ಪ್ರಧಾನಿ ನರೇಂದ್ರ ಮೋದಿಗೆ ದೇಶವೇ ಕುಟುಂಬ


Team Udayavani, Apr 16, 2019, 5:07 PM IST

ram-1
ಕನಕಪುರ: ನರೇಂದ್ರ ಮೋದಿ ದೇಶವನ್ನೇ ತಮ್ಮ ಕುಟುಂಬವೆಂದು ಭಾವಿಸಿ, ದೇಶಕ್ಕಾಗಿ ದುಡಿಯುತ್ತಿದ್ದಾರೆ. ಪರಸ್ಪರ ವಿರೋಧಿಗಳಾಗಿದ್ದ ಜೆಡಿಎಸ್‌ -ಕಾಂಗ್ರೆಸ್‌ ದೇಶಕ್ಕಾಗಿ ಮೈತ್ರಿ ಮಾಡಿಕೊಂಡಿಲ್ಲ. ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಬೆಂ. ಗ್ರಾ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣಗೌಡ ದೂರಿದರು.
ತಾಲೂಕಿನ ಹುಣಸನಹಳ್ಳಿ, ಹೊಸದುರ್ಗ, ಕೋಡಿಹಳ್ಳಿ, ದೊಡ್ಡಾಲಹಳ್ಳಿ, ಸಾತನೂರು ಗ್ರಾಮಗಳಲ್ಲಿ ನಡೆಸಿದ
ಚುನಾವಣಾ ಪ್ರಚಾರದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ದೇಶವನ್ನು ಉಳಿಸುವುದಕ್ಕಾಗಿಯೇ ನಾವು ಮೋದಿ
ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ. ಆದರೆ, ಜೆಡಿಎಸ್‌, ಕಾಂಗ್ರೆಸ್‌ ಅಧಿಕಾರಕ್ಕಾಗಿ, ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಮತ ಕೇಳುತ್ತಿದ್ದಾರೆ.
ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿ ಸರ್ಕಾರ ಇರಬೇಕಾದರೆ ಮೈತ್ರಿ ಅಭ್ಯರ್ಥಿಗೆ ಮತನೀಡಲೇಬೇಕು ಎಂದು ನೇರವಾಗಿ ಮತದಾರರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಅಭ್ಯರ್ಥಿಗಳು ಅಭಿವೃದ್ಧಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿಲ್ಲ, ಧರ್ಮಗಳ ಹೆಸರಿನಲ್ಲಿ, ಧರ್ಮದ ವಿರುದ್ಧ ಎತ್ತಿಕಟ್ಟುವ ಮೂಲಕ ಮತ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜನತೆ ಮೈತ್ರಿ ಅಭ್ಯರ್ಥಿ ಮಾತು ಕೇಳಲ್ಲ: ಕ್ಷೇತ್ರಗಳಲ್ಲಿ ಜನತೆ ಇವರ ಮಾತು ಕೇಳುವ ಸ್ಥಿತಿಯಲ್ಲಿಲ್ಲ. ಪ್ರಬುದ್ಧರಾಗಿರುವ
ಮತದಾರರು ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿರುವುದನ್ನು ಎಲ್ಲಾ ಕಡೆ ಪ್ರಶ್ನಿಸುತ್ತಿದ್ದಾರೆ. ಎಲ್ಲಾ ಕಡೆ ದೇಶಕ್ಕಾಗಿ ಬಿಜೆಪಿಗೆ ಮತ ಕೊಡುವುದಾಗಿ ಹೇಳುತ್ತಿದ್ದಾರೆ. ಆದ್ದರಿಂದ ಹತಾಶರಾಗಿ ರುವ ಜೆಡಿಎಸ್‌, ಕಾಂಗ್ರೆಸ್‌ ಜನರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ನೀಡಲು ಜನತೆ ತೀರ್ಮಾನಿಸಿದ್ದು, ಚುನಾವಣಾ ಪ್ರಚಾರದ ವೇಳೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಎಷ್ಟೋ ಜನತೆ ಹೊರಗಡೆ ಬರಲಾಗದೆ ಮನೆಯಲ್ಲೇ ಉಳಿದಿದ್ದು, ಮತದಾನದ ವೇಳೆ ಬಿಜೆಪಿಗೆ ಮತ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ: ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌ ಮಾತನಾಡಿ, ಡಿ.ಕೆ.ಸುರೇಶ್‌ ತಾಲೂಕಿನಲ್ಲಿ
ಮಾಡಿರುವ ಅಭಿವೃದ್ಧಿಯಲ್ಲಿ ಶೇ.75ರಷ್ಟು ಕೇಂದ್ರ ಸರ್ಕಾರದ ಅನುದಾನವಾಗಿದೆ.
ಕೇಂದ್ರ ಸರ್ಕಾರದಿಂದ ಏನು ಅನುಕೂಲವಾಗಿದೆ, ಅನುದಾನ ಬಂದಿದೆ ಎಂಬುದನ್ನು ಜನತೆಗೆ ಅವರು ತಿಳಿಸುತ್ತಿಲ್ಲ. ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ತಾಲೂಕಿಗೆ ಎಷ್ಟು ಅನುದಾನ ಬಂದಿತ್ತು, ಮೋದಿ ಆಡಳಿತದಲ್ಲಿ ಎಷ್ಟು ಅನುದಾನ
ಸಿಕ್ಕಿದೆ ಎಂಬುದನ್ನು ತಾಲೂಕಿನ ಜನತೆಗೆ ಅವರು ತಿಳಿಸಬೇಕು ಎಂದರು.
ಮೈತ್ರಿ ಸರ್ಕಾರದ ವಿರೋಧಿ ಅಲೆ: ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗನ್ನಾಥ್‌ .ಎಸ್‌ ಮಾತನಾಡಿ, ತಾಲೂಕಿನಲ್ಲಿ ಮೈತ್ರಿ ಸರ್ಕಾರದ ವಿರೋಧಿ ಅಲೆಯಿದೆ. ನರೇಂದ್ರ ಮೋದಿ ಪರವಾದ ಅಲೆಯಿದ್ದು, ಈ ಬಾರಿ ಬಿಜೆಪಿಗೆ ಹೆಚ್ಚಿನ ಮತಗಳು
ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ್‌, ಹಿಂದುಳಿದ ವಿಭಾಗದ ಜಿಲ್ಲಾ ಅಧ್ಯಕ್ಷ ನಾಗರಾಜು, ತಾಲೂಕು ಗ್ರಾಮಾಂತರ ಅಧ್ಯಕ್ಷ ಶಿವರಾಮ್‌, ನಗರ ಘಟಕದ ಅಧ್ಯಕ್ಷ ನಾಗಾನಂದ, ಮುಖಂಡರಾದ ಅಚ್ಚಲು ಶಿವರಾಜು, ಗುರುಗೌಡ, ಪ್ರದೀಪ, ಮುನಿಲಿಂಗೇಗೌಡ, ಮಂಜು, ಸ್ವಾಮಿ, ಮದನ್‌ಮೋಹನ್‌, ಡಿ.ಶ್ರೀನಿವಾಸ್‌, ರಾಜೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.