ಕೊರೊನಾ ಭೀತಿ: ಹೋಳಿ ಹಬ್ಬ ನಿರಸ


Team Udayavani, Mar 10, 2020, 5:55 PM IST

rn-tdy-1

ರಾಮನಗರ: ಕೊರೊನಾ ವೈರಾಣು ಭೀತಿ ಕಾರಣ ಸೋಮವಾರ ಜಿಲ್ಲಾ ಕೇಂದ್ರ ರಾಮನಗರದಲ್ಲಿ ರಂಗಿನಾಟಕ್ಕೆ ಎಂದಿನ ಹುರುಪು ಕಾಣಿಸಲಿಲ್ಲ. ಪ್ರತಿ ವರ್ಷ ಯುವಕರ ತಂಡಗಳು ನಗರವನ್ನೆಲ್ಲ ದ್ವಿಚಕ್ರವಾಹನಗಳಲ್ಲಿ ಸುತ್ತಾಡಿ ತಮ್ಮ ಸ್ನೇಹಿತರು, ಬಂಧುಗಳಿಗೆ ಬಣ್ಣವನ್ನು ಹಚ್ಚಿ ಸಂಭ್ರಮಿಸುತ್ತಿದ್ದ ದೃಶ್ಯ ಸೋಮವಾರ ನಗರದಲ್ಲಿ ಕಾಣಸಿಗಲಿಲ್ಲ. ಕೆಲವೊಂದು ಯುವಕರ ಗುಂಪುಗಳು ಮಾತ್ರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹೋಳಿ ಹಬ್ಬದ ಬಗ್ಗೆ ಜನಸಾಮಾನ್ಯರ ಗಮನ ಸೆಳೆದರು.

ಕಾಮನ ಹಬ್ಬ ಆಯಾ ಬಡಾವಣೆಗಳು ಮತ್ತು ತಮ್ಮ ಮನೆಗಳಿಗೆ ಮಾತ್ರ ಸೀಮಿತವಾಗಿತ್ತು. ಮಧ್ಯಾಹ್ನದ ವೇಳೆಗೆ ಸಂಭ್ರಮವೆಲ್ಲ ಮುಗಿದಿತ್ತು. ಹೋಳಿ ಹಬ್ಬಕ್ಕೆ ಅಗತ್ಯವಾಗಿ ಬೇಕಾಗಿರುವ ಬಣ್ಣ, ಬಣ್ಣದ ಪುಡಿ ನಿರೀಕ್ಷೆಯಂತೆ ಮಾರಾಟ ವಾಗಿಲ್ಲ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಶೇ. 30 ರಿಂದ 40ರಷ್ಟು ಮಾತ್ರ ರಂಗಿನಾಟ ನಡೆದಿದೆ ಎಂದು ವ್ಯಾಪಾರಸ್ಥರು ಪ್ರತಿಕ್ರೀಯಿಸಿದ್ದಾರೆ.

ಪಿಯುಸಿ ಪರೀಕ್ಷೆಯೂ ಕಾರಣ: ಕೊರೊನಾ ಭೀತಿಯ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವುದು. ಹೋಳಿ ಹಬ್ಬದ ಸಂಭ್ರಮ ಕ್ಷೀಣಿಸಲು ಕಾರಣವಾಗಿದೆ ಎಂದು ಕೆಲವು ಯುವಕರು ಹೇಳಿದ್ದಾರೆ. 7ನೇ ತರಗತಿ ಮತ್ತು 10ನೇ ತರಗತಿ ಪರೀಕ್ಷೆಗಳು ಸಹ ಸದ್ಯ ದಲ್ಲೇ ಎದುರಾಗಲಿದ್ದು, ಬಹಳಷ್ಟು ವಿದ್ಯಾರ್ಥಿ ಗಳು ತಯಾರಿಯಲ್ಲಿರುವುದರಿಂದ ಹೋಳಿಯಲ್ಲಿ ಭಾಗವಹಿಸಲಿಲ್ಲ ಎಂದು ಗೊತ್ತಾಗಿದೆ. ಬಣ್ಣದಾಟದ ಸಂಪ್ರದಾಯ ಇರುವ ಕುಟುಂಬ ಗಳು ಕೊರೊನಾ ಭೀತಿಯಿಂದ ತಮ್ಮ ಸಂಭ್ರಮ ವನ್ನು ಮನೆಗೆ ಮಾತ್ರ ಸೀಮಿತಿ ಮಾಡಿಕೊಂಡಿದ್ದರು. ಹೆಣ್ಣುಮಕ್ಕಳು ಹೆಚ್ಚಾಗಿ ಕಾಣಲಿಲ್ಲ.

ನಗರದಲ್ಲಿ ಕಾಮಣ್ಣನಿಗೊಂದು ವೃತ್ತ! :  ನಗರದ ಎಂ.ಜಿ.ರಸ್ತೆಯಲ್ಲಿ ಕಾಮಣ್ಣನ ಹೆಸರಿನ ವೃತ್ತವಿದೆ. ಕಾರಣ ಇಲ್ಲಿ ಪ್ರತಿ ವರ್ಷ ಕಾಮ ದಹನ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ. ಇಲ್ಲಿ ರತಿ, ಮನ್ಮಥರ ಪ್ರತಿಮೆಗಳನ್ನು, ಶಿವನು ತನ್ನ ಮೂರನೇ ಕಣ್ಣನ್ನು ತೆರೆದು ಮನ್ಮಥನನ್ನು ದಹಿಸುವ ಪ್ರತಿಮೆಗಳನ್ನು ಸ್ಥಾಪಿಸಲಾಗಿತ್ತು. ಸೋಮವಾರ ರಾತ್ರಿ ಕಾಮ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.