ಕಾಂಗ್ರೆಸ್‌ ಕುಂಕುಮ ಭಾಗ್ಯಕ್ಕೆ ತಿರುಗೇಟು


Team Udayavani, Dec 22, 2017, 6:00 PM IST

ram-1.jpg

ರಾಮನಗರ: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರೆ ರೈತರ ಪತ್ನಿಯರ ಕುಂಕುಮ ಉಳಿಸುವ ಕಾರ್ಯಕ್ರಮಗಳು ಜಾರಿಯಾಗುತ್ತವೆ ಎಂದು ಜಿಪಂ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಎ.ಮಂಜು ಕಾಂಗ್ರೆಸ್‌ ಇತ್ತೀಚೆಗೆ ಹಮ್ಮಿಕೊಂಡಿದ್ದ ಅರಿಶಿನ-ಕುಂಕುಮ ಭಾಗ್ಯ ಕಾರ್ಯಕ್ರಮಕ್ಕೆ ತಿರುಗೇಟು ನೀಡಿದರು.

ತಾಲೂಕಿನ ಬಿಡದಿ ಬಳಿಯ ರೆಸಾರ್ಟ್‌ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೈರಮಂಗಲದಲ್ಲಿ ಇತ್ತೀಚೆಗೆ ಕಾಂಗ್ರೆಸ್‌ ಪ್ರಮುಖರು ಹಮ್ಮಿಕೊಂಡಿದ್ದ ಮಹಿಳೆಯರಿಗೆ ಅರಿಶಿನ-ಕುಂಕುಮ ಭಾಗ್ಯ ಕಾರ್ಯಕ್ರಮಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದರು. ಮಹಿಳೆಯರಿಗೆ ಅರಿಶಿನ-ಕುಂಕುಮ ಭಾಗ್ಯದ ಹೆಸರಿನಲ್ಲಿ ಸೀರೆ ವಿತರಿಸಿದ್ದು ಯಾಕೆ ಎಂದು ಕಾಂಗ್ರೆಸ್ಸಿಗರೇ ಪ್ರಶ್ನಿಸಿ ಕೊಳ್ಳಲಿ ಎಂದರು.

ಯೋಜನೆ ರೂಪಿಸಿ: ಎಚ್‌.ಡಿ.ಕುಮಾರಸ್ವಾಮಿ ಮುಂದಿನ ಸಿಎಂ ಆದರೆ ರೈತರ ಎಲ್ಲಾ ಸಾಲ ಮನ್ನಾ ಮಾಡುವುದಾಗಿ, ಜೊತೆಗೆ ರೈತರನ್ನು ಸದೃಢ ಮಾಡುವ ಯೋಜನೆಗಳನ್ನು ಜಾರಿ ಮಾಡಲಿದ್ದಾರೆ. ಈ ಮೂಲಕ ರೈತರು ಆತ್ಮಹತ್ಯೆಗೆ ಶರಣಾಗುವುದನ್ನು ತಪ್ಪಿಸುವುದು ಕುಮಾರಸ್ವಾಮಿ ಅವರ ಉದ್ದೇಶ.

ರೈತರ ಪತ್ನಿಯರ ಕುಂಕುಮವನ್ನು ಶಾಶ್ವತವಾಗಿ ಉಳಿಸುವಂತಹ ಯೋಜನೆಗಳು ಇಂದಿನ ಅಗತ್ಯತೆ, ಆದರೆ ಕಾಂಗ್ರೆಸ್‌ ಸರ್ಕಾರ ಇಂತಹ ಯೋಜನೆಗಳನ್ನು ರೂಪಿಸಲೇ ಇಲ್ಲ, ಕೇವಲ ಸೀರೆ, ಕುಂಕುಮ, ಅರಿಶಿನ ಕೊಟ್ಟರೆ ಸಾಕೆ ಎಂದು ಪ್ರಶ್ನಿಸಿದರು. 

ರಾಜ್ಯದಲ್ಲಿ ನೂರಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದರೆ. ಅವರನ್ನು ಉಳಿಸಿಕೊಳ್ಳುವ ಯಾವ ಯೋಜನೆಯೂ ಈ ಸರ್ಕಾರ ರೂಪಿಸಲಿಲ್ಲ. ಅವರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಬೆಲೆ ಕಲ್ಪಿಸಿಲ್ಲ. ಶಾಶ್ವತ ನೀರಾವರಿ ಯೋಜನೆಗಳು ಜಾರಿಯಾಗಿಲಿಲ್ಲ. ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಿಸುವುದರ ಮೂಲಕ ರೈತರನ್ನು ಸದೃಢಗೊಳಿಸಲು ಸಾಧ್ಯವಾಯಿತೆ ಎಂದು ಅವರು ಪ್ರಶ್ನಿಸಿದರು. 

