ಬೊಂಬೆನಾಡಿನಲ್ಲಿ ಕಾಂಗ್ರೆಸ್‌ ಪಕ್ಷ ಸದೃಢ: ಪಂಚಮಿ ಪ್ರಸನ್ನ ಪಿ.ಗೌಡ

ಸರ್ವ ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜಾಗಬೇಕಿದೆ

Team Udayavani, May 28, 2022, 6:24 PM IST

ಬೊಂಬೆನಾಡಿನಲ್ಲಿ ಕಾಂಗ್ರೆಸ್‌ ಪಕ್ಷ ಸದೃಢ: ಪಂಚಮಿ ಪ್ರಸನ್ನ ಪಿ.ಗೌಡ

ಚನ್ನಪಟ್ಟಣ: ತಾಲೂಕಿನ ಜನತೆ ಯಾವುದೇ ಸಂದರ್ಭದಲ್ಲಿ ಬಂದು ನನ್ನ ಭೇಟಿ ಮಾಡಿದರೂ, ನನ್ನ ಮನೆಯ ಬಾಗಿಲು ಸದಾ ನಿಮಗಾಗಿ ತೆರೆದಿರುತ್ತದೆ. ನಿಮ್ಮ ನೋವು, ನಲಿವುಗಳಿಗೆ ನಾನು ಸ್ಪಂದಿಸುತ್ತೇನೆ ಎಂದು ಕಾಂಗ್ರೆಸ್‌ ಮುಖಂಡ ಪಂಚಮಿ ಪ್ರಸನ್ನ ಪಿ.ಗೌಡ ತಿಳಿಸಿದರು.

ತಾಲೂಕಿನ ಹೊಂಗನೂರು ಜಿಪಂ ವ್ಯಾಪ್ತಿಯ ಸುಣ್ಣಘಟ್ಟ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಯೋಜಿಸಿದ್ದ ಕಾಂಗ್ರೆಸ್‌ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೊಂಗನೂರು, ನೀಲಕಂಠನಹಳ್ಳಿ ಗ್ರಾಮ ಸೇರಿ ಜಿಪಂ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಪಕ್ಷದಿಂದ ದೂರವಾಗಿದ್ದ ಮತ್ತು ಜೆಡಿಎಸ್‌. ಬಿಜೆಪಿ ಪಕ್ಷದ ಮುಖಂಡರನ್ನು ಕಾಂಗ್ರೆಸ್‌ ಪಕ್ಷಕ್ಕೆ ಆಹ್ವಾನ ನೀಡಿದ ಅವರು, ಬೊಂಬೆನಾಡಿನಲ್ಲಿ ಕಾಂಗ್ರೆಸ್‌ ಪಕ್ಷ ಸದೃಢವಾಗಿದೆ. ಯಾವುದೇ ಒತ್ತಡಕ್ಕೆ ಮಣಿಯದೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುಗಾಗಿ ಪಣ ತೊಡಬೇಕೆಂದು ಮನವಿ ಮಾಡಿದರು.

ಪಕ್ಷ ಸಂಘಟನೆ ಮಾಡಿ: ಮುಂದಿನ ವರ್ಷ ಬರುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ಕರ್ತರು ಪಕ್ಷ ಸಂಘಟನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುಬೇಕು. ಹಿರಿಯ ಹಾಗೂ ಯುವ ಮುಖಂಡರು ಸೇರಿದಂತೆ ಸರ್ವ ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜಾಗಬೇಕಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿಜಾಮುದ್ಧಿನ್‌ ಪೌಜ್‌ದಾರ್‌ ಮಾತನಾಡಿ, ಕಳೆದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾದ ಕೃಷ್ಣಪ್ಪ, ಡಿ.ಟಿ.ರಾಮು, ಸಾದತ್‌ ಅಲಿಖಾನ್‌ ಸೇರಿದಂತೆ ಪಕ್ಷದ ಶಾಸಕರನ್ನು ನೆನಪು ಮಾಡಿಕೊಳ್ಳಬೇಕಾಗಿದೆ. ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಸನ್ನ ಜಯ ಗಳಿಸುತ್ತಾರೆ ಎಂಬ ವಿಶ್ವಾಸದೆ ಎಂದು ತಿಳಿಸಿದರು.

