ಭತ್ತ ಖರೀದಿ ನಿಯಮ ಬದಲಿಸಲು ರೈತರ ಆಗ್ರಹ

ಐದು ಎಕರೆ ಮೇಲ್ಪಟ್ಟು ಜಮೀನು ಹೊಂದಿದ ರೈತರಿಂದ ಭತ್ತ ಕೊಳ್ಳದ ಆಹಾರ ಸರಬರಾಜು ನಿಗಮ

Team Udayavani, Feb 20, 2020, 4:09 PM IST

20-February-21

ಚನ್ನಪಟ್ಟಣ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲು ಸಣ್ಣ ಅತಿಸಣ್ಣ ಹಾಗೂ ದೊಡ್ಡ ರೈತರೆಂಬ ನಿಯಮ ರೂಪಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕ್ರಮಕ್ಕೆ ಜಿಲ್ಲೆಯ ರೈತರಿಂದ ವಿರೋಧ ವ್ಯಕ್ತವಾಗಿದ್ದು, ಕೂಡಲೇ ನಿಯಮ ತೆಗೆದು ಹಾಕಿ ಎಲ್ಲರಿಂದಲೂ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವಂತೆ ರೈತರು ಆಗ್ರಹಪಡಿಸಿದ್ದಾರೆ.

ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡುತ್ತಿರುವುದು ಸ್ವಾಗತಾರ್ಹ. ಆದರೆ ನಿಗಮದ ನಿಯಮ ಒಪ್ಪು ಸಾಧ್ಯವಿಲ್ಲ. ರೈತರಿಗೆ ನಷ್ಟವಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿ ಮಾಡುತ್ತಿದೆ. ಅದರಲ್ಲಿ ಸಣ್ಣ, ದೊಡ್ಡ ರೈತರೆಂಬ ಬೇಧ ಏತಕ್ಕೆ ಎಂದು ರೈತರು ಪ್ರಶ್ನಿಸಿದ್ದಾರೆ. ಐದು ಎಕರೆ ಜಮೀನು ಹೊಂದಿರುವ ರೈತರು ದೊಡ್ಡ ರೈತರೆಂದು ಯಾವ ಮಾನದಂಡದ ಮೂಲಕ ಅಳೆಯಲಾಗುತ್ತದೆ. ಇದನ್ನು ಸರ್ಕಾರ ನಿಲ್ಲಿಸಲಿ ಎಂದು ಕಿಡಿಕಾರಿದ್ದಾರೆ.

ಕೆಲವು ರೈತರು ಐದು ಎಕರೆಗಿಂತ ಹೆಚ್ಚಿನ ಜಮೀನು ಹೊಂದಿದ್ದರೂ ಮೂರು, ನಾಲ್ಕು ಎಕರೆ ಪ್ರದೇಶದಲ್ಲಿ ಭತ್ತ ಬೆಳೆದಿರುತ್ತಾರೆ. ನಾಲ್ಕು ಎಕರೆಗೆ ಕನಿಷ್ಠ 40 ಕ್ವಿಂಟಲ್‌ ಭತ್ತ ಖರೀದಿಸುವ ನಿಯಮವನ್ನು ನಿಗಮ ರೂಪಿಸಿದೆ. ದೊಡ್ಡ ರೈತರೆಂಬ ಅವೈಜ್ಞಾನಿಕ ನಿರ್ಧಾರದಿಂದ ರೈತರು ವಂಚಿತರಾಗುತ್ತಿದ್ದಾರೆ.

ಸರ್ಕಾರ ಕೂಡಲೇ ಇದನ್ನು ಸರಿಪಡಿಸಬೇಕೆನ್ನುವ ಆಗ್ರಹ ವ್ಯಕ್ತವಾಗಿದೆ. ಸಂಕಷ್ಟದಿಂದ ಪಾರು ಮಾಡಲಿ: ಸಣ್ಣ ಮತ್ತು ದೊಡ್ಡ ರೈತರೆನ್ನುವ ಬೇಧವನ್ನು ನಿಗಮ ಮಾಡುತ್ತಿರುವುದು ಸರಿಯಲ್ಲ. ಎಲ್ಲ ರೈತರೂ ಒಂದೇ ರೀತಿಯಲ್ಲಿ ಬೆಳೆ ಬೆಳೆದಿರುತ್ತಾರೆ. ಎಲ್ಲರಿಗೂ ನಷ್ಟವಾಗುತ್ತದೆ. ಅದು ಕೇವಲ ಸಣ್ಣ, ಅತಿಸಣ್ಣ ರೈತರಿಗೆ ಮಾತ್ರವಲ್ಲ. ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿದ್ದರೆ, ಎಲ್ಲ ಜಮೀನಿನಲ್ಲೂ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ. ಇದನ್ನು ಸರ್ಕಾರ ತಿಳಿದುಕೊಂಡು ನಿಗಮಕ್ಕೆ ಸೂಚನೆ ನೀಡಿ ಭತ್ತ ಖರೀದಿ ಮಾಡಿ ರೈತರನ್ನು ಸಂಕಷ್ಟದಿಂದ ಪಾರುಮಾಡಲಿ ಎಂದು ರೈತರು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗೂ ಮನವಿ: ಸಣ್ಣ, ದೊಡ್ಡ ರೈತರೆಂಬ ಬೇಧ ಮಾಡದೆ ನಿಗಧಿಪಡಿಸಿರುವಷ್ಟು ಭತ್ತವನ್ನು ಎಲ್ಲ ರೈತರಿಂದ ಖರೀದಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ರೈತರು ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಾಲ್ಕು ಎಕರೆಯಲ್ಲಿ ಬತ್ತ ಬೆಳೆದಿದ್ದರೂ, ಅರ್ಹರಲ್ಲ ಎಂದು ನಮ್ಮ ಅರ್ಜಿ ತಿರಸ್ಕರಿಸಲಾಗಿದೆ. ಇದ್ಯಾವ ನ್ಯಾಯ ಎಂದು ಅಳಲು ತೋಡಿಕೊಂಡಿದ್ದಾರೆ.

