ಕೋವಿಡ್‌ 19ಗೆ ಮಾಗಡಿಯಲ್ಲಿ ಮತ್ತೊಂದು ಬಲಿ


Team Udayavani, Jun 25, 2020, 6:41 AM IST

corona-magadi

ರಾಮನಗರ/ಮಾಗಡಿ/ಚನ್ನಪಟ್ಟಣ: ಜಿಲ್ಲೆಯಲ್ಲಿ ಬುಧವಾರ ಕೋವಿಡ್‌-19 ವೈರಸ್‌ನ 36 ಹೊಸ ಪ್ರಕರಣಗಳು ಪತ್ತೆ ಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 148ಕ್ಕೆ ಏರಿದೆ. ಮಾಗಡಿಯಲ್ಲಿ 60 ವರ್ಷ ವ್ಯಕ್ತಿಯೊಬ್ಬರು  ಕೋವಿಡ್‌ -19 ಸೋಂಕಿಗೆ ಬಲಿಯಾಗಿದ್ದಾರೆ. ಬುಧವಾರ ಮಾಗಡಿ ತಾಲೂಕಿನಲ್ಲಿ 11, ರಾಮನಗರದಲ್ಲಿ 5, ಕನಕಪುರದಲ್ಲಿ 17 ಮತ್ತು ಚನ್ನಪಟ್ಟಣದಲ್ಲಿ 3 ಹೊಸ ಪ್ರಕರಣ ಗಳು ಪತ್ತೆಯಾಗಿವೆ.

ಬುಧವಾರ ಪ್ರಕಟವಾದ ಪರೀಕ್ಷಾ ಫ‌ಲಿತಾಂಶಗಳ ಪೈಕಿ 131 ಫ‌ಲಿತಾಂಶಗಳು ನೆಗಟಿವ್‌ ಆಗಿವೆ. ಒಟ್ಟಾರೆ ಮಾಗಡಿಯಲ್ಲಿ 39, ರಾಮನಗರದಲ್ಲಿ 27, ಕನಕ ಪುರದಲ್ಲಿ 55 ಮತ್ತು ಚನ್ನಪಟ್ಟಣದಲ್ಲಿ 27 ಪ್ರಕರಣಗಳು ಪತ್ತೆ ಯಾಗಿವೆ. ಜಿಲ್ಲೆಯಲ್ಲಿ ಒಟ್ಟು 4 ಮಂದಿ  ಸಾವನ್ನಪ್ಪಿದ್ದಾರೆ  (ಜಿಲ್ಲೆಯ ಮೂಲದ ಇಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿ ದ್ದಾರೆ. ಇದು ಸೇರಿದರೆ 6 ಪ್ರಕರಣಗಳಾಗುತ್ತವೆ).

ಮಾಗಡಿಯಲ್ಲಿ ವೃದ್ಧ ಬಲಿ: ಮಾಗಡಿಯಲ್ಲಿ ಕೋವಿಡ್‌ 19ಗೆ ಮತ್ತೊಂದು ಬಲಿಯಾಗಿದೆ. ಪಟ್ಟಣದ ರಾಜ್‌ಕುಮಾರ್‌ ರಸ್ತೆಯ 60 ವರ್ಷದ ವ್ಯಕ್ತಿ ಬಲಿಯಾಗಿದ್ದು, ತಾಲೂಕಿನಲ್ಲಿ ಇದು 3ನೇ ಬಲಿಯಾಗಿದೆ. ಕಳೆದ ವಾರವಷ್ಟೆ ಕೋವಿಡ್‌  19 ಸೋಂಕಿನಿಂದಾಗಿ ರಾಮನಗರ ಕೋವಿಡ್‌ ಆಸ್ಪತ್ರೆಗೆ ದಾಖ ಲಿಸ ಲಾಗಿತ್ತು. ಉಸಿರಾಟ ತೊಂದರೆ ಹೆಚ್ಚುತ್ತಿದ್ದಂತೆ ಬೆಂಗ ಳೂರಿನ ವಿಕ್ಟೋರಿಯಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸ ಲಾಗಿತ್ತು.

ಅಲ್ಲಿ ಚಿಕಿತ್ಸೆ ಫ‌ಲಕಾರಿ ಯಾಗದೆ  ವ್ಯಕ್ತಿ ಮೃತಪಟ್ಟಿದ್ದಾರೆ. ಜತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 12 ಮಂದಿಗೆ ಕೋವಿಡ್‌ 19 ಪಾಸಿಟವ್‌ ಬಂದಿದ್ದು, ಅವರನ್ನು ರಾಮನಗರ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬುಧವಾರ ಸಹ ಪ್ರಾಥಮಿಕ ಕಾಂಟ್ಯಾಕ್ಟ್ ಹೊಂದಿದ್ದ  ಇನ್ನೂ ನಾಲ್ಕು ಮಂದಿಗೆ ಕೋವಿಡ್‌ 19 ಪಾಸಿಟಿವ್‌ ಕಾಣಿಸಿಕೊಂಡಿದೆ ಎಂಬ ಮಾಹಿತಿ ತಿಳಿದು ಬಂದಿದೆ. ತಿರುಮಲೆ, ವೆಂಕಟಪ್ಪ ಗಲ್ಲಿ, ರಾಜ್‌ಕುಮಾರ್‌ ರಸ್ತೆ ಸೀಲ್‌ಡೌನ್‌ ಆಗಿದೆ. ಪುರ ಸಭೆಯಿಂದ ಜಾಗೃತಿ  ಮೂಡಿಸಲಾಗುತ್ತಿದೆ.