ಶಕ್ತಿ ಪ್ರದರ್ಶನ ಹೌದು: ಡಿಸೆಂಬರ್‌ 23ರಂದು ಬೈರಮಂಗಲದಲ್ಲಿ ತಮ್ಮ ನೇತೃತ್ವದಲ್ಲಿ ನಡೆಯುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜನೆ ರಾಜಕೀಯ ಶಕ್ತಿ ಪ್ರದರ್ಶನವೂ ಹೌದು. ಆದರೆ, ಅದಕ್ಕಿಂತ ಹೆಚ್ಚಾಗಿ ಆ ಭಾಗದ ಜನಕ್ಕೆ ವೈದ್ಯಕೀಯ ಸೇವೆ ತೀರಾ ಅಗತ್ಯವಿದೆ. ಹೀಗಾಗಿ ಸ್ಪಂದಿಸುತ್ತಿರುವುದಾಗಿ ಎ.ಮಂಜು ಸ್ಪಷ್ಟಪಡಿಸಿದರು.

ಈ ವೇಳೆ ಬೈರಮಂಗಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಿ.ರಾಮಯ್ಯ, ಜಿಪಂ ಸದಸ್ಯ ಮಂಜುನಾಥ್‌, ಬಿಡದಿ ಪುರಸಭೆಯ ಉಪಾಧ್ಯಕ್ಷ ಸಿ.ಉಮೇಶ್‌, ಸದಸ್ಯ ಬಿ.ಎಂ.ರಮೇಶ್‌ ಕುಮಾರ್‌, ಪ್ರಮುಖರಾದ ಶೇಷಪ್ಪ, ಸೋಮೇಗೌಡ, ಶಿವರಾಮಯ್ಯ, ಹೆಜ್ಜಾಲ ಶಾಂತಕುಮಾರ್‌, ಯೋಗಾನಂದ ಭಾಗವಹಿಸಿದ್ದರು. 

ಶನಿವಾರ ಆರೋಗ್ಯ ಶಿಬಿರ: ಡಿಸೆಂಬರ್‌ 23 ರಂದು ತಾಲೂಕಿನ ಬಿಡದಿ ಹೋಬಳಿಯ ಬೈರಮಂಗಲದಲ್ಲಿ ರಾಷ್ಟ್ರಕವಿ ಕುವೆಂಪು, ವರನಟ ಡಾ.ರಾಜಕುಮಾರ್‌ ಸಮಾನ ಮನಸ್ಕರ ಸಮಿತಿ ಮತ್ತು ಪೂಜಾರಿ ಪಾಳ್ಯ ಜನಸೇವಾ ಟ್ರಸ್ಟ್‌ ವತಿಯಿಂದ ಆಚರಿಸುತ್ತಿರುವ ಮೊದಲನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೃಹತ್‌ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಎ.ಮಂಜು ತಿಳಿಸಿದ್ದಾರೆ.

ಸಿಎಂ ಕಾಲಿಗೆ ಚಕ್ರ ಕಟ್ಟಿಕೊಂಡಿದ್ದಾರೆ!

ಜನವರಿ 3ರಂದು ಚನ್ನಪಟ್ಟಣ ಮತ್ತು ಮಾಗಡಿ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಎ.ಮಂಜು, ನಾಲ್ಕೂವರೆ ವರ್ಷದ ನಂತರ ಸಿಎಂ ಸಿದ್ದರಾಮಯ್ಯ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡಿದ್ದಾರೆ.

ಇಲ್ಲಿಯವರೆಗೂ ಅವರು ಕೇವಲ ವಿಧಾನಸೌಧ ಮತ್ತು ಬೆಂಗಳೂರಿನಲ್ಲೇ ಕಾಲ ಕಳೆಯುತ್ತಿದ್ದರು. ಈಗ ರಾಜ್ಯ ಸುತ್ತುತ್ತಿದ್ದಾರೆ ಎಂದು ಟೀಕಿಸಿದರು. ಮಾಗಡಿಗೆ ಯಾವ ವಿಶೇಷ ಅನುದಾನವೂ ಬಂದಿಲ್ಲ. ಅಭಿವೃದ್ಧಿ ಪ್ರಾಧಿಕಾರದ ಹಣದಲ್ಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಈಗಾಗಲೇ ಈ ಕಾಮಗಾರಿಗಳಿಗೆ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೇ ಪೂಜೆ ಮಾಡಿಯಾಗಿದೆ, ಸಿಎಂ ಮತ್ತೆ ಅದೇ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ. ಬಾಕಿ ಉಳಿದಿರುವ ಕಾಮಗಾರಿಗಳಿಗೆ ಅಧಿಕಾರಿಗಳ ಮೇಲೆ ಒತ್ತಡ ತಂದು ಸಿಎಂ ಉದ್ಘಾಟಿಸುತ್ತಿದ್ದಾರೆ ಎಂದರು

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.