ಚುನಾವಣೆ ಎದುರಿಸಲು ಸಿದ್ಧ: ಕುಕ್ಕೂಟ ಮಹಾ ಮಂಡಳಿಯ ರಾಜ್ಯಾಧ್ಯಕ್ಷ ಡಿ.ಕೆ. ಕಾಂತರಾಜು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮತ್ತು ಪ್ರಚಾರ ಸುತಿ ಅಧ್ಯಕ್ಷರಾದ ಎಂ.ಬಿ.ಪಾಟೀಲ್‌ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲು ನಾವು ಸಿದ್ಧರಿದ್ದು, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಎಲ್ಲ ಮುನ್ಸೂಚನೆ ಇದೆ ಎಂಬ ಮಾತಿಗಳು ಲಭ್ಯವಿದೆ ಎಂದು ತಿಳಿಸಿದರು.

ರಾಜ್ಯದಲ್ಲೇ ಗಮನಾರ್ಹ: ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುನೀಲ್‌ಕುಮಾರ್‌ ಮಾತನಾಡಿ, ಕಾಂಗ್ರೆಸ್‌ ನಡೆ ಹಳ್ಳಿಯ ಕಡೆ ಎಂಬ ನೂತನ ಕಾರ್ಯಕ್ರಮ ನಮ್ಮ ತಾಲೂಕಿನಲ್ಲಿ ಯಶಸ್ವಿಯಾಗಲಿದ್ದು, ಇದು ಇಡೀ ರಾಜ್ಯದಲ್ಲೇ ಗಮನಾರ್ಹವಾಗಲಿದೆ ಎಂದ ಅವರು, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಉತ್ಸಾಹಿ ಯುವನಾಯಕ ಹಾಗೂ ಸಂಘಟನಾ ಕೌಶಲ್ಯರುವ ಪ್ರಸನ್ನ ಪಿ.ಗೌಡ ವಹಿಸಲಿದ್ದು, ಅವರಿಗೆ ಬೆಂಬಲವಾಗಿ ನಾವೆಲ್ಲರೂ ಸಹಕರಿಸೋಣ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಕೆಪಿಸಿಸಿ ಸದಸ್ಯ ಟಿ.ಕೆ.ಯೋಗೇಶ್‌(ಪಾಪು), ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌. ಆರ್‌. ಪ್ರಮೋದ್‌, ಮಾಜಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಶಿವಮಾಧು, ಹಾಪ್‌ಕಾಮ್ಸ್‌ ನಿರ್ದೇಶಕ  ಬೋರ್‌ವೆಲ್‌ ರಂಗನಾಥ್‌, ಯುವ ಮುಖಂಡ ಚಂದ್ರಸಾಗರ್‌, ತಾಪಂ ಮಾಜಿ ಸದಸ್ಯ ಸುರೇಶ್‌, ಕಾಂಗ್ರೆಸ್‌ ಮುಖಂಡ ಅಕ್ಕೂರು ಹೊಸಹಳ್ಳಿ ಪುಟ್ಟರಾಜು, ಕಾಂಗ್ರೆಸ್‌ ಯುವ ಮುಖಂಡ ವಿವೇಕ್‌, ಎಸ್‌ಸಿ, ಎಸ್ಟಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಸುಣ್ಣಘಟ್ಟ ಪಾಪಣ್ಣ, ಕಾಂಗ್ರಸ್‌ ಮಹಿಳಾ
ಮುಖಂಡರಾದ ಕಾವೇರಮ್ಮ, ಕೋಕಿಲರಾಣಿ, ರೇಣುಕಮ್ಮ, ಯುವ ಮುಖಂಡ ಪ್ರೇಮ್‌ ಚಂದ್ರಸಾಗರ್‌, ಮಾಸ್ತಿಗೌಡ, ಮಾಜಿ ನಗರ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌, ನಗರಸಭೆ ಸದಸ್ಯ ವಾಸಿಲ್‌ ಆಲಿಖಾನ್‌, ಬುಕ್ಕಸಾಗರ ಕುಮಾರ್‌, ಫ‌ರೀದ್‌, ಅಕ್ಕೂರು ಪುಟ್ಟರಾಜು, ವೈಟಿಹಳ್ಳಿ ಶಿವು, ಮಹಾಲಿಂಗ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.