ಸಿಎಂ ತವರಲ್ಲಿ ಕಸ, ಚರಂಡಿ ಸಮಸ್ಯೆಯೇ ಹೆಚ್ಚು


Team Udayavani, Mar 16, 2019, 7:36 AM IST

cm-tavar.jpg

ಚನ್ನಪಟ್ಟಣ: ಸಿಎಂ ತವರು ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಕಸ ವಿಲೇವಾರಿ ಮತ್ತು ಚರಂಡಿ ಸಮಸ್ಯೆಯೇ ಹೆಚ್ಚಾಗಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ ಸ್ವಚ್ಛತೆ ಇಲ್ಲದೇ ನಿವಾಸಿಗಳು ಸಾಂಕ್ರಾಮಿಕ ರೋಗದ ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ.

ನಗರಸಭೆ ಉಪಾಧ್ಯಕ್ಷರು ಗೆಲುವು ಸಾಧಿಸಿರುವ 17ನೇ ವಾರ್ಡ್‌ನಲ್ಲಿ ಚರಂಡಿ, ರಸ್ತೆ ಸಮಸ್ಯೆಗಳು ಸಾಮಾನ್ಯವಾಗಿದೆ. ಕೆಲವು ರಸ್ತೆಗಳು ಮಣ್ಣಿನ ರಸ್ತೆಗಳಾಗಿಯೇ ಇವೆ. ಇನ್ನೂ ಕೆಲವು ಯುಜಿಡಿ ಕಾಮಗಾರಿಯಿಂದಾಗಿ ಅಸ್ತಿತ್ವ ಕಳೆದುಕೊಂಡಿವೆ. ಕಾಂಕ್ರೀಟ್‌ ರಸ್ತೆಗಳಾಗಿರುವ ಕಡೆಗಳಲ್ಲಿ ಚರಂಡಿಗಳು ಅಲ್ಲಲ್ಲಿ ಮುಚ್ಚಿಕೊಂಡು ಕೊಳಚೆ ನೀರು ಹರಿಯಲಾಗದೆ ಅಲ್ಲೇ ನಿಂತು ಗಬ್ಬುನಾರುವ ಸ್ಥಿತಿ ಇದೆ.

ಚರಂಡಿಗಳಲ್ಲಿ ಹೂಳು ತುಂಬಿದೆ: ಮೂರ್ತಿಮಹಲ್‌ ರಸ್ತೆಯುದ್ದಕ್ಕೂ ಇರುವ ಚರಂಡಿಯಲ್ಲಿ ಸಮರ್ಪಕವಾಗಿ ಕೊಳಚೆ ನೀರು ಹರಿಯುತ್ತಿಲ್ಲ. ಚರಂಡಿಗೇ ಶೌಚದ ಸಂಪರ್ಕಕೊಟ್ಟಿರುವುದರಿಂದ ಗಬ್ಬುನಾರುತ್ತಿದೆ. ಇದರ ಜತೆಗೆ ಅಲ್ಲಿ ಸಾಲಾಗಿರುವ ಮಾಂಸದ ಅಂಗಡಿಗಳ ತ್ಯಾಜ್ಯ ತಿನ್ನಲು ಬರುವ ನಾಯಿಗಳ ಸಂಖ್ಯೆ ಇಲ್ಲಿ ಹೆಚ್ಚಾಗಿದೆ. ರಸ್ತೆಬದಿಯ ಎರಡೂ ಚರಂಡಿಯಲ್ಲಿ ಹೂಳು ತುಂಬಿಕೊಂಡಿವೆ. ಮೂರ್ತಿಮಹಲ್‌ನಿಂದ ನಿಂಬೇಹಣ್ಣು ಸರ್ಕಲ್‌ವರೆಗಿನ ರಸ್ತೆ, ಚಿತ್ತಾರಗೇರಿ, ಎಂ.ಜಿ.ರಸ್ತೆಯ ಅಡ್ಡರಸ್ತೆಗಳಲ್ಲಿನ ಚರಂಡಿಗಳ ಸ್ಥಿತಿಯೂ ಹೀಗೆಯೇ ಇದೆ. 

