ವಿರುಪಾಕ್ಷಿಪುರದಲ್ಲಿ ಮಹಾಲಕ್ಷ್ಮೀ ದೇವಾಲಯ ನಿರ್ಮಾಣಕ್ಕೆ ಸಿದ್ಧತೆ


Team Udayavani, Jan 30, 2020, 5:08 PM IST

30-January-25

ಚನ್ನಪಟ್ಟಣ: ಜಿಲ್ಲೆಯಲ್ಲಿಯೇ ವಿಶೇಷವಾದ 35 ಅಡಿ ಎತ್ತರದ ಬೃಹತ್‌ ಶಿವನ ಮೂರ್ತಿ ಸ್ಥಾಪನೆ, ಮಹಾ ಲಕ್ಷ್ಮೀ ದೇವಾಲಯ ನಿರ್ಮಾಣ ಹಾಗೂ ಭಕ್ತಾಧಿಗಳಿಗೆ ಪ್ರತಿ ನಿತ್ಯ ಅನ್ನದಾಸೋಹ ಕಲ್ಪಿಸುವ ಬಯಕೆ ಹೊಂದಿರುವುದಾಗಿ ನಾಗಾ ಬಾಬಾ ಪೂರಿ ಪರಂಪರೆಯ ಶ್ರೀಶಿವಾನಂದ ಆವಧೂತ ಸ್ವಾಮೀಜಿ ತಿಳಿಸಿದರು.

ವಿರುಪಾಕ್ಷಿಪುರ ಗ್ರಾಮದ ಹೊರ ವಲಯದಲ್ಲಿನ ಚನ್ನಪ್ಪಾಜಿ ದೇವಾಲಯದಲ್ಲಿ ಮಾತನಾಡಿ ಅವರು, ದೇವಾಲಯ ನಿರ್ಮಾಣಕ್ಕೆ ಕಾಯ್ದಿರಿಸಿದ ಸ್ಥಳದಲ್ಲಿ ಸದ್ಯದಲ್ಲಿಯೇ ಭಕ್ತರ ಸಹಕಾರದೊಂದಿಗೆ ಮಹಾಲಕ್ಷ್ಮೀ ದೇವಾಲಯದ ಕಟ್ಟಡ ನಿರ್ಮಾಣ ಕೆಲಸ ಪ್ರಾರಂಭವಾಗಿದ್ದು, ಹಂತ ಹಂತವಾಗಿ ದೇವಾಲಯದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಸಂದರ ಪರಿಸರದಲ್ಲಿ ಅದರಲ್ಲೂ ಅರಣ್ಯ ಪ್ರದೇಶದ ಬಸವನ ಬೆಟ್ಟದ ತಪ್ಪಲಿನಲ್ಲಿರುವ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಾಲಕ್ಷ್ಮೀ ದೇವಾಲಯದ ಪಕ್ಕದಲ್ಲಿಯೇ ಶಿವನ ಬೃಹತ್‌ ಪ್ರತಿಮೆ ಸ್ಥಾಪನೆ ಮಾಡಲಾಗುತ್ತಿದ್ದು, ದೇವಾಲಯ ಹಾಗೂ ಶಿವನ ಪ್ರತಿಮೆ ಸ್ಥಾಪನೆಗೆ ಭಕ್ತಾಧಿಗಳ ಸಂಪೂರ್ಣ ಸಹಕಾರ ಅವಶ್ಯಕವಾಗಿದೆ ಎಂದರು.

ನಾಗಬಾಬಾ ಪರಂಪರೆಯನ್ನು ಹೊಂದಿರುವ ನಾಗಾ ಸಾಧುಗಳ
ಧೀಕ್ಷೆಯನ್ನು ಪಡೆದಿರುವುದಾಗಿ ತಿಳಿಸಿದ ಅವರು, ಹಲವಾರು ವರ್ಷಗಳ ಹಿಂದೆಯೇ ಹೃಷಿಕೇಶದ ವಿಶ್ವಚೇತನ ಆಶ್ರಮದಲ್ಲಿ ಲಕ್ಷ್ಮಣ ಶೀಲ, ಭೀಮ ಶೀಲ ಆಶ್ರಮದಲ್ಲಿ 125ರಿಂದ 150 ವರ್ಷಗಳ ನಾಗಾ ಸಾಧುಸಂತರ ಸೇವೆ ಮಾಡಿ ಸಿದ್ಧಿ ಪಡೆದಿದ್ದೇನೆ. ಹರಿಯಾಣದ ಗುರುಮಾತೆಯಾದ ರಾಜೇ ಶ್ವರಿ ಅವರ ಆಶೀರ್ವಾದದಲ್ಲಿ ಹಲವಾರು ರೀತಿಯ ಸಿದ್ಧಿ ಪಡೆದಿರುವುದಾಗಿ ತಿಳಿಸಿದರು.

ಗ್ರಾಮದ ಜನತೆಯ ಸಂಪೂರ್ಣ ಸಹಕಾರದೊಂದಿಗೆ ಚನ್ನಪ್ಪಸ್ವಾಮಿಯ ಗದ್ದುಗೆಯ ಬಳಿ ಇರುವ ರಾಮಯ್ಯನ ಕೆರೆಯ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯ, ಶಿವನ ಪ್ರತಿಮೆ ಹಾಗೂ ಅನ್ನದಾಸೋಹ ಭವನ ಬಹುವರ್ಷಗಳ ಕನಸಾಗಿದೆ ಎಂದರು.

ಪ್ರತಿ ನಿತ್ಯ ಜಂಜಾಟದಲ್ಲಿ ಸಿಲುಕುವ ಮನುಷ್ಯನಿಗೆ ನೆಮ್ಮದಿ ನೀಡುವ ದೇವಾಲಯಗಳು ಆತನ ಆರೋಗ್ಯದ ಮೇಲೂ ಗುಣಮಟ್ಟದ ಪರಿಣಾಮ ಬೀರುತ್ತಿವೆ ಎಂಬುದು ವಾಸ್ತವವಾಗಿದೆ ಎಂದು ತಿಳಿಸಿದರು. ಭಕ್ತರು ದೇವಾಲಯ, ಶಿವನ ಬೃಹತ್‌ ಪ್ರತಿಮೆ ಹಾಗೂ ಅನ್ನದಾಸೋಹ ಭವನಕ್ಕೆ ವಿವಿಧ ರೂಪದಲ್ಲಿ ಸಹಕಾರ ನೀಡುವಂತೆ ಸ್ವಾಮಿಗಳು ಮನವಿ ಮಾಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.