ಚನ್ನಪಟ್ಟಣದಲ್ಲೂ ಸ್ಪರ್ಧೆ: ಕುಮಾರಸ್ವಾಮಿ


Team Udayavani, Apr 4, 2018, 4:21 PM IST

ram-1.jpg

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ
ಘೋಷಣೆ ಮಾಡುವ ಮೂಲಕ ರಾಜ್ಯದ ಜನತೆಯಲ್ಲಿ ಮೂಡಿದ್ದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಚನ್ನಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ಕುಮಾರಪರ್ವ ಸಮಾವೇಶದಲ್ಲಿ ಮಾತನಾಡಿ, ತಾವು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು. ಚನ್ನಪಟ್ಟಣದ
ಜನತೆಯ ಅಭಿಮಾನಕ್ಕೆ ತಲೆಬಾಗಿ ತಾವು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿದ್ದು, ತಮಗೆ ಆಶೀರ್ವಾದ ಮಾಡುವಂತೆ ಕೋರಿದರು.

ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯ ವಿಚಾರದಲ್ಲಿ ಗೊಂದಲುಗಳು ಉಂಟಾಗಿ ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಕಳೆದ
ಯುಗಾದಿಯಂದು ಎಚ್‌.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ತಾವೇ ಸ್ಪರ್ಧೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೂ ಕ್ಷೇತ್ರದ ಜನತೆಯಲ್ಲಿ ಹಾಗೂ ವಿರೋಧ ಪಕ್ಷದ ನಾಯಕರಲ್ಲಿ ಕುಮಾರಸ್ವಾಮಿ ಅವರು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಅನುಮಾನಗಳು ಗಾಳಿಸುದ್ದಿಯಂತೆ ಹರಡಿದ್ದವು.

ಕುಮಾರಪರ್ವದ ಯಶಸ್ಸಿನ ಹಿನ್ನೆಲೆ ಈ ಭರವಸೆ ನೀಡಿದ್ದಾರೆ ಎಂಬ ಗುಸುಗುಸುಗಳು ಕೇಳಿಬಂದಿದ್ದವು. ಆದರೆ ಇದೀಗ ಎಚ್‌ಡಿಕೆ ಸೇರಿದಂತೆ ಮಾಜಿ ಪ್ರಧಾನಿ ದೇವೇಗೌಡರೂ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದು, ಕ್ಷೇತ್ರದಲ್ಲಿನ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕುತೂಹಲ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸತತ ಒಂದು ಗಂಟೆಗಳ ಸುದೀರ್ಘ‌ ಭಾಷಣ ಮಾಡುತ್ತಾ ರಾಜ್ಯದ ರಾಜಕಾರಣ, ಜನತೆಯ ಸ್ಥಿತಿ ಗತಿಗಳ ಬಗ್ಗೆ ಹೇಳುತ್ತಾ ಮಧ್ಯ ಮಧ್ಯ ತಮ್ಮ ಅಂತಿಮ ಸ್ಪಷ್ಟನೆಯನ್ನು ತಿಳಿಸುವ ಇರಾದೆ ವ್ಯಕ್ತಪಡಿಸಿ ರಾಮನಗರ ಜಿಲ್ಲೆಯನ್ನು ಸ್ಮರಿಸಿದಂತೆಲ್ಲಾ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. ಅಭಿವೃದ್ಧಿಯ ಬಗ್ಗೆ ಮಾತನಾಡುವ ವೇಳೆ ಕಾರ್ಯಕರ್ತರು ಹರ್ಷಗೊಂಡರು.

ಹರ್ಷೋದ್ಘಾರ: ಸತತ ಒಂದು ಗಂಟೆಯ ಭಾಷಣದ ಬಳಿಕ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ತಾವು ಸ್ಪರ್ಧೆ ಮಾಡುತ್ತಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಸಮಯದ ಅಭಾವದಿಂದ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರಕ್ಕೆ ಬರುವುದು ಅಪರೂಪವಾಗಬಹುದು. ಈ ಹಿನ್ನೆಲೆಯಲ್ಲಿ ಪ್ರತಿ ಕಾರ್ಯಕರ್ತರೂ ತಾವೇ ಕುಮಾರಸ್ವಾಮಿ ಎಂದು ತಮ್ಮ ಪರ ಮತಯಾಚನೆ ಮಾಡುವಂತೆ ಮನವಿ ಮಾಡಿದರು. ಆಗ ಜನರ ಹರ್ಷೋದ್ಘಾರ ಮಾಡಿದರು.