ರಸ್ತೆಬದಿಯಲ್ಲಿಯೇ ರಾಶಿ ಕಸ: ಇನ್ನೂ ವಾರ್ಡ್‌ಗಳಲ್ಲಿ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಅಲ್ಲಲ್ಲಿ ರಸ್ತೆಬದಿಯಲ್ಲಿಯೇ ಕಸವನ್ನು ರಾಶಿ ಹಾಕಲಾಗುತ್ತಿದೆ. ಸಮರ್ಪಕವಾಗಿ ವಿಲೇವಾರಿ ಮಾಡದ ಪರಿಣಾಮ ವಾಸನೆಯಿಂದ ನಿವಾಸಿಗಳು ನೆಮ್ಮದಿ ಬದುಕಿನಿಂದ ದೂರವೇ ಉಳಿದಿದ್ದಾರೆ. ಖಾಲಿ ನಿವೇಶನಗಳ ಬಳಿಯ ಚರಂಡಿಗಳು ಕಸದಿಂದ ತುಂಬಿದೆ. ಕೆಲ ವಾರ್ಡ್‌ನಲ್ಲಿ ಮಾಂಸದ ಅಂಗಡಿಗಳು ಸಾಕಷ್ಟಿದ್ದು, ಅವುಗಳನ್ನು ಮಾಂಸದ ಮಾರುಕಟ್ಟೆಗೆ ಸ್ಥಳಾಂತರ ಮಾಡಬೇಕಾದ ಅಗತ್ಯವಿದೆ. ಹಾಗಾದರೆ ಮಾತ್ರ ಸ್ವಚ್ಛತೆ ಕಾಪಾಡಿದಂತಾಗುತ್ತದೆ.

ನಗರದಲ್ಲಿ ಚರಂಡಿ ಸಮಸ್ಯೆಯನ್ನು ಸರಿಪಡಿಸಲಾಗುತ್ತಿದೆ. ಹೂಳು ಎತ್ತುವ ಕೆಲಸ ಪ್ರಗತಿಯಲ್ಲಿದೆ. ಹಾಗೆಯೇ ಅಡ್ಡರಸ್ತೆಗಳಲ್ಲಿ ಕಾಂಕ್ರೀಟ್‌ ಚರಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಚರಂಡಿ ಕಾಮಗಾರಿ ಮುಗಿದ ನಂತರ ರಸ್ತೆ ನಿರ್ಮಾಣ ಮಾಡಲಾಗುವುದು. ಈಗಾಗಲೇ ಟೆಂಡರ್‌ ಸಹ ಆಗಿ, ಕಾರ್ಯಾದೇಶ ಆಗಿದೆ. ಕಸದ ಸಮಸ್ಯೆ ವಾರದಿಂದೀಚೆಗೆ ಎದುರಾಗಿದೆ. ಈ ಹಿಂದೆ ಪ್ರತಿ ಎರಡು ದಿನಗಳಿಗೊಮ್ಮೆ ವಿಲೇವಾರಿ ಮಾಡಲಾಗುತ್ತಿತ್ತು. ಆದರೆ, ಸ್ಥಳದ ಅಭಾವದಿಂದ ಸಮಸ್ಯೆ ಬಂದಿದೆ. ಶೀಘ್ರ ಸರಿಪಡಿಸಲಾಗುವುದು.
-ಸರಳ ಸೋಮಶೇಖರ್‌, ಉಪಾಧ್ಯಕ್ಷರು, ನಗರಸಭೆ

ಚರಂಡಿಗಳಲ್ಲಿ ಹೂಳೆತ್ತಿಸಬೇಕಿದೆ. ಕೊಳಚೆ ನೀರು ನಿಂತು ಸಾಂಕ್ರಾಮಿಕ ರೋಗಗಳು ಬರುವ ಮುನ್ನ ಸಮಸ್ಯೆ ಸರಿಪಡಿಸಲು ಜನಪ್ರತಿನಿಧಿಗಳು ಹಾಗೂ ನಗರಸಭೆ ಅಧಿಕಾರಿಗಳು ಮುಂದಾಗಲಿ.
-ಸಿದ್ದಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ, ಚನ್ನಪಟ್ಟಣ
 
ಕಸ ವಿಲೇವಾರಿ ಸ್ಥಳದ ವಿವಾದ ಇರುವುದರಿಂದ ಸಮಸ್ಯೆ ಇದೆ. ಖಾಸಗಿ ಸ್ಥಳದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಪಟ್ಟಣದಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
-ಪುಟ್ಟಸ್ವಾಮಿ, ಪೌರಾಯುಕ್ತ

* ಎಂ.ಶಿವಮಾದು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.