿಸಿರುವ ಈ ದೇಗುಲದಲ್ಲಿ ರಥೋತ್ಸವದ ಪ್ರಯುಕ್ತ ಬೆಳಗ್ಗೆಯಿಂದ ಸ್ವಾಮಿಗೆ ಪಂಚಾಮೃತ ಅಭಿಷೇಕ, ಹೋಮ- ಹವನ, ಹೂವಿನ ಅಲಂಕಾರ ಏರ್ಪಡಿಸಲಾಗಿತ್ತು.

ಮಧ್ಯಾಹ್ನ 12.45ಕ್ಕೆ ಶಾಸಕ ಎ.ಮಂಜು ಹಾಗೂ ತಹಶೀಲ್ದಾರ್‌ ರಮೇಶ್‌ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ಸೋಮೇಶ್ವರ ಸ್ವಾಮಿ ರಥ ಎಳೆಯುತ್ತಿದ್ದಂತೆ. ಭಕ್ತರು ಹೂವು, ಹಣ್ಣು ದವನ ಎಸೆಯುವ ಮೂಲಕ ದೇವರಿಗೆ ಹರಕೆ ತೀರಿಸಿದರು.

ದೇಗುಲ ಸಮಗ್ರ ಅಭಿವೃದ್ಧಿ: ಶಾಸಕ ಎ.ಮಂಜು ಮಾತನಾಡಿ, ನಾಡಪ್ರಭು ಕೆಂಪೇಗೌಡರು ನಿರ್ಮಿಸಿರುವ ಐತಿಹಾಸಿಕ ದೇವಸ್ಥಾನ ಜೀರ್ಣೋದ್ಧಾರವಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಸಿದ್ಧಿ ಪಡೆಯುತ್ತಿದೆ. ದೇವಾಲಯದ ಮೂಲೆಯಲ್ಲಿನ ಗೋಪುರವನ್ನು ಕಳ್ಳರು ನಿಧಿಯಾಸೆಗೆ ಕೆಡವಿದ್ದು, ಅದನ್ನು ಸದ್ಯದಲ್ಲಿಯೇ ದುರಸ್ತಿ ಮಾಡಿಸಿ ಇನ್ನೊಂದು ವರ್ಷದಲ್ಲಿ ದೇವಾಲಯದ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥನೆ: ಸೋಮೇಶ್ವರ ದೇವಾಲಯ ಸೇರಿದಂತೆ ಪಟ್ಟಣದ ಎಲ್ಲೆಡೆ 55 ಲಕ್ಷ ರೂ. ವೆಚ್ಚದಲ್ಲಿ ಶಾಸಕರ ಅನುದಾನದಡಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ದೇವರು ಆಯಸ್ಸು, ಅರೋಗ್ಯ ಸೇರಿದಂತೆ ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರು ನೆಮ್ಮದಿಯಿಂದ ಜೀವನ ನಡೆಸಲು, ಕ್ಷೇತ್ರದ ಸಮಗ್ರ ಅಭಿವೃದ್ಧಿ, ಶೈಕ್ಷಣಿಕ ಅಭಿವೃದ್ಧಿ ಅಧ್ಯಾತ್ಮಿಕ, ಸಾಮಾಜಿಕ ಧಾರ್ಮಿಕ, ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ. ತಾಲೂಕಿನಲ್ಲಿ ನೀರಾವರಿ ಯೋಜನೆಗಳು ಶೀಘ್ರವೇ ಪೂರ್ಣಗೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ಪ್ರವಾಸಿ ತಾಣ: ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಮಾತನಾಡಿ, ಕೆಂಪೇಗೌಡರ ಕಾಲದ ಸೋಮೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಯಾರೂ ಹಸಿವಿನಿಂದ ಹೋಗಬಾರದೆಂದು ಹಲವಾರು ಸಮುದಾಯದವರು ಅನ್ನಸಂತರ್ಪಣೆ ಏರ್ಪಡಿಸಿಕೊಂಡು ಬರುತ್ತಿದ್ದು, ಈ ದೇಗುಲವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ವಿವರಿಸಿದರು.

ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಮಾತನಾಡಿ, ತಿರುಮಲೆ ರಂಗನಾಥ ಸ್ವಾಮಿ ಮತ್ತು ಸೋಮೇಶ್ವರ ಸ್ವಾಮಿ ತಾಲೂಕಿನ ಪ್ರಮುಖ ದೇವಾಲಯಗಳು. ಕೆಂಪೇಗೌಡರು ಸುಂದರವಾಗಿ ಸೋಮೇಶ್ವರ ದೇವಾಲಯವನ್ನು ನಿರ್ಮಿಸಿದ್ದಾರೆ. ದೇಗುಲದ ಅಭಿವೃದ್ಧಿಗಾಗಿ ಪ್ರಾಧಿಕಾರದಿಂದ ಒತ್ತು ನೀಡಲಾಗುವುದು ಎಂದು ಹೇಳಿದರು.

ಅರವಟಿಗೆ: ಪ್ರತಿ ವರ್ಷದಂತೆ ಬ್ರಹ್ಮ ರಥೋತ್ಸವದಲ್ಲಿ ವಿವಿಧ ಸಮಾಜ ದವರಿಂದ ಅರವಟಿಗೆ ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರಿಗೆ ಕೂಸಂಬರಿ, ಮಜ್ಜಿಗೆ, ಪಾನಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು,

ತಹಶೀಲ್ದಾರ್‌ ರಮೇಶ್‌, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ, ಜಿಪಂ ಸದಸ್ಯ ಎಚ್.ಎನ್‌.ಅಶೋಕ್‌, ತಾಪಂ ಸದಸ್ಯ ನಾರಾಯಣ್‌, ಪುರಭೆ ಸದಸ್ಯ ಎಂ.ಎನ್‌.ಮಂಜುನಾಥ್‌, ಮಹೇಶ್‌, ಕೆ.ವಿ.ಬಾಲರಘು, ಹೊಂಬಮ್ಮ, ನರಸಿಂಹಮೂರ್ತಿ, ಶಿರಸ್ತೇದಾರ್‌ ಜಗದೀಶ್‌, ಪುರಸಭಾ ಮಾಜಿ ಅಧ್ಯಕ್ಷ ಪುರುಶೋತ್ತಮ್‌, ತಾಪಂ ಮಾಜಿ ಸದಸ್ಯ ಜಯರಾಂ, ಆನಂದ್‌, ಜಯಕರ್ನಾಟಕ ಅಧ್ಯಕ್ಷ ಕುಮಾರ್‌, ಹೊಸಹಳ್ಳಿ ಶಿವರಾಜು, ನಟರಾಜು, ಅರ್ವಕ ಗೋಪಾಲದೀಕ್ಷಿತ್‌, ಕಿರಣ್‌ ದೀಕ್ಷಿತ್‌ ಆಗಮಿಸಿದ್ದರು.

ಭಕ್ತ ಸಾಗರದ ಮಧ್ಯೆ ವೀರಭದ್ರಸ್ವಾಮಿ ರಥೋತ್ಸವ
ಕುದೂರು:
ಸೂರ್ಯ ಪಥ ಬದಲಾಯಿಸುವ ರಥ ಸಪ್ತಮಿಯ ದಿನವನ್ನು ಭಾವನಾತ್ಮಕವಾಗಿ ಸ್ವೀಕರಿಸುವ ಭಾರತೀಯರಿಗೆ ಪುಣ್ಯದ ದಿನ. ಜಗತ್ತಿನ ಒಳಿತಿಗೆ ಕತ್ತಲು ಕಡಿಮೆ ಮಾಡಿ, ಬೆಳಕು ಹೆಚ್ಚು ಮಾಡುವ ದಿನವಿದು.ಅದಕ್ಕಾಗಿಯೇ ಸೂರ್ಯ ರಥವೇರಿದ್ದಾನೆ ಎಂಬ ನಂಬಿಕೆ ಜನರಲ್ಲಿದೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು.