ಎಷ್ಟೇ ಜಮೀನು ಇದ್ದರೂ ರೈತರು ಇಂದು ಬೆಳೆಗೆ ತಕ್ಕ ಬೆಲೆ ಇಲ್ಲದೆ ನಷ್ಟದ ಹಾದಿ ತುಳಿದು ಕೊನೆಗೆ ಆತ್ಮಹತ್ಯೆ ನಿರ್ಧಾರದತ್ತ ಹೊರಟಿರುವುದು ಸರ್ಕಾರಕ್ಕೆ ತಿಳಿದೇ ಇದೆ. ಈ ರೀತಿ ನಿಯಮಗಳನ್ನು ಹೇರಿ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡದೆ ಎಲ್ಲ ರೈತರು ಬೆಳೆದಿರುವ ಭತ್ತ ನಿಗದಿಪಡಿಸಿರುವ ಪ್ರಮಾಣದಲ್ಲಿ ಖರೀದಿ ಮಾಡಿ ಅವರ ಜೀವನಕ್ಕೆ ನೆರವಾಗಬೇಕಿದೆ.

ನಾಲ್ಕು ಎಕರೆ ಪ್ರದೇಶದಲ್ಲಿ ಭತ್ತ ಬೆಳೆದಿದ್ದು, ಬೆಂಬಲ ಬೆಲೆಯಡಿ
ಖರೀದಿ ಮಾಡಲು ಅರ್ಜಿ ಸಲ್ಲಿಸಿದರೆ, ನೀವು ದೊಡ್ಡ ರೈತರು ಎನ್ನುವ ಕಾರಣ ನೀಡಿ ತಿರಸ್ಕರಿಸಲಾಗಿದೆ. ಐದು ಎಕರೆ ಜಮೀನು ಇದ್ದರೂ ಭತ್ತ ಬೆಳೆದಿರುವುದು ಕೇವಲ ನಾಲ್ಕು ಎಕರೆ ಪ್ರದೇಶದಲ್ಲಿ. ಆಹಾರ ನಿಗಮ ಇಂಥಹ ಅವೈಜ್ಞಾನಿಕ ನಿಯಮ ಹೇರುವ ಮೂಲಕ ರೈತರಿಗೆ ಮೋಸ ಮಾಡುತ್ತಿದೆ.
ಸುಧಾಕರ್‌, ರೈತ, ಚಕ್ಕಲೂರು.

ಕೃಷಿ ಇಲಾಖೆಯಲ್ಲಿ ಈಗಾಗಲೇ ರೈತರ ಜಮೀನಿನ ಬಗ್ಗೆ ದತ್ತಾಂಶ ದಾಖಲಾಗಿದೆ. ಆ ಮಾಹಿತಿ ಆಧಾರದ ಮೇಲೆ ಅರ್ಜಿ ಸಲ್ಲಿಸಿರುವ ರೈತರ ವಿವರ ಪಡೆದು ಖರೀದಿ ಮಾಡುತ್ತಿದ್ದೇವೆ. ಐದು ಎಕರೆ ಮೇಲ್ಪಟ್ಟ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಬಹುದೆನ್ನುವ ನಿಯಮ ಬಂದರೆ ಖರೀದಿ ಮಾಡುತ್ತೇವೆ.
ಕೃಷ್ಣಕುಮಾರ್‌, ಉಪನಿರ್ದೇಶಕರು, ಆಹಾರ
ಮತ್ತು ನಾಗರೀಕ ಸರಬರಾಜು ನಿಗಮ.

ಎಂ.ಶಿವಮಾದು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.