ಮಂಗಳವಾರ ನಡೆದ ಕುಮಾರ ಪರ್ವ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಜನಸಾಗರವೇ ಹರಿದು ಬಂದಿತು. ವೇದಿಕೆ ಬಳಿ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರೆ, ಇತ್ತ ಕುಮಾರಸ್ವಾಮಿ ಅವರನ್ನು ತಾಲೂಕಿನ ಕೆಂಗಲ್‌ನಿಂದ ಕರೆತಂದ ಜನಸಾಗರವು ವೇದಿಕೆಗೆ ಬಂದ ಕ್ಷಣ ನಿಜಕ್ಕೂ ಜನಸಾಗರದಲ್ಲೇ ಸಮಾವೇಶ ತುಂಬಿತ್ತು. ಸಮಾವೇಶದಲ್ಲಿಯೂ 70 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು.

6 ಕಿ.ಮೀ. ಮೆರವಣಿಗೆ: ಬೆಳಗ್ಗೆ 11 ಗಂಟೆಗೆ ಆಯೋಜಿಸಿದ್ದ ಸಮಾವೇಶಕ್ಕೆ ತಾಲೂಕಿನ ಕೆಂಗಲ್‌ ಬಳಿ 12 ಗಂಟೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್‌ಡಿ.ಕುಮಾರಸ್ವಾಮಿ ಅವರು ಕೆಂಗಲ್‌ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಬೈಕ್‌ ರ್ಯಾಲಿಯೊಂದಿಗೆ ಮೆರವಣಿಗೆ ಹೊರಟರು. ಸತತ 6 ಕಿ.ಮೀ. ದೂರದ 4 ಗಂಟೆಗಳ ಮೆರವಣಿಗೆಯ ನಂತರ ಸಂಜೆ 4 ಗಂಟೆಗೆ ವೇದಿಕೆ ಏರಿದರು. 

ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ಜನತೆ ಬಳಿಲಿದ್ದಾರೆ. ನನಗೆ ಅನಾರೋಗ್ಯದ ಸಮಸ್ಯೆ ಇದೆ. ವೈದ್ಯರ ಸಲಹೆಗಳನ್ನು ಧಿಕ್ಕರಿಸಿ ನಾನು ರಾಜ್ಯದ ಜನತೆಯ ಹಿತ ಕಾಯಲು ಶ್ರಮಿಸುತ್ತಿದ್ದೇನೆ. ನನಗೆ ಒಂದು ಅವಕಾಶ ನೀಡಿ.
ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

ಆಗ ಅನುಭವದ ಕೊರತೆ ಇತ್ತು ತಾವು 20 ತಿಂಗಳ ಅವಧಿಯ ಮುಖ್ಯಮಂತ್ರಿ ಅಧಿಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ
ಮಾಡಿದ್ದೇನೆ. ಆದರೂ ಆಗ ನನಗೆ ರಾಜಕೀಯ ರಂಗದ ಅನುಭವ ಇರಲಿಲ್ಲ. ಆದರೆ ಇಂದು ರಾಜಕೀಯ ರಂಗವನ್ನು ಕರಗತ ಮಾಡಿಕೊಂಡಿದ್ದೇನೆ. ಕಳೆದ 11 ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರಗಳ ತಮ್ಮ ದುರಾಡಳಿತದಿಂದ ರಾಜ್ಯದ ಜನತೆಯ ಜೊತೆಗೆ ಚೆಲ್ಲಾಟ ಆಡಿದ್ದಾರೆ. ಇಂದು ರಾಜ್ಯದ ಜನತೆಗೆ ಒಳಿತು ಮಾಡಲು ಶ್ರಮಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದೇನೆ. ನನಗೆ ರಾಜ್ಯದ ಜನತೆ ಒಮ್ಮೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಮನವಿ ಮಾಡಿದರು.

ಬ್ಯಾರೇಜ್‌ ದೇವೇಗೌಡರ ಕೊಡುಗೆ ಚನ್ನಪಟ್ಟಣ ತಾಲೂಕಿನ ನೀರಾವರಿ ಭಗೀರಥ ಎಂದು ಸ್ವಯಂಘೋಷಣೆ ಮಾಡಿಕೊಂಡಿರುವ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್‌ರಿಗೆ ತಾಲೂಕಿನ ನಿಜವಾದ ಇತಿಹಾಸ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರು ಇಗ್ಗಲೂರು ಬ್ಯಾರೇಜ್‌ ನಿರ್ಮಾಣದಲ್ಲಿ ದೇವೇಗೌಡರ ಕೊಡುಗೆ ಏನೂ ಇಲ್ಲ ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ 1984ರಲ್ಲಿ ಇಗ್ಗಲೂರೂ ಬ್ಯಾರೇಜ್‌ಗೆ ಹೊರ ರೂಪದೊಂದಿಗೆ ಮರುಜೀವ ನೀಡಿದ್ದು ದೇವೇಗೌಡ ಎಂಬುದು ಮರೆಯದ ಇತಿಹಾಸ ಎಂದು ಟಾಂಗ್‌ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.