ಮಕ್ಕಳ ಶಾಲಾ ಬ್ಯಾಗ್ ತೂಕ ನಿಗದಿಗೆ ಆದೇಶ

1, 2ನೇ ತರಗತಿ ಮಕ್ಕಳ ಬ್ಯಾಗ್‌ ತೂಕ 2 ಕೆ.ಜಿ. ಇರಲಿ ,ಪ್ರತಿ ತಿಂಗಳ 3ನೇ ಶನಿವಾರ ಬ್ಯಾಗ್‌ ರಹಿತ ದಿನ

Team Udayavani, May 5, 2019, 12:51 PM IST

ramanagar-tdy-1..

ರಾಮನಗರ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದೇಹದ ಸರಾಸರಿ ತೂಕದ ಶೇ.10ರಷ್ಟು ಮೀರದಂತೆ ಶಾಲಾ ಬ್ಯಾಗಿನ ತೂಕ ಇರಬೇಕು ಎಂದು ಸರ್ಕಾರ ಆದೇಶ ನೀಡಿದೆ. ಜೊತೆಗೆ 1 ಮತ್ತು 2ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡದಂತೆ ಆದೇಶಿಸಿದೆ.

ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ ಹೊರೆ ತಗ್ಗಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸರ್ಕಾರ ದಿನಾಂಕ 3.5.19ರಂದು ತನ್ನ ಆದೇಶದಲ್ಲಿ 2019-20ನೇ ಸಾಲಿನಲ್ಲಿ ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ ಹೊರ ಕಡಿಮೆ ಮಾಡಲು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದೆ.

ಯಾವ ತರಗತಿಗೆ ಎಷ್ಟು ತೂಕ?: 1 ಮತ್ತು 2ನೇ ತರಗತಿ ವಿದ್ಯಾರ್ಥಿಗಳ ತೂಕ 1.5ರಿಂದ 2 ಕೆ.ಜಿ. ಮೀರುವಂತಿಲ್ಲ. 3ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 2ರಿಂದ 3 ಕೆ.ಜಿ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳ ಬ್ಯಾಗಿನ ತೂಕ 3ರಿಂದ 4 ಕೆ.ಜಿ, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗಿನ ತೂಕ 4ರಿಂದ 5 ಕೆ.ಜಿ. ಇರಬೇಕು ಎಂದು ಸರ್ಕಾರ ಸೂಚಿಸಿದೆ.

ಅತಿಯಾದ ಹೊರೆಯಿರುವ ಶಾಲಾ ಬ್ಯಾಗಿನಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು. ಕಡಿಮೆ ಖರ್ಚಿನ, ಹಗುರವಾಗಿರುವ ಹಾಗೂ ದೀರ್ಘ‌ಕಾಲ ಬಾಳಿಕೆ ಬರುವಂತಹ ಶಾಲಾ ಬ್ಯಾಗ್‌ ಹಾಗೂ ಇನ್ನಿತರ ಲೇಖನ ಸಾಮಗ್ರಿಗಳನ್ನು ಬಳಸುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತೆಯೂ ಸರ್ಕಾರ ತನ್ನ ಆದೇಶದಲ್ಲಿ ಸೂಚಿಸಿದೆ.

ಶಾಲೆಗಳಲ್ಲಿ ಅವಶ್ಯ ಸಾಮಗ್ರಿ ವ್ಯವಸ್ಥೆ: ಶಾಲೆಗಳ ಗ್ರಂಥಾಲಯಗಳಲ್ಲಿ ಸಮಾನಾರ್ಥಕ ಪದಕೋಶ, ಅಟ್ಲಾಸ್‌, ಜ್ಞಾನ- ವಿಜ್ಞಾನ ಕೋಶಗಳಂತಹ ಪರಾಮರ್ಶನ ಸಾಮಗ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗುವಂತೆ ಮತ್ತು ಮಕ್ಕಳು ಇವುಗಳನ್ನು ಅವಶ್ಯಕತೆ ಇದ್ದಾಗ ಬಳಸಿಕೊಳ್ಳಲು ಶಾಲೆಗಳಲ್ಲಿ ವ್ಯವಸ್ಥೆ ಮಾಡಬೇಕು. ಅಭ್ಯಾಸ ಚಟುವಟಿಕೆಗಳನ್ನು ಶಾಲೆಗಳಲ್ಲಿ ಮಾಡಿಸಿ ಫೈಲ್ ಮಾಡಿಸುವುದು, ಅವಶ್ಯಕತೆ ಇದ್ದಾಗ ಪರಾಮರ್ಶಿಸಲು ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡಬೇಕು.