ಪಟ್ಟಣದಲ್ಲಿ ಸ್ವಯಂ ಪ್ರೇರಿತ ವಾಗಿ ಜನರೇ ಲಾಕ್‌ಡೌನ್‌ ವಿಧಿಸಿಕೊಂಡಿದ್ದು, ಅಂಗಡಿ, ಹೋಟೆಲ್‌, ಮಾರುಕಟ್ಟೆ, ಬೀದಿ ವ್ಯಾಪಾರಿ ಗಳು, ಲಾಕ್‌ ಡೌನ್‌ಗೆ ಸ್ಪಂದಿಸುತ್ತಿದ್ದಾರೆ. ಆದರೆ ಹೊರಗಡೆಯವರನ್ನು ತಡೆಯಲಾಗುತ್ತಿಲ್ಲ. ಹೀಗಾಗಿ ಎಲ್ಲರೂ ಸ್ವಯಂ ಪ್ರೇರಣೆ  ಯಿಂದ ಲಾಕ್‌ಡೌನ್‌ಗೆ ಸಹರಿಸಬೇಕಿದೆ ಎಂದು ನಾಗರಿಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯುವತಿಗೆ ಕೋವಿಡ್‌ 19 ಸೋಂಕು ದೃಢ: ಪಟ್ಟಣದ ಕುವೆಂಪು ನಗರ 5ನೇ ಅಡ್ಡರಸ್ತೆಯಲ್ಲಿ ಯುವತಿ ಯೊಬ್ಬರಿಗೆ ಕೋವಿಡ್‌ 19 ದೃಢಪಟ್ಟಿದ್ದು, ತಾಲೂಕು ಆಡಳಿತ ಆಕೆ ವಾಸವಿರುವ ಇಡೀ ಪ್ರದೇಶ ಸೀಲ್‌ಡೌನ್‌ ಮಾಡಿದೆ. ಸೋಂಕು ಹರಡಬಹುದಾದ ಹಿನ್ನೆಲೆಯಲ್ಲಿ 5ನೇ ಅಡ್ಡರಸ್ತೆಯನ್ನು ಕಂಟೈನ್ಮೆಂಟ್‌ ಜೋನ್‌ ಎಂದು ಗುರುತಿಸಲಾಗಿದ್ದು, ಸುತ್ತಲಿನ ಪ್ರದೇಶ ಬಫರ್‌ಜೋನ್‌ ಆಗಿ ಪರಿವರ್ತಿಸಲಾಗಿದೆ. ಯುವತಿ ಯನ್ನು ಚಿಕಿತ್ಸೆಗಾಗಿ ರಾಮನಗರ ಕೋವಿಡ್‌ ಆಸ್ಪತ್ರೆಗೆ  ದಾಖಲಿಸಲಾಗಿದೆ.

ಸೋಂಕಿತೆ ಸಂಪರ್ಕದಲ್ಲಿರುವ ಕುಟುಂಬಸ್ಥರು ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದವರನ್ನು ತಾಲೂಕಿನ ಹೊನ್ನಾಯ್ಕನಹಳ್ಳಿಯ ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಲಾಗಿದೆ. ಸೋಂಕಿತೆ ವಾರದ ಹಿಂದೆ ವಿವಾಹ  ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು ಎನ್ನಲಾಗಿದ್ದು, ಆಕೆಯ ಪೂರ್ಣ ಪ್ರವಾಸದ ವಿವರ ಪಡೆಯಲಾಗುತ್ತಿದೆ. ಪಟ್ಟಣದ ಮಧ್ಯಭಾಗಕ್ಕೆ ಕೋವಿಡ್‌ 19 ಕಾಲಿಟ್ಟಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಸೀಲ್‌ಡೌನ್‌  ಪ್ರದೇಶದ ನಿವಾಸಿಗಳು ಮನೆಯಿಂದ ಹೊರಬಾರದಂತೆ ಹಾಗೂ ಅವರಿಗೆ ಸಮಸ್ಯೆಯಾಗದಂತೆ ತಾಲೂಕು ಆಡಳಿತ ಕ್ರಮ ವಹಿಸಿದೆ.

ಟಾಪ್ ನ್ಯೂಸ್

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.