ಸೋಲೂರು ಹೋಬಳಿಯ ತಟ್ಟೆಕೆರೆ ಬಿಳಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ರಥ ಸಪ್ತಮಿ ಪ್ರಯುಕ್ತ ಏರ್ಪಡಿಸಿದ್ದ ಜಾತ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತ್ರೆ ದಿನ ಎಲ್ಲಾ ಜನರು ಒಂದೆಡೆ ಸೇರಿ ಸಂಭ್ರಮಿಸುವ ವಾತಾವರಣ ಆನಂದವನ್ನುಂಟು ಮಾಡುತ್ತದೆ. ಮನಸ್ಸುಗಳನ್ನು ಒಂದಾಗಿಸುವ ಹಬ್ಬ ಮತ್ತು ಜಾತ್ರೆಗಳು ನಮ್ಮ ನಾಡಿನ ಸಂಸ್ಕೃತಿಯಾಗಿವೆ. ಇವನ್ನು ಜತನದಿಂದ ಆಧುನಿಕತೆಯ ಅಬ್ಬರದಲ್ಲೂ ಜಾನಪದದ ಸೊಗಡನ್ನು ಉಳಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ದೇಗುಲದ ಪ್ರಾಂಗಣ ಭಕ್ತರ ಆಕರ್ಷಣೆ: ಇಲ್ಲಿನ ರಂಗನಾಥ ಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷ ರಥಸಪ್ತಮಿ ದಿವಸ ವಿಶೇಷ ಜಾತ್ರಾ ಮಹೋತ್ಸವನ್ನು ಹಾಗೂ ರಥೋತ್ಸವವನ್ನು ಏರ್ಪಡಿಸಿಕೊಂಡು ಬರಲಾಗುತ್ತಿದೆ. ದೇವಾಲ ಯದ ಎದುರಿನ ಕಲ್ಯಾಣಿ ದೇವಾಲಯದ ಪ್ರಾಂಗಣದ ಸೂಬಗನು ಹೆಚ್ಚಿಸಿದೆ. ದೇವಾಲಯದಲ್ಲಿರುವ ರಾಮಾನುಜಾಚಾರ್ಯರ ಪ್ರತಿಮೆ, ಗರುಡ ದೇವರ ಪ್ರತಿಮೆ, ಲಕ್ಷ್ಮೀದೇವರ ಪ್ರತಿಮೆಗಳು ಜನಮನಸೂರೆಗೊಳ್ಳುತ್ತವೆ. ಅಲ್ಲದೆ ದೂರ್ವಾಸ ಮುನಿಯು ತಪ್ಪಸ್ಸು ಮಾಡಿದರು ಎಂಬ ಪ್ರತೀತಿಯು ಇದೆ ಎಂದು ಹೇಳಿದರು.

ಸಂಭ್ರಮದ ಆಚರಣೆ: ಅರ್ಚಕ ರಂಗಸ್ವಾಮಿ ಮಾತನಾಡಿ, ಭಾರತೀಯ ಹಬ್ಬಗಳು ಜಾತ್ರೆಗಳಂತೆ ಆಚರಿಸುತ್ತೇವೆ ಎನ್ನುವುದಕ್ಕೆ ರಥಸಪ್ತಮಿ ದಿನ ಸಾವಿರಾರು ಜನರು ಒಂದೆಡೆ ಸೇರಿ ಜಾತ್ರೆಯನ್ನು ಆಚರಿಸಿ ಸಂಭ್ರಮ ಪಡುತ್ತಿರುವುದೇ ಅದಕ್ಕೆ ಸಾಕ್ಷಿ ಎಂದು ತಿಳಿಸಿದರು.

ದೇವಾಲಯ ಟ್ರಸ್ಟ್‌ನ ಅಧ್ಯಕ್ಷ ಗೋವಿಂದರಾಜು ಮಾತನಾಡಿ. ದೇವಾಲಯಗಳಲ್ಲಿ ಮಂಗಳ ಕಾರ್ಯ ನೆಡೆಯುವುದು ಲೋಕ ಕಲ್ಯಾಣಾರ್ಥವಾಗಿ. ಇಲ್ಲಿ ಜಾತಿ ಧರ್ಮ ಭೇದವಿಲ್ಲದೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಬೆಟ್ಟದ ಮೇಲಿನ ಶಾಂತ ವಾತಾವರಣದಲ್ಲಿರುವ ಈ ದೇವಾಲಯದ ಸೌಂದರ್ಯ ಕಾಪಾಡ ಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ದೇಗುಲ ಕಾರ್ಯದರ್ಶಿ ಶ್ರೀನಿವಾಸ್‌, ಗೂರೂರು ಶ್ರೀನಿವಾಸ್‌, ಸಾವಿರಾರು ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.