ವಿದ್ಯಾರ್ಥಿಯು ಮನೆಯಿಂದ ಶಾಲೆಗೆ, ಶಾಲೆಯಿಂದ ಮನೆಗೆ ತೆಗೆದುಕೊಂಡು ಹೋಗುವ ಪಠ್ಯ ಪುಸ್ತಕಗಳು, ನೋಟ್ ಪುಸ್ತಕಗಳು, ಲೇಖನ ಸಾಮಗ್ರಿಗಳು, ಕಲಿಕಾ ಉಪಕರಣಗಳು ಹಾಗೂ ಇನ್ನಿತರ ವಸ್ತುಗಳನ್ನು ತರಗತಿಯೊಳಗೆ ಶೇಖರಿಸಲು ಅನುಕೂಲ ಮಾಡಿಕೊಂಡಬೇಕು ಎಂದು ಸೂಚಿಸಿರುವ ಸರ್ಕಾರ, ಎಲ್ಲಾ ಶಾಲೆಗಳಲ್ಲೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೈಗೊಳ್ಳುವುದರಿಂದ ಮಕ್ಕಳು ಮನೆಯಿಂದ ನೀರು ತರುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟಿದೆ. ನೋಟ್ ಪುಸ್ತಕಗಳ ಹಾಳೆಗಳ ಬಗ್ಗೆಯೂ ಸರ್ಕಾರ ನಿಗಾವಹಿಸಿದ್ದು, 100 ಹಾಳೆಗಳು ಮೀರಬಾರದು. ಅಲ್ಲದೆ, ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್‌ ರಹಿತ ದಿನ’ವನ್ನಾಗಿ ಆಚರಿಸುವಂತೆಯೂ ಸಲಹೆ ನೀಡಿದೆ.

ಮೂಳೆ ತಜ್ಞರ ಅಭಿಪ್ರಾಯ ಪಡೆದಿದೆ: ಶಾಲಾ ಬ್ಯಾಗ್‌ನ ಹೊರೆ ತಗ್ಗಿಸುವ ಕುರಿತು ಡಿಸಿಆರ್‌ಟಿಯು ಸೆಂಟರ್‌ ಫಾರ್‌ ಚೈಲ್ಡ್ ಆಂಡ್‌ ಲಾ, ಎನ್‌ಎಲ್ಎಸ್‌ಯುಎಲ್, ಬೆಂಗಳೂ ಇವರ ಸಹೋಗದಲ್ಲಿ 2016-17ನೇ ಸಾಲಿನಲ್ಲಿ ಕೈಗೊಂಡ ಅಧ್ಯಯನದಲ್ಲಿ ತಜ್ಞರ ತಂಡಗಳು ಶಾಲೆಗಳಿಗೆ ಭೇಟಿ ನೀಡಿ ಪ್ರಶ್ನಾವಳಿಗಳ ಮೂಲಕ ಉತ್ತರಗಳ ಅಧ್ಯಯನ ನಡೆಸಿ ಮಾರ್ಗದರ್ಶಿ ನಿಯಮಗಳನ್ನು ರೂಪಿಸಲಾಗಿದೆ ಎಂದು ಸರ್ಕಾರ ತನ್ನ ಆದೇಶವನ್ನು ಸಮರ್ಥಿಸಿಕೊಂಡಿದೆ. ಮಕ್ಕಳ ದೇಹದ ತೂಕದ ಶೇ.10ರಿಂದ 15ರಷ್ಟು ತೂಕದ ಪಠ್ಯ ಪುಸ್ತಕಗಳನ್ನು ತೆಗೆದುಕೊಂಡ ಹೋಗಬಹುದು ಎಂದು ಮೂಳೆ ತಜ್ಞರ ಅಭಿಪ್ರಾಯವನ್ನು